ಧಾರವಾಡ | ವಿವೇಕಾನಂದರ ವಿಚಾರಗಳು ಸಮಾಜಕ್ಕೆ ದಾರಿದೀಪ: ಮಲ್ಲಯ್ಯಸ್ವಾಮಿ ತೋಟಗಂಟಿ

Date:

ದೇಶದ ಘನತೆಯನ್ನು ಪ್ರಪಂಚಮುಖದಲ್ಲಿ ಎತ್ತಿಹಿಡಿದ ವೀರಸನ್ಯಾಸಿಯ ಬದುಕಿನ ಆದರ್ಶಗಳು ಪಠ್ಯಪುಸ್ತಕಗಳಿಂದ ತೊಡಗಿ ನಾನಾ ಬಗೆಯ ಗ್ರಂಥಗಳವರೆಗೆ ಅಡಿಗಡಿಗೆ ನೆನಪಿಸಲ್ಪಡುತ್ತಲೇ ಸ್ವಾಮಿ ವಿವೇಕಾನಂದರ ವಿಚಾರಗಳು ಸಮಾಜಕ್ಕೆ ದಾರಿದೀಪವಾಗಿವೆ. ಮತ್ತು ಅವರು ದೇಶದ ಯುವ ಸಮುದಾಯಕ್ಕೆ ‘ನಿತ್ಯಸ್ಫೂರ್ತಿ’ ಮಹಾಸಂತ ಎಂದು ಜಾನಪದ ವಿದ್ವಾಂಸ ಮಲ್ಲಯ್ಯ ಸ್ವಾಮಿ ತೋಟಗಂಟಿ ಹೇಳಿದರು.

ಜಿಲ್ಲೆಯ ಕಲಘಟಗಿ ಪಟ್ಟಣದ ವಿದ್ಯಾಸಾಗರ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಹಾಗೂ 2026 ವರ್ಷದ ಕ್ಯಾಲೆಂಡರ್ ಲೋಕಾರ್ಪಣೆ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 2026 ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ಭಾರತದ ಆಧ್ಯಾತ್ಮಿಕ ಸಂಸ್ಕೃತಿ-ಸಂಸ್ಕಾರ- ಉತ್ಕೃಷ್ಟ ವಿಚಾರಗಳನ್ನು ವಿವೇಕಾನಂದರು ಜಗತ್ತಿಗೆ ಪರಿಚಯಿಸಿದ ಸಂದರ್ಭವಾಗಿ ಚಿಕಾಗೋ ವಿಶ್ವಧರ್ಮ ಸಮ್ಮೇಳನದ ಭಾಷಣ ಕಂಡುಬರುತ್ತದೆ. ‘ಅಮೇರಿಕದ ಸಹೋದರ ಸಹೋದರಿಯರೇ’ ಎಂಬ ಅವರ ಭಾಷಣದ ಆರಂಭ ಇಂದಿಗೂ ರೋಮಾಂಚನಕಾರಿ ಅನುಭವವಾಗಿ ಅಂತರಂಗದಲ್ಲಿ ಸಂಚಲನ ಮೂಡಿಸುತ್ತದೆ. ಭಾರತೀಯರಿಗೆ ಇದು ಹೆಮ್ಮೆ ತರುವ ವಿಚಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಸಾಹಿತಿ ಕೆ. ಬಿ. ಪಾಟೀಲ್ ಕುಲಕರ್ಣಿ ಮಾತನಾಡಿ, ವಿವೇಕಾನಂದರು ನೂರಾರು ವರ್ಷಗಳ ಹಿಂದೆಯೇ ಆದರ್ಶಗಳನ್ನು ಬಿತ್ತಿ, ನಮ್ಮೊಳಗಿನ ಉತ್ಸಾಹವನ್ನು ಹೊರಹೊಮ್ಮಿಸುವ ಕಾಯಕ ಮಾಡಿದ್ದಾರೆ. ಅವರ ಪ್ರೇರಣೆ ನಮ್ಮೆಲ್ಲರಲ್ಲೂ ಸದಾ ಜಾಗೃತಿ ಹಾಗೂ ‘ದೇಶ ಮೊದಲು’ ಎಂಬ ಭಾವನೆಯನ್ನು ಮೂಡಿಸಬೇಕಿದೆ ಎಂದರು. ಈ ವೇಳೆ ವಿದ್ಯಾಸಾಗರ ಸ್ಕೂಲಿನ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವೇಕಾನಂದರ ವೇಷ ಭೂಷಣ ಉಡುಗೆ ತೊಟ್ಟು ವಿದ್ಯಾರ್ಥಿಗಳು ಗಮನ ಸೆಳೆದರು. ವಿದ್ಯಾಸಾಗರ್ ಸ್ಕೂಲ್ ಪ್ರಾಂಶುಪಾಲರಾದ ಸುನೀತಾ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದರು.

ಇದನ್ನೂ ಓದಿ ಧಾರವಾಡ | ಬಾಲ್ಯ ವಿವಾಹ ನಿರ್ಮೂಲನೆ ಮಾಡುವಲ್ಲಿ ಶ್ರಮವಹಿಸಬೇಕು: ನ್ಯಾ. ಪರುಶುರಾಮ ದೊಡ್ಡಮನಿ

ಕ. ಸಾ. ಪ ತಾಲೂಕು ಅಧ್ಯಕ್ಷ ರಮೇಶ ಸೋಲಾರಗೋಪ್ಪ, ಕಸಾಪ ಗೌರವ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪ್ರಭುಲಿಂಗ ರಂಗಾಪುರ. ಕೇಂದ್ರ ಪ್ರಶಸ್ತಿ ಪುರಸ್ಕೃತ ಅಶೋಕ ಅರ್ಕಸಾಲಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಎಚ್ ಎನ ಸುನಗದ, ಕಜಾಪ ಅಧ್ಯಕ್ಷ ವೀರಣ್ಣ ಕುಬಸದ, ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮಲಿಂಗ ಒಡೆಯರ, ಕರ್ನಾಟಕ ಸಂಗ್ರಾಮ ಸೇನೆಯ ತಾಲೂಕಾಧ್ಯಕ್ಷ ಸಾತಪ್ಪ ಕುಂಕೂರ, ಅರುಣ್ ಪಾಟೀಲ ವಿನಾಯಕ ಭಟ್, ಸೌಮ್ಯ ಪಾಟೀಲ, ಸುಭಾಸ ಕಂಪ್ಲಿಕೋಪ್ಪ, ಸೇರಿದಂತೆ ಕ ಸಾ ಪ ಪದಾಧಿಕಾರಿಗಳು, ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...