ಧಾರವಾಡ | ಧಾರಾಕಾರ ಸುರಿದ ಮಳೆ: ಜನಜೀವನ ಅಸ್ಥವ್ಯಸ್ತ

Date:

ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿದ್ದು, ಜನಜೀವನವು ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ನೀರಿನಿಂದ ಆವೃತಗೊಂಡಿವೆ.

ಮಳೆಯ ಅಬ್ಬರದಿಂದ ಬೆಣ್ಣೆ ಹಳ್ಳವು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳಿಗೂ ನೀರು ಆವರಿಸಿಕೊಂಡಿದೆ. ರೈತರು ಬೆಳೆದಿದ್ದ ಬೆಳೆಯೂ ನಾಶವಾಗಿದೆ. ಮಂಗಳವಾರ ಮತ್ತು ಬುಧವಾರ ಸುರಿದ ಧಾರಾಕಾರ ಮಳೆಯಿಂದಾಗಿ ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿವೆ.

ಕಡಲೆ ಬಿತ್ತನೆ ಮಾಡಲು ಒಂದು ಎಕರೆಗೆ ಸುಮಾರು 6ರಿಂದ 7,000 ಸಾವಿರ ರೂ. ಖರ್ಚಾಗುತ್ತದೆ. ಬಿತ್ತನೆ ಮಾಡಿದ ತಕ್ಷಣ ಭೂಮಿಗೆ ಮಳೆ ಬೇಕಿರುವುದಿಲ್ಲ. ನಾಲ್ಕೈದು ದಿನಗಳ ನಂತರ ಮಳೆಯಾದರೆ ಒಳ್ಳೆಯದು. ಒಂದು ವೇಳೆ ಬಿತ್ತನೆ ಮಾಡಿದ ತಕ್ಷಣವೇ ಮಳೆಯಾದರೆ ಬೀಜಗಳು ನಾಶವಾಗುತ್ತದೆ. ಇತ್ತೀಚೆಗೆ ಸುರಿದ ಮಳೆಯ ನೀರು ಭೂಮಿಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳನ್ನು ಕೊಚ್ಚಿಕೊಂಡು ಹೋಗಿದೆ. ಬಿತ್ತನೆ ಮಾಡಿದರವರ ಗತಿ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತೆಯೇ ಆಗಿದೆ. ಮಳೆ ನಿಂತ ನಂತರ ಮತ್ತೆ ಬಿತ್ತನೆ ಮಾಡಬೇಕಾದದ ಅನಿವಾರ್ಯತೆ ಎದುರಾಗಿದೆ. “ನಾವು ಎರಡು ದಿನದ ಹಿಂದೆ ಕಡಲೆ ಬಿತ್ತಿದ್ದೆವು. ನಿರಂತರ ಮಳೆಯಾದ ಕಾರಣ ನಾಶವಾಗಿದೆ. ಅದಕ್ಕೆ ಸರ್ಕಾರ ಪರಿಹಾರವೂ ನಮಗಿಲ್ಲ. ಮಳೆ ಯಾರ ಕೈಯಲ್ಲಿಯು ಇಲ್ಲವೆಂದು ಮುಂದೆ ಸಾಗುವುದು ರೈತನ ಜೀವನವಾಗಿದೆ” ಎಂದು ನವಲಗುಂದ ತಾಲೂಕಿನ ಯುವರೈತ ನಾಗರಾಜ ಕಾಳಿ ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕೆಲವು ಹಳ್ಳಿಗಳಿಗೆ ಸಂಚರಿಸುವ ಮಾರ್ಗಗಳಲ್ಲಿ ಅನೇಕ ಹಳ್ಳಗಳು ಹಾದುಹೋಗುತ್ತವೆ. ಅಂತಹ ಹಳ್ಳಕೊಳ್ಳಗಳು ನೀರಿನಿಂದ ಆವೃತಗೊಂಡರೆ ಮುಗೀತು. ಹೊಳೆಯ ಎರಡೂ ಬದಿಯ ವಾಹನ ಸವಾರರು, ಪಾದಚಾರಿಗಳು, ಶಾಲಾಮಕ್ಕಳು, ಸಾರಿಗೆ ಬಸ್‌ಗಳು ಹಳ್ಳದ ನೀರು ಕಡಿಮೆಯಾಗುವವರೆಗೂ ಸಂಚರಿಸಲು ಸಾಧ್ಯವಿಲ್ಲ. ಈಗ, ಅದೇ ಪರಿಸ್ಥಿತಿ ಎದುರಾಗಿದೆ.

IMG 20241010 212856

ಕುಂದಗೋಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ನೀರಿನಿಂದ ಆವೃತಗೊಂಡಿದೆ. ಕಚೇರಿ ಕೆಲಸಗಳು ಅಸ್ಥವ್ಯಸ್ತವಾಗಿವೆ. ಕಚೇರಿಗೆ ಬರುವವರು ಕಾಂಪೌಂಡ್ ಜಿಗಿದು ಬರುವ ಪರಿಸ್ಥಿತಿ ಸೃಷ್ಠಿಯಾಗಿದೆ. ತಾಲೂಕಿನ ಚಾಕಲಬ್ಬಿ ದೊಡ್ಡ ಹಳ್ಳ ತುಂಬಿ ಹರಿದ ಕಾರಣ ಕೆಲವೊತ್ತು ಸಂಚಾರ ಸ್ಥಗಿತಗೊಂಡಿತ್ತು. ಶಿರೂರು ಗ್ರಾಮದ ಬಳಿಯಿರುವ ಬೆಣ್ಣೆಹಳ್ಳವು ಹರಿದು ಬಂದಿದ್ದು, ಅಕ್ಕಪಕ್ಕದ ಹೊಲಗಳಿಗೂ ನೀರು ಆವರಿಸಿಕೊಂಡು ರೈತರ ಬೆಳೆ ನಾಶವಾಗಿದೆ.

ಮಳೆ ಅಬ್ಬರಿಸುತ್ತಿರುವ ಈ ಸಮಯದಲ್ಲಿ ಬೆಳೆ ನಾಶವಾದ ರೈತರಿಗೆ, ನೀರು ನುಗ್ಗಿದ್ದ ಮನೆಗಳಿಗೆ ಸರ್ಕಾರ ಕೂಡಲೇ ಪರಿಹಾರ ನೀಡಿದರೆ ಒಳ್ಳೆಯದು ಎಂದು ಜಿಲ್ಲೆಯ ಜನರು ಒತ್ತಾಯಿಸುತ್ತಿದ್ದಾರೆ. ಎರಡು ದಿನ ಧಾರಾಕಾರವಾಗಿ ಸುರಿದ ಮಳೆಗೆ ಜನರು ಆತಂಕಗೊಂಡಿದ್ದಾರೆ. ಮತ್ತೆ ಧಾರಾಕಾರ ಮಳೆ ಸುರಿದರೆ, ಪ್ರವಾಹವಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಮಳೆ ನೀರಿನಿಂದ ಆವೃತಗೊಂಡ ಲೋಕೋಪಯೋಗಿ ಇಲಾಖೆ ಕಚೇರಿ!

ಭಾರತೀಯ ಹವಾಮಾನ ಇಲಾಖೆ ವರದಿಯಂತೆ ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದ ಮುನ್ಸೂಚನೆ ಇದೆ. ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಿದ್ದಾರೆ. ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯ ಎಲ್ಲ ತಾಲೂಕಿನ ಅಧಿಕಾರಿಗಳಿಗೆ ಪ್ರಭಾರ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...