ಧಾರವಾಡ | ಮಹಿಳೆಯರು ಸಾಕ್ಷರತೆಯಿಂದ ಸಂವಿಧಾನದ ಆಶಯಗಳನ್ನು ಅರಿಯಬೇಕು: ಶಂಕರ್ ಹಲಗತ್ತಿ

Date:

ಮಹಿಳೆಯರು ಸಾಕ್ಷರತೆಯ ಮೂಲಕ ಸಂವಿಧಾನದ ಆಶಯಗಳನ್ನು ಅರಿಯಬೇಕು. ಮಹಿಳೆಯರು ಅಕ್ಷರ ಕಲಿತು ತಮ್ಮ ಮೇಲಾಗುತ್ತಿರುವ ಶೋಷಣೆಯನ್ನು ಅರ್ಥಮಾಡಿಕೊಳ್ಳಬೇಕು. ಇಂದಿನ ಸಂಕೀರ್ಣ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ‘ಶಿಕ್ಷಣ ಮಂಟಪ’ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಮಾತನಾಡಿ, ಸಾಕ್ಷರತೆಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಇದು ನಮ್ಮ ದೇಶದ ಪ್ರತಿಷ್ಠೆಯ ಸಂಕೇತವಾಗಿದೆ. ತೊಂಬತ್ತರ ದಶಕದಲ್ಲಿ ಸಾಕ್ಷರತಾ ಆಂದೋಲನವು ಸ್ವಾತಂತ್ರ್ಯಾನಂತರದ ಎರಡನೇ ಅಲೆ ಆಗಿ ರೂಪುಗೊಂಡು ಇತಿಹಾಸ ಸೃಷ್ಟಿಸಿತು. ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಪ್ರಮುಖ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಮುಕ್ತರಾಗಲು ಸಾಕ್ಷರತೆ ಪ್ರಮುಖ ಸಾಧನವಾಗಿದೆ ಎಂದು

ಈ ವೇಳೆ ಸತ್ಯಸಾಯಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಎನ್. ಮಂಜುನಾಥ, ಸದಸ್ಯ ಕೃಷ್ಣಮೂರ್ತಿ ನಾಡಿಗೇರ, ಶಂಕರ ಕುಂಬಿ, ಎನ್.ವೈ. ಸುಣಗಾರ, ಅಶ್ವಿನಿ ಇಂಚಲ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕ ನಿರ್ದೇಶಕ ಜಿ.ಎಂ. ಗಣಾಚಾರ, ಶ್ರೀಶೈಲ ರಾಚಣ್ಣವರ ಮಾತನಾಡಿದರು. ಕ.ವಿ.ವ. ಸಂಘದ ಕೋಶಾಧ್ಯಕ್ಷ ಸತೀಶ ತುರಮರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಸಾಕ್ಷರತಾ ಕಾರ್ಯಕ್ರಮದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ವಿಜಯಕಲಾ ಬಡಿಗೇರ’ನ್ನು ಸನ್ಮಾನಿಸಿ ಗೌರವಿಸಿದರು. ಪ್ರೊ. ಸವಿತಾ ಪೋತದಾರ ಸ್ವಾಗತಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ ಎಲಿಗಾರ ವಂದಿಸಿದರು. ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...