ಧಾರವಾಡ | ಬೇಸಿಗೆ ಆರಂಭದಲ್ಲೇ ಉಲ್ಬಣಿಸಿದ ನೀರಿನ ಸಮಸ್ಯೆ, ಗ್ರಾಮಗಳು ಕಂಗಾಲು

Date:

ಬೇಸಿಗೆ ಆರಂಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸ್ಥಿತಿ ತಾರರಕ್ಕೆ ಹೋಗುವ ಸಾಧ್ಯತೆ ಗೋಚರವಾಗುತ್ತಿದೆ. ಸಮಸ್ಯೆ ನಿವಾರಣೆಗೆ ಮತ್ತು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಜಿಲ್ಲೆಯ ಬರಪೀಡಿತ ಪ್ರತೀ ತಾಲೂಕಿಗೆ 25 ಲಕ್ಷ ರೂ.ದಂತೆ ಎಂಟು ತಾಲೂಕುಗಳಿಗೆ ತಾತ್ಕಾಲಿಕವಾಗಿ 2 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ.

ಧಾರವಾಡ ತಾಲೂಕಿನಲ್ಲಿ ಪ್ರಸ್ತುತ 17 ಗ್ರಾಮ, ಹುಬ್ಬಳ್ಳಿ ತಾಲೂಕು ವ್ಯಾಪ್ತಿಯ 16 ಗ್ರಾಮ, ಕುಂದುಗೋಳ ತಾಲೂಕಿನ 15 ಗ್ರಾಮಗಳು, ಕಲಘಟಗಿ ತಾಲೂಕಿನ 54, ನವಲಗುಂದ ತಾಲೂಕಿನ 16, ಅಣ್ಣಿಗೇರಿಯ 12 ಮತ್ತು ಅಳ್ನಾವರ ತಾಲೂಕಿನ 9 ಗ್ರಾಮಗಳು ಸೇರಿ ಒಟ್ಟು 139 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಜಿಲ್ಲಾಡಳಿತ ಗುರುತಿಸಿದೆ.

ಕುಂದಗೋಳ ತಾಲೂಕಿನ ಶಿರೂರು, ಬೆಳ್ಳಿಗಟ್ಟಿ, ಸಂಶಿ, ಕೊಡ್ಲಿವಾಡ, ಬೆನಕನಹಳ್ಳಿ ಸೇರಿ 8 ರಿಂದ 10 ಗ್ರಾಮಗಳಲ್ಲಿ, ಕಲಘಟಗಿ ತಾಲೂಕಿನ ಮಿಶ್ರಿಕೋಟೆ, ಸಂಗಮೇಶ್ವರ, ಸುಳಕಟ್ಟಿ, ಆಲದಕಟ್ಟಿ ಸೇರಿ ಹಲವು ಗ್ರಾಮಗಳಲ್ಲಿ ಹೆಚ್ಚಿನ ಕುಡಿಯುವ ನೀರಿನ ಸಮಸ್ಯೆ ಇದೆ. ಟ್ಯಾಂಕ್‌ಗಳ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಕೋರಿದರೆ, ಇಂದಿಗೂ ಸ್ಪಂದಿಸುತ್ತಿಲ್ಲ. ಒಂದು ವಾರದೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಖಾಲಿ ಕೊಡಗಳ ಸಮೇತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರತ್ನ ಭಾರತ ರೈತ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವೆಡೆ ಕೊಳವೆಬಾವಿಗಳ ಅಂತರ್ಜಲ ಮಟ್ಟ ಕುಸಿದಿದ್ದು, ತಾಲೂಕಿನಲ್ಲಿ ಹೆಚ್ಚು ನೀರು ಬರುವ 43 ಕೊಳವೆಬಾವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ನೀರಿನ ಸಮಸ್ಯೆ ಉಂಟಾದಲ್ಲಿ ಆ ಕೊಳವೆಬಾವಿಗಳ ಮೂಲಕ ನೀರು ಪಡೆದು ಜನರಿಗೆ ಪೂರೈಸುವ ಚಿಂತನೆಯಿದೆ ಎಂದು ಪಂಚಾಯತ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಉಮಚಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ಉಲ್ಬಣಗೊಂಡಿದೆ. ಈ ಗ್ರಾಮದಲ್ಲಿ ಸುಮಾರು 2500 ಜನಸಂಖ್ಯೆ ಇದೆ. ಗ್ರಾಮಕ್ಕೆ ನಿತ್ಯ ಮೂರು ಟ್ಯಾಂಕರ್‌ಗಳ ಮೂಲಕ 24 ಸಾವಿರ ಲೀಟರ್‌ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ ಎಂದು ಪಂಚಾಯತ್‌ ಅಧಿಕಾರಿಗಳು ಮಾಹಿತಿ ನಿಡಿದ್ದಾರೆ.

ಇನ್ನು, ಉಮಚಗಿ ಗ್ರಾಮದಲ್ಲಿ ಮಳೆಗಾಲದಲ್ಲಿ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಕೆರೆ ನಿರ್ಮಿಸಲಾಗಿತ್ತು, ಈ ಕೆರೆಯಲ್ಲಿ 2 ವರ್ಷಗಳಿಗೆ ಆಗುವಷ್ಟು ನೀರು ಸಂಗ್ರಹವಾಗಿತ್ತು. ಆದರೆ, ಕಳೆದ ಡಿಸೆಂಬರ್‌ನಲ್ಲಿ ಗ್ರಾಮದ ವ್ಯಕ್ತಿಯೊಬ್ಬರು ಕೆರೆಯಲ್ಲಿ ಬಿದ್ದು ಮೃತಪಟ್ಟರು ಎಂಬ ಕಾರಣಕ್ಕೆ ಗ್ರಾಮದ ಜನ ಕೆರೆಯಲ್ಲಿದ್ದ ನೀರನ್ನು ಮೋಟರ್‌ಹಚ್ಚಿ ಹೊರಗೆ ಹಾಕಿ ಇಡೀ ಕೆರೆಯನ್ನೇ ಖಾಲಿ ಮಾಡಿದ್ದರು. ಇದೀಗ ಇಡೀ ಗ್ರಾಮವು ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಒಟ್ಟಿನಲ್ಲಿ ಜಿಲ್ಲೆಯ ಅನೇಕ ಗ್ರಾಮಗಳು ಬೇಸಿಗೆ ಆರಂಭದಲ್ಲೆ ನೀರಿನ ಸಮಸ್ಯೆ ಅನುಭವಿಸುತ್ತಿದ್ದು ಇನ್ನೂ ಮಧ್ಯ ಬೇಸಿಗೆಯಲ್ಲಿನೀರಿಗೆ ಉಂಟಾಗಬಹುದಾದ ತ್ವಾರದ ಬಗ್ಗೆ ಯೋಚಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...