ಧಾರವಾಡ | ಗೌರಿ ಹಂತಕರಿಗೆ ಸನ್ಮಾನ; ಆರೋಪಿಗಳ ಬಂಧನಕ್ಕೆ ಪ್ರಗತಿಪರ ಚಿಂತಕರ ಒತ್ತಾಯ

Date:

ಗೌರಿ ಲಂಕೇಶ್‌ರವರನ್ನು ಕೊಂದ ಹಂತಕರನ್ನು ಸನ್ಮಾನಗೈದ ಹಿನ್ನೆಲೆಯಲ್ಲಿ ಎಲ್ಲ ಪ್ರಗತಿಪರ ಚಿಂತಕರು, ಸಂಘಟನೆಗಳಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕಚೇರಿಗಳ ಮುಂದೆ ಹಂತಕರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಆ ದಿಸೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿದರು.

ಬಸವರಾಜ ಸೂಳಿಭಾವಿ‌ ಮಾತನಾಡಿ, ಯಾರೂ ಸಹಿತ ಸಮಾಜದಲ್ಲಿ ಸಮಾನತೆ, ಪ್ರಜಾಪ್ರಭುತ್ವವನ್ನು ಪ್ರತಿಪಾದನೆ ಮಾಡಬಾರದು ಎಂಬ ಉದ್ದೇಶದಿಂದ ಹಂತಕರು ಪ್ರಜಾಪ್ರಭುತ್ವಕ್ಕೆ, ಸಮಾನತೆಗೆ ಗುಂಡಿಟ್ಟು ಕೊಲ್ಲುತ್ತಿದ್ದಾರೆ. ಪ್ರಜಾಪ್ರಭುತ್ವದ ಪ್ರತಿಪಾದನೆ ಮಾಡಿದ ಗೌರಿ ಲಂಕೇಶ್ ಮತ್ತು ಎಮ್ ಎಮ್ ಕಲ್ಬುರ್ಗಿ ಮೇಲೆ ಗುಂಡಿಟ್ಟರು. ಹಿಂದುತ್ವ ಸಂಘಟನೆಯಿಂದ ಹಂತಕರಿಗೆ ಸನ್ಮಾನವಾಗಿದೆ. ಇಬ್ಬರು ವಿಚಾರವಂತರ ಕೊಲ್ಲಲು ಸನಾತನ ಸಂಸ್ಥೆಯಾದ ಸಂಘಪರಿವಾರ ತಾತ್ವಿಕ ಹಿನ್ನೆಲೆ ಒದಗಿಸಿದೆ ಎಂದು ಆರೋಪಿಸಿದರು. ಹಂತಕರನ್ನು ಸನ್ಮಾನ ಮಾಡಿದವರ ಮೇಲೆ ಹಾಲಿ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಾಗೃತ ಕರ್ನಾಟಕ ಸಂಘಟನೆಯ ನೂರ್ ಶ್ರೀಧರ ಮಾತನಾಡಿ, ಅಸಂವಿಧಾನಿಕ ನಡತೆ, ಪ್ರಜಾಪ್ರಭುತ್ವ ವಿರೋಧಿ ನಡುವಳಿಕೆಗಳನ್ನು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಕಾಣುತ್ತಿದ್ದೆವು. ಆದರೆ ಅಂತಹ ಅವಹೇಳನಕಾರಿ ಹಾಗೂ ಅವಮಾನಕರ ಕೃತ್ಯ ಕರ್ನಾಟಕದಲ್ಲೇ ನಡೆದಿದೆ. ಕೊಲೆಗಾರರಿಗೆ ಸನ್ಮಾನ ಮಾಡುವ ಸಂಸ್ಕೃತಿ ಕರ್ನಾಟಕದಲ್ಲಿ ಬೆಳೆಯುತ್ತಿರುವುದು ಬೇಸರದ ಸಂಗತಿ. ಗೌರಿ ಲಂಕೇಶ್ ಕೊಲೆಯಾಗಿ 7 ವರ್ಷವಾದರೂ ಕೊಲೆಗೈದವರಿಗೆ ಇದುವರೆಗೂ ಶಿಕ್ಷೆ ಆಗಿಲ್ಲ. ಇದಾವುದೂ ವಯಕ್ತಿಕ ಧ್ವೇಷದಿಂದ ಆಗಿದ್ದಲ್ಲ, ಒಂದು ಚಿಂತನೆಗಳ ವಿರುದ್ಧ ಆಗುತ್ತಿರುವ ಕೊಲೆಗಳಾಗಿವೆ. ಸಂವಿಧಾನವಾದಿ ಚಿಂತನೆಗಳನ್ನು ಸಂಪೂರ್ಣ ನಾಶಮಾಡಲು ಮನುವಾದಿ ಸಂಸ್ಥೆಗಳು ಇದರ ಹಿಂದೆ ಇದಾವೆ. ಫನಸಾರೆ, ನರೇಂದ್ರ ದಾಬೋಲ್ಕರ್, ಗೌರಿ ಲಂಕೇಶ್, ಎಮ್ ಎಮ್ ಕಲ್ಬುರ್ಗಿ ಈ ನಾಲ್ಕೂ ಜನ ವಿಚಾರವಂತರನ್ನು ಕೊಂದಿದ್ದು ಒಂದೇ ಸಂಘಟನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ತಾಕ್ ಅಹಮದ್ ಹಾವೇರಿಪೇಟ್ ಮಾತನಾಡಿ, ಕೊಲೆಗಾರರನ್ನು ಗೌರವಿಸುವುದು ಹೇಯಕೃತ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ಆರೋಪಿಗಳನ್ನು ಬಂಧಿಸದೇ ಇರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಹಾಲಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಜಾತ್ಯಾತೀತ ಮತ್ತು ದಲಿತ, ಅಹಿಂದ ಸಮುದಾಯಗಳ ಸಹಕಾರದಿಂದ. ಈ ನಡೆಯನ್ನೆಲ್ಲ ಗಮನಿಸಿದರೆ ಇವರೂ ಮನುವಾದಿಗಳ ಕೈಗೊಂಬೆ ಆಗಿದ್ದಾರೆ ಏನೋ ಅನಿಸುತ್ತಿದೆ. ಕಾಂಗ್ರೆಸ್ ನಲ್ಲೂ ಮನುವಾದಿ ಚಿಂತನೆಗಳು ಸೇರಿಕೊಂಡಿದ್ದು, ಈ ಕೂಡಲೆ ಸಿಎಂ ಮತ್ತು ಗೃಹ ಸಚಿವರು ಇಂತಹ ಕೆಟ್ಟ ಮನಸ್ಸುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಭಾರೀ ಮಳೆಗೆ ಕೊಚ್ಚಿಹೋದ ಸೇತುವೆ; ಎಚ್ಚರಗೊಳ್ಳುವರೇ ಜನಪ್ರತಿನಿಧಿಗಳು?

ಪ್ರತಿಭಟನೆಯಲ್ಲಿ ಜನಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು, ಸಮಾನ ಮನಸ್ಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...