ಧಾರವಾಡ | ಬುದ್ಧನ ಅಷ್ಟಾಂಗ ಮಾರ್ಗದಿಂದ ಪರಿವರ್ತನೆ ಸಾಧ್ಯ: ಡಾ. ಸಂಜೀವ ಕುಲಕರ್ಣಿ

Date:

“ಬುದ್ಧ ಪ್ರತಿಪಾದಿಸಿದ ಅಷ್ಟಾಂಗ ಮಾರ್ಗಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡರೆ; ಪರಿವರ್ತನೆ ಸಾದ್ಯವಾಗುತ್ತದೆ ಎಂದು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಾ. ಸಂಜೀವ ಕುಲಕರ್ಣಿ ಹೇಳಿದರು.

ಧಾರವಾಡ ಪಟ್ಟಣದ  ಕೃಷಿ ವಿಶ್ವವಿದ್ಯಾಲಯದಲ್ಲಿ ಸಂತೋಷ್ ಲಾಡ್ ಫೌಂಡೇಷನ್‌ ವತಿಯಿಂದ ಒಂದು ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

“ಬದುಕಿನಲ್ಲಿ ಕಷ್ಟ ಬರುತ್ತವೆ, ಆ ಕಷ್ಟಗಳಿಗೆ ಕಾರಣಗಳಿರುತ್ತವೆ, ಕಷ್ಟ ಪರಿಹಾರಕ್ಕೆ ಪ್ರಯತ್ನಿಸಿದರೆ ನಿವಾರಣೆ ಆಗುತ್ತದೆ. ಮತ್ತು ಸೂಕ್ತ ಮಾರ್ಗವೂ ಇದೆ’ ಎಂದು ಬುದ್ಧ ನಾಲ್ಕು ಸತ್ಯಗಳನ್ನು ಸಾರಿದ್ದಾರೆ. ಬುದ್ಧನ ಬೋಧನೆಯಲ್ಲಿ ಬರುವ ಸಮ್ಯಕ್ ಪದವು ಯೋಗ್ಯವಾದುದು, ಸರಿಯಾದದ್ದು, ಸೂಕ್ತವಾದದ್ದು ಮತ್ತು ಸಹಜವಾದದ್ದು ಎಂದರ್ಥವನ್ನು ಕೊಡುತ್ತದೆ. ಹಲವು ತಾರತಮ್ಯಗಳನ್ನು ಕೃತಕವಾಗಿ ಸೃಷ್ಟಿ ಮಾಡಿಕೊಂಡು ಕಷ್ಟಗಳನ್ನು ಅನುಭವಿಸುತ್ತಿದ್ದೇವೆ. ಅವುಗಳಿಂದ ಹೊರಬಂದು ಸುಂದರ ಬದುಕು ನಿರ್ಮಾಣ ಮಾಡಿಕೊಳ್ಳಲು ಸಮ್ಯಕ್ ಪದದ ಅರ್ಥದಲ್ಲಿ ಸಾಗಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, “ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳನ್ನು ಮನೆ ಮತ್ತು ಮನಗಳಲ್ಲಿ ಅಳವಡಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ಮಹನೀಯರು ಹುಟ್ಟಿ ಬರದೇ ಇದ್ದಿದ್ದರೆ, ನಾವಾರೂ ಸಮಾನತೆಯಿಂದ ಬದುಕಲು ಸಾಧ್ಯವಿದ್ದಿದ್ದಿಲ್ಲ. ನಾವೇ ಶ್ರೇಷ್ಠ ಇತರರು ಕನಿಷ್ಠವೆಂಬ ಮನೋಭಾವ ಹೆಚ್ಚಾಗುತ್ತಿದೆ. ನೆರೆಹೊರೆಯ ರಾಷ್ಟ್ರಗಳನ್ನು ಶತ್ರುಗಳಂತೆ ಕಾಣುವ ವಾತಾವರಣ ಸೃಷ್ಟಿಯಾಗಿರುವ ಪರಿಣಾಮ ಸಮಾಜದಲ್ಲಿ ಅಶಾಂತಿ ಹೆಚ್ಚಾಗುತ್ತಿದೆ” ಎಂದರು.

ಉಪನ್ಯಾಸಕಿ ಅನಸೂಯಾ ಕಾಂಬಳೆ ಅವರು ‘ಬುದ್ದ ಬೋಧನೆಯಲ್ಲಿ ಮಹಿಳೆಯರ ಸ್ಥಾನಮಾನ’ ಕುರಿತು ಮಾತನಾಡುತ್ತಾ, “ಬುದ್ಧನ ಬೋಧನೆಗಳಲ್ಲಿ ಧರ್ಮದ ವಿಧಿ ಮತ್ತು ನಿಷೇಧಗಳಿಲ್ಲ. ಅವರ ವಿಚಾರಗಳಲ್ಲಿ ಮಹಿಳೆಯರ ಜೀವನ ಸುಧಾರಣಾ ಮಾರ್ಗಗಳು ಕಾಣುತ್ತವೆ’ ಎಂದರು. 

IMG 20250616 WA0007 1

ಶಿಲಾಧರ ಮುಗಳಿ ಮಾತನಾಡಿ, “ಬುದ್ಧ ಅಹಿಂಸಾ ಪರಮೋ ಧರ್ಮವನ್ನು ಪಾಲಿಸಿದರು. ಪ್ರಸ್ತುತ ಸಮಸ್ಯೆಗಳಿಗೆ ಬುದ್ಧನ ವಿಚಾರಗಳಲ್ಲಿ ಪರಿಹಾರವಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ತವ್ಯ ಲೋಪ ಎಸಗಿದ್ದಕ್ಕೆ ಪಿಡಿಒ ಅಮಾನತು

ಫೌಂಡೇಶನ್‌ನ ಮುಖ್ಯಸ್ಥ ಮತ್ತು ಸಚಿವ ಸಂತೋಷ್ ಲಾಡ್ ಸಮಾಜದಲ್ಲಿ ಬದಲಾವಣೆ ತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. 

ಈ ಸಂದರ್ಭದಲ್ಲಿ ಎನ್. ಎಚ್. ಕೋನರೆಡ್ಡಿ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...