ಧಾರವಾಡ | ದೇಶದಲ್ಲಿನ ನಿರುದ್ಯೋಗ ಸಮಸ್ಯೆ ಬಗೆಹರಿಯಬೇಕು: ಸುನೈನಾ

Date:

ಯುವಜನತೆ ದುಶ್ಚಟಗಳ ಮೂಲಕ ಹಾದಿತಪ್ಪಿರುವುದು ದುರಂತ. ಯುವಕರು ದೇಶಕ್ಕೆ ಸಹಾಯಕಾರಿಯಾಗುವ ವಿಚಾರದ ಕಡೆಗೆ ಗಮನ ಹರಿಸಬೇಕಿದೆ.‌ ನಮ್ಮ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆ ಬಗೆಹರಿಯಬೇಕಿದೆ ಎಂದು ಹುಬ್ಬಳ್ಳಿ ಪಿ.ಸಿ.ಜಾಬಿನ್ ಕಾಲೇಜಿನ ಉಪನ್ಯಾಸಕಿ ಸುನೈನಾ, ಸ್ವಾಮಿ ವಿವೇಕಾನಂದರ ಬದುಕಿನಲ್ಲಾದ ಪ್ರಸಂಗಗಳನ್ನು ನೆನಪಿಸಿಕೊಂಡರು.

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಜ. 11ರಂದು ತಾಲೂಕಿನ ಪತ್ರಕರ್ತರು ಹಾಗೂ ಶಿಕ್ಷಕರಿಗೆ ಸನ್ಮಾನ ಹಮ್ಮಿಕೊಂಡಿದ್ದರು.

ಇದೇ ಸಂದರ್ಭದಲ್ಲಿ ಈಶ್ವರಿಯ ವಿಶ್ವವಿದ್ಯಾಲಯದ ಕೇಂದ್ರದ ಮೇಲ್ವಿಚಾರಕಿ ಮಲ್ಲಮ್ಮ ಕುರಹಟ್ಟಿ ಮಾತನಾಡಿ, ಯುವಕರೇ ಈ ದೇಶದ ಆಸ್ತಿ. ಅಂತಹ ಯುವಜನರನ್ನು ದುಶ್ಚಟಗಳಿಂದ ಹೋರತರಬೇಕಿದೆ. ನಿಜ ಧರ್ಮದ ನೆಲೆಯ ಬಗ್ಗೆ ಗೊತ್ತಿಲ್ಲದೆ ಸಮಾಜ ಒದ್ದಾಡುತ್ತಿದೆ. ಸಮಾಜದ ಪರಿಸ್ಥಿತಿ ಮತ್ತಷ್ಟು ಕೆಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀ ಗುರುದೇವ ಬ್ರಹ್ಮಾನಂದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ ಗೌಡಗೇರಿ ಮಾತನಾಡಿ, ನಾವು ವಿವೇಕಾನಂದರ ವಿಚಾರಗಳನ್ನು ಹೇಳುತ್ತೆವೇಯೆ ಹೊರತು ಆಚರಣೆಗೆ ತರುವಲ್ಲಿ ವಿಫಲವಾಗಿದ್ದೇವೆ. ಯುವಕರು ದುಶ್ಚಟಗಳಿಗೆ ಬಲಿಯಾಗಿ ಹೆತ್ತವರನ್ನೇ ಕೊಲ್ಲುವ ಕೆಟ್ಟ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೆಎಲ್ಇ ಕಾಲೇಜಿನ ರಮೇಶ ಅತ್ತಿಗೇರಿ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಈಶ್ವರಿಯ ವಿಶ್ವವಿದ್ಯಾಲಯವು ಮಕ್ಕಳ ಪ್ರತಿಭೆ ಅನಾವರಣಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದರು. ಪತ್ರಕರ್ತರ ವತಿಯಿಂದ ಬಸವರಾಜ ಗುಡ್ಡದಕೇರಿ ಮಾತನಾಡಿದರು.

ಶಿಕ್ಷಕ ರವಿ ಬಾವುಟೆ ಮಾತನಾಡಿ, ಮಕ್ಕಳಿಗೆ ಸರಿಯಾದ ಸಮಯದಲ್ಲಿ ಸರಿಯಾದ ಸಂಸ್ಕಾರ ನೀಡಿದರೆ ಯುವಕರು ದೇಶವನ್ನು ಕಟ್ಟುವಲ್ಲಿ ಮುನ್ನಡೆಯುತ್ತಾರೆ ಎಂದರು. ಕುಮಾರಿ ಭಾರತಿ ಮಾತನಾಡಿ, ಗುರುಗಳು ಕಲಿಸಿದ ಜ್ಙಾನದಿಂದ ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಮತ್ತು ಎಲ್ಲರೂ ಆದ್ಯಾತ್ಮಿಕ ಜ್ನಾನದೆಡೆಗೆ ಮುಖಮಾಡಬೇಕಿದೆ ಎಂದು ತಿಳಿಸಿದರು. ವಿನಯ್ ಪಾಟೀಲ ತಮ್ಮ ಅನುಭವ ಹಂಚಿಕೊಂಡರು.

ಪ್ರೇಮಾ ಮಾತನಾಡಿ, ಇತ್ತಿಚೆಗೆ ಜನರಲ್ಲಿ ರೋಗಾಣುಗಳ ಸೃಷ್ಟಿ ಹೆಚ್ಚಾಗಿದೆ. ಒತ್ತಡಗಳು ಹೆಚ್ಚಾಗುತ್ತಿವೆ. ವಿವೇಕಾನಂದರಿಗೆ ಸಾಧಿಸುವ ಸಂಕಲ್ಪ‌ ಇರುವ ಕಾರಣ ಅವರು ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು ಯಾವುದೇ ಒತ್ತಡಗಳು ಅವರನ್ನು ಕಾಡಲಿಲ್ಲ. ಎಲ್ಲ ರೀತಿಯ ಒತ್ತಡಗಳಿಗೆ ಧ್ಯಾನವೇ ಮೂಲ ಔಷಧಿಯಾಗಿದೆ ಎಂದರು.

ಇದನ್ನೂ ಓದಿ ಧಾರವಾಡ | ಮಾನ್ಯಾ ಹತ್ಯೆ ಪ್ರಕರಣ; ಪಾರದರ್ಶಕ ತನಿಖೆಯಾಗಲಿ: ಎ.ಆರ್.ಕೃಷ್ಣಮೂರ್ತಿ

ಈ ಸಂದರ್ಭದಲ್ಲಿ ತಾಲೂಕಿನ ಯುವ ಪತ್ರಕರ್ತರಾದ ಸುನೀಲ ಕರೋಗಲ್, ಬಸವರಾಜ ಗುಡ್ಡದಕೇರಿ, ಖಾದರಸಾಬ ಡಗಲಿ, ರವಿ ಕಮಡೊಳ್ಳಿ, ನಾಗರಾಜ ಮುದುಬಾವಿ, ದುರ್ಗಪ್ಪ ಗೊಲ್ಲರ, ಕಿರಣಕುಮಾರ ಅರ್ಕಸಾಲಿ, ಶರಣಪ್ಪ ಗೊಲ್ಲರ ಸೇರಿದಂತೆ ಅತಿಥಿಗಳನ್ನು ಸನ್ಮಾನಿಸಿದರು. ಫಕೀರೇಶ ನೀಲನಾಯಕರ, ವಿನಯ ಪಾಟೀಲ, ಭಾರತೀ ಕುರಟ್ಟಿ, ಪ್ರೇಮಾ ಚಾಕಲಬ್ಬಿ, ಪ್ರಿಯಾ ಸಂಶಿ ಹಾಗೂ ಗ್ರಾಮದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...