ಧಾರವಾಡ | ರಾಷ್ಟ್ರದ ಅಭಿವೃದ್ಧಿಗೆ ಪ್ರವಾಸೋಧ್ಯಮ ಪೂರಕವಾಗಿದೆ: ರಾಘವೇಂದ್ರ ಆನೇಗುಂದಿ

Date:

ವಿಶ್ವ ಪರ್ಯಟನೆ ಮಾಡುವುದರಿಂದ ಜೀವನಾನುಭವ ಹೆಚ್ಚುತ್ತದೆ ಮತ್ತು ಪ್ರವಾಸೋಧ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಪ್ರೆಸ್ಟೀಜ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ನಿರ್ದೇಶಕ ರಾಘವೇಂದ್ರ ಆನೆಗುಂದಿ ಹೇಳಿದರು.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಧಾರವಾಡ ಪ್ರೆಸ್ಟೀಜ್ ಇನ್ಸ್ಟೀಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ರಾಜ್ಯ ಮತ್ತು ದೇಶದಲ್ಲಿ ಸಾವಿರಾರು ಪ್ರವಾಸಿ ತಾಣಗಳು ಇವೆ ಮತ್ತು ಲಕ್ಷಾಂತರ ಪ್ರವಾಸಿಗರ ಸಂಚರಿಸುತ್ತಾರೆ, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು ಇಂದು ಹಂಪಿ ಮತ್ತು ಇನ್ನಿತರ ಪ್ರವಾಸಿ ತಾಣಗಳ ಉಳಿವಿಗೆ ಪ್ರವಾಸೋದ್ಯಮ ಮತ್ತು ಪ್ರವಾಸೋದ್ಯಮ ಇಲಾಖೆ ಕಾರಣವಾಗಿದೆ. ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನು ಒಂದು ಊರಿನಿಂದ ಇನ್ನೊಂದು ಊರಿಗೆ, ಜಿಲ್ಲೆ, ರಾಜ್ಯ, ದೇಶದಿಂದ ದೇಶಕ್ಕೆ ಪ್ರಯಾಣ ಮಾಡಬೇಕು. ನಮ್ಮ ಸುತ್ತ ಮುತ್ತಲಿನ ಪ್ರಕೃತಿ ನಮಗೆ ವಿವಿಧ ರೀತಿಯ ಕೊಡುಗೆಯನ್ನು ನೀಡುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನವ ತನ್ನ ಸ್ವಾರ್ಥಕ್ಕಾಗಿ ಗಿಡ ಕಡೆಯುವುದು, ಮಣ್ಣು ಕೊರೆಯುವ ಮೂಲಕ ಪ್ರಕೃತಿಗೆ ಹಾನಿ ಮಾಡುತ್ತಿದ್ದಾನೆ. ಹೆಚ್ಚು ಜನ ಸಂಖ್ಯೆಯಿಂದ ಭೂಮಿಯ ಮೇಲಿನ ಪ್ರಕೃತಿ ನಾಶವಾಗುತ್ತಿದೆ ಇದರಿಂದ ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಎನ್ನುವುದು ಊಹೆ ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಉಪನ್ಯಾಸಕ ವಸೀಮ್ ಫಾರೂಕಿ ಮಾತನಾಡಿ, ಪ್ರತಿಯೊಂದು ರಾಷ್ಟ್ರವು ತಮ್ಮದೇ ಆದ ಉಡುಗೆ ತೊಡುಗೆ, ಆಚಾರ ವಿಚಾರ, ಆಡಳಿತ, ಉದ್ಯಮಗಳನ್ನು ಹೊಂದಿವೆ. ಪ್ರಪಂಚದಲ್ಲಿನ 195 ರಾಷ್ಟ್ರಗಳು ತಮ್ಮದೇ ಆದಂತಹ ಆಚರಣೆಗಳು, ಭಾಷೆ, ಸಂಸ್ಕೃತಿಯನ್ನು ಹೊಂದಿವೆ. ಈ ವೈವಿಧ್ಯಮಯ ಬದುಕನ್ನು ಅವಕಾಶ ಸಿಕ್ಕರೆ ಎಲ್ಲರೂ ನೋಡಬೇಕೆಂದು ಹೇಳಿದರು.

ಪ್ರವಾಸೋದ್ಯಮ ಮತ್ತು ಶಾಂತಿ ಈ ವಿಷಯದ ಕುರಿತು ಹಿಂದುಸ್ಥಾನ ಯಾತ್ರಾ ಸಂಸ್ಥೆಯ ವಿಲಾಸಕುಮಾರ ದೇಸಾಯಿ ವಿಶೇಷ ಉಪನ್ಯಾಸ ನೀಡಿದರು. ನ್ಯಾಯವಾದಿ ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ ದೇಸಳ್ಳಿ, ಸಮಾಲೋಚಕ ಚೇತನ್ ಕ್ಯಾಸನೂರ, ವಿಭಾಗದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...