ಧಾರವಾಡ | ಫೋಟೊ, ವಿಡೀಯೋಗ್ರಾಫರಗಳಿಗೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ

Date:

ಸೆಪ್ಟೆಂಬರ 9 ಮತ್ತು 10 ರಂದು ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಪಡೆಯಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ, ಧಾರವಾಡ ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಮಿಕ ಇಲಾಖೆಯ ಕಛೇರಿಯಲ್ಲಿ ಪೋಟೋಗ್ರಾಫರ್‌ಗಳಿಗೆ ಕಾರ್ಮಿಕ ಇಲಾಖೆಯಿಂದ ಉಚಿತವಾಗಿ ನೋಂದಾಯಿಸಿಕೊಂಡು ಅಸಂಘಟಿತ ಕಾರ್ಮಿಕರ ಕಾರ್ಡ್‌ಗಳನ್ನು ಮಾಡಿಕೊಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಸೆ. 5ರಂದು ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಹಾಗೂ ಎಲ್ಲ ತಾಲೂಕಿನ ಛಾಯಾಗ್ರಾಹಕ ಸಂಘಗಳ ಅಧ್ಯಕ್ಷರ ಸಭೆಯನ್ನು ಧಾರವಾಡ ವಾರ್ತಾ ಇಲಾಖೆಯ ಸಭಾಭವನದಲ್ಲಿ ಆಯೋಜಿಸಿದ್ದರು.

ಈಗಾಗಲೇ ಅಸಂಘಟಿತ ಕಾರ್ಮಿಕ ಕಾರ್ಡ್ ಹೊಂದಿರುವ ಛಾಯಾಗ್ರಾಹಕರು ಸಹ ಸೆಪ್ಟೆಂಬರ 9 ಮತ್ತು 10 ರಂದು ತಮ್ಮ ತಾಲೂಕಿನ ಕಾರ್ಮಿಕ ಇಲಾಖೆಯ ಕಚೇರಿಗೆ ಭೇಟಿ ನೀಡಿ, ತಮ್ಮ ನೋಂದಣಿಯನ್ನು ದೃಢಪಡಿಸಿಕೊಳ್ಳಬೇಕು. ಹೊಸದಾಗಿ ನೋಂದಣಿಗೆ ಛಾಯಾಗ್ರಾಹಕರು ತಮ್ಮ ಒಂದು ಪಾಸ್‍ಪೋರ್ಟ ಸೈಜ್ ಫೋಟೊ, ಬ್ಯಾಂಕ್ ಪಾಸ್‍ಬುಕ್ ಝರಾಕ್ಸ್ ಪ್ರತಿ ಮತ್ತು ಆಧಾರ ಕಾರ್ಡ್ ಪ್ರತಿ ತೆಗೆದುಕೊಂಡು ಬರಬೇಕು. ತಮ್ಮ ಕುಟುಂಬದ ಪಡಿತರ ಚೀಟಿ ಇದ್ದರೆ ಅದನ್ನು ಸಹ ತರಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಕಲಘಟಗಿ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಪ್ರಕ್ರೀಯೆ ಜರುಗಲಿದೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸೆ.‌ 13ರ ‘ರಾಷ್ಟ್ರೀಯ ಲೋಕ ಅದಾಲತ್’ ಕಾರ್ಯಕ್ರಮದ ಸದುಪಯೋಗ ಆಗಲಿ: ಬಿ.ಎಸ್. ಭಾರತಿ

ಕಾರ್ಮಿಕ ಇಲಾಖೆಯ ಈ ಪ್ರಯೋಜನವನ್ನು ಜಿಲ್ಲೆಯ ಎಲ್ಲ ಫೋಟೊಗ್ರಾಫರ್ಸ್, ವಿಡೀಯೋಗ್ರಾಫರ್ಸ್‍ಗಳು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮಾರಿಕಾಂಬಾ, ಹಿರಿಯ ಕಾರ್ಮಿಕ ನಿರೀಕ್ಷರ (9480068995) ಹುಬ್ಬಳ್ಳಿ, ಅಕ್ಬರ ಮುಲ್ಲಾ, ಹಿರಿಯ ಕಾರ್ಮಿಕ ನಿರೀಕ್ಷರು (9964178078) ಧಾರವಾಡ, ಹಿರಿಯ ಕಾರ್ಮಿಕ ನಿರೀಕ್ಷರಾದ ಲತಾ, ಕಲಘಟಗಿ (9986594945), ಮೀನಾಕ್ಷಿ ಶಿಂದಿಹಟ್ಟಿ, ಅಳ್ನಾವರ (6363520066), ಭುವನೇಶ್ವರಿ ಕೋಟಿಮಠ, ಧಾರವಾಡ (7022527066), ಅಕ್ರಂ ಅಲ್ಲಾಪೂರ, ಹುಬ್ಬಳ್ಳಿ ಶಹರ (9606366429), ಅಶೋಕ ಒಡಿಯರ್, ಹುಬ್ಬಳ್ಳಿ ಗ್ರಾಮೀಣ (70190101998, 9019991255), ರಜನಿ ಹಿರೇಮಠ, ಕುಂದಗೋಳ (9620629013), ಸಂಗೀತಾ ಬೆನಕನಕೊಪ್ಪ, ಅಣ್ಣಿಗೇರಿ ಮತ್ತು ನವಲಗುಂದ (9620727370) ಹಾಗೂ ಫೋಟೊಗ್ರಾಫರ್ಸ್ ಸಂಘದ ಪ್ರಮುಖರಾದ ದತ್ತಪ್ರಸಾದ ವೆಂಕಟೇಶ (9845128653), ಕಿರಣ ಬಾಕಳೆ (9448136285) ಮತ್ತು ಪ್ರಭಯ್ಯ ಲಕ್ಕುಂಡಿಮಠ (9986268406) ಅವರನ್ನು ಸಂಪರ್ಕಿಸಬಹುದೆಂದು ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...