ಧಾರವಾಡ | ರುದ್ರಭೂಮಿಯಲ್ಲಿ ಶರಣರ ವಚನಗಳ ಅನಾವರಣ

Date:

ಧಾರವಾಡ ಮುರುಘಾ ಮಠದ ವ್ಯಾಪ್ತಿಯಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಬಸವ ಕೇಂದ್ರದ ವತಿಯಿಂದ ಬುಧವಾರ (ಜುಲೈ 2) ಶರಣರ ವಚನ ಬೋರ್ಡ್‌ಗಳನ್ನು ಇಳಕಲ್ ಮಠದ ಗುರುಮಹಾಂತ ಸ್ವಾಮಿ ಅನಾವರಣ ಮಾಡಿದ್ದಾರೆ.

“ವಚನ ಫಲಕಗಳನ್ನು ಎಲ್ಲ ರುದ್ರಭೂಮಿಗಳಲ್ಲಿಲೂ ಹಾಕಿಸುವ ವ್ಯವಸ್ಥೆ ಆಗಬೇಕು. ವಚನಗಳಲ್ಲಿ ನಮ್ಮ ಜೀವನದುದ್ದಕ್ಕೂ ಬೇಕಾಗುವ ಅಂಶಗಳು ಸಿಗುತ್ತವೆ. ನಾವು ಹಾದಿತಪ್ಪಿದಾಗ ಎಚ್ಚರಿಸಲು, ತಿದ್ದಿಕೊಂಡು ನಡೆಯಲು, ನಡೆ ನುಡಿ ಒಂದಾಗಲು, ಹುಟ್ಟಿನಿಂದ ಸಾವಿನವರೆಗೂ ಅತ್ಯವಶ್ಯಕ ಬೇಕಾಗುವ ವಚನಗಳನ್ನು ದಿನಂಪ್ರತಿ ಓದುತ್ತ ಹೋದಾಗ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು” ಎಂದು ಅವರು ಹೇಳಿದ್ದಾರೆ.

ರುದ್ರಭೂಮಿಗಳಲ್ಲಿ ವಚನಗಳ ಫಲಕಗಳನ್ನು ಹಾಕಿಸುವ ಪರಿಕಲ್ಪನೆಯನ್ನು ತಂದ ಸಿದ್ಧರಾಮಣ್ಣ ನಡಕಟ್ಟಿ ಮಾತನಾಡಿ, “ಈಗ ನಗರದ ಒಂದು ರುದ್ರಭೂಮಿಯಲ್ಲಿ ಈ ಕಾರ್ಯವನ್ನು ಯಶಸ್ವಿಗೊಳಿಸಿದ್ದೇವೆ. ಇನ್ನುಳಿದ ಎಲ್ಲ ರುದ್ರಭೂಮಿಗಳಲ್ಲೂ ಈ ಫಲಕಗಳನ್ನು ಹಾಕಿಸಲು ಮುಂದಾಗುತ್ತೇವೆ. ವಚನಗಳಿಗೆ ಯಾವುದೇ ಜಾತಿ, ಧರ್ಮ, ವರ್ಗ, ಲಿಂಗಭೇದ ಇರುವುದಿಲ್ಲ. ವಚನಗಳು ಸಕಲ ಜೀವಾತ್ಮರಿಗೂ ಲೇಸನ್ನು ಬಯಸಲು ಕಲಿಸುತ್ತವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಂತಪ್ಪ ತೋಟದ ಮಾತನಾಡಿ, “ಮಣ್ಣು ಕೊಡಲು ಬಂದ ಜನರು ಅಂತ್ಯಸಂಸ್ಕಾರದ ಎಲ್ಲ ಕಾರ್ಯಗಳು‌ ಮುಗಿಯುವತನಕ ಅಲ್ಲಲ್ಲಿ ಸಾವಿನ ಬಗ್ಗೆಯೆ ಮಾತನಾಡಿಕೊಳ್ಳುತ್ತ ಕುಳಿತುಕೊಳ್ಳುವ ಬದಲು ಒಂದೆರಡು ವಚನಗಳನ್ನು ಓದಿ ಮನಸ್ಸನ್ನು ಅರಳಿಸಿಕೊಳ್ಳಬಹುದು. ಜಿಗುಪ್ಸೆಗೆ ಒಳಗಾದ ಮನುಷ್ಯನು ಸಾವು ಎಲ್ಲರಿಗೂ ಬರುತ್ತದೆ ಎಂಬ ಸತ್ಯವನ್ನಿರಿತು, ಅಂತ್ಯಸಂಸ್ಕಾರದ ಕುರಿತು ಶರಣರು ಹಲವಾರು ವಚನಗಳನ್ನು ಬರೆದಿದ್ದಾರೆ ಅವುಗಳನ್ನು ಒಂದು ವಚನ ಓದಿದರೂ ಸಾಕು. ಅದರಲ್ಲೂ ವಿಶೇಷವಾಗಿ ಸ್ಮಶಾನವೆಂಬ ಪವಿತ್ರ ಸ್ಥಳದಲ್ಲಿ ಓದಿದಾಗ ಶಾಸ್ವತ ನೆನಪಿಟ್ಟುಕೊಳ್ಳಬಹುದು” ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿದ್ಧರಾಮ ನಡಕಟ್ಟಿ, ರಾಜು ಮರಳಪ್ಪಣವರ, ಅನುಸೂಯಾ ಸೋಮಣ್ಣ ನಡಕಟ್ಟಿ, ಗಂಗಾಂಬಿಕಾ ಹಂಪ್ಪಣವರ, ಬಸವಂತಪ್ಪ ತೋಟದ, ವಿಶ್ವನಾಥ ನಡಕಟ್ಟಿ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...