ಧಾರವಾಡ | ಹುಬ್ಬಳ್ಳಿಗೆ ಕಾಲಿಟ್ಟ ಯುವ ಪರಿವರ್ತನೆ ಯಾತ್ರೆ

Date:

ಜನಸಾಮಾನ್ಯರ ವೇದಿಕೆ ವತಿಯಿಂದ ಬೀದರ್ ನಿಂದ ಬೆಂಗಳೂರು ವರೆಗೆ ಜನಪರ ಯಾತ್ರೆ ಯುವಜನರ ಪರಿವರ್ತನೆಗಾಗಿ ಯುವ ಪರಿವರ್ತನೆ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಈ ಯಾತ್ರೆಯು ಹುಬ್ಬಳ್ಳಿ ತಲುಪಿ ಅಲ್ಲಿಂದ ಹಾವೇರಿ ಕಡೆಗೆ ಸಾಗಿತು.

ಈ ವೇಳೆ ವಕೀಲ ಹಾಗೂ ಜನಸಾಮಾನ್ಯರ ವೇದಿಕೆಯ ಸಂಚಾಲಕ ಯಲ್ಲಪ್ಪ ಹೆಗಡೆ ಮಾತನಾಡಿ, ಅಕ್ಟೋಬರ್ 2ರಿಂದ ಈ ಯಾತ್ರೆಯೂ ಶುರುವಾಗಿದ್ದು, ಬೀದರ್ ನಿಂದ ಹಿಡಿದು ಕಲಬುರ್ಗಿ, ಯಾದಗಿರಿ, ಹುಬ್ಬಳ್ಳಿ ಹೀಗೆ ಒಟ್ಟು 12 ಜಿಲ್ಲಾ ಕೇಂದ್ರಗಳ ಪ್ರವೇಶ ಮಾಡಿ ಆರ್ಥಿಕ ಸಾಮಾಜಿಕ ಶೈಕ್ಷಣಿಕ ರಾಜಕೀಯ ವ್ಯವಸ್ಥೆಯ ಬದಲಾವಣೆಗಾಗಿ ಯುವಕರನ್ನು ತಲುಪುವುದೇ ಈ ಯಾತ್ರೆಯ ಉದ್ದೇಶವಾಗಿದೆ. ಯುವಕರು ಈ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತಾಗಿ ಚರ್ಚೆಗೆ ಇಳಿಯಬೇಕು ಎಂದು ಯುವಜನತೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಆಳುವ ಸರ್ಕಾರಗಳು ಮತ್ತು ವಿರೋಧ ಪಕ್ಷಗಳು ಈ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಮತ್ತು ಹೆಸ್ಕಾಂ ಗಳನ್ನು ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸುತ್ತೇವೆ ಅದನ್ನು ಸರ್ಕಾರ ನಿಲ್ಲಿಸಬೇಕು ಎಂದು ಎಚ್ಚರಿಸಿದರು.

ಕರ್ನಾಟಕ ಸಂಗ್ರಾಮ್ ಸೇನೆಯ ಸಂಜು ಧುಮಕನಾಳ ಮಾತನಾಡಿ, ಇಂತಹ ಜಾಗೃತಿ ಯಾತ್ರೆಗಳನ್ನು ಮಾಡಬೇಕಾದರೆ ಧೈರ್ಯ ಇರಬೇಕಾಗುತ್ತದೆ. ಹೀಗಾಗಿ ಯುವಕರು ಜಾಗೃತರಾಗಬೇಕು. ಇಂತಹ ಜಾಗೃತ ಯಾತ್ರೆಗಳಿಗೆ ಹೆಚ್ಚೆಚ್ಚು ಯುವಕರು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಗೌಡ ಮಾತನಾಡಿ, ಯಾತ್ರೆಗೆ ಎಲ್ಲ ಜಿಲ್ಲೆಗಳಲ್ಲೂ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಧಾರವಾಡದ ಯುನಿವರ್ಸಿಟಿಯ ವಿದ್ಯಾರ್ಥಿಗಳ ಜ್ವಲಂತ ಸಮಸ್ಯೆ ಕುರಿತು ಚರ್ಚಿಸಲಾಯಿತು. ಇದೊಂದು ಸಂವಿಧಾನ ಬದ್ಧವಾದ ಸಂಘಟಿತ ಹೋರಾಟವಾಗಿ ಪರಿವರ್ತನೆಯಾಗಬೇಕು ಎಂದಾಗ ಅಲ್ಲಿನ ವಿದ್ಯಾರ್ಥಿಗಳೆಲ್ಲ ಬೆಂಬಲ ಸೂಚಿಸಿದ್ದಾರೆ ಎಂದರು.

ನಗರದ ಮಂಜುನಾಥ್ ಕೊಂಡಪಲ್ಲಿ ಸಂಗೊಳ್ಳಿ ರಾಯಣ್ಣ ಪುತ್ತಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿ, ಹುಬ್ಬಳ್ಳಿಯ ಎಲ್ಲಾ ಸಂಘಟನೆಗಳ ಪರವಾಗಿ ಪರಿವರ್ತನೆ ಯಾತ್ರೆಗೆ ಸ್ವಾಗತವನ್ನು ಕೋರಿದರು. ಸಮಾಜವನ್ನು ಹಲವು ಸಮಸ್ಯೆಗಳು ಕಾಡುತ್ತಿವೆ ಅದರಲ್ಲಿ ಮುಖ್ಯವಾಗಿ ಮಾದಕ ವಸ್ತುಗಳ ಬಳಕೆ ವಿಪರೀತವಾಗಿದೆ ಇದರಿಂದ ಯುವಜನತೆ ಹೊರಬರಬೇಕಿದೆ ಎಂದರು.

ಹಾಕ್ಕೋತ್ತಾಯಗಳು:
• ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
• ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು.
• UPSC ಮಾದರಿಯಲ್ಲಿ KPSC ಅನ್ನು ಸುಧಾರಿಸಬೇಕು.
• ಖಾಸಗಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಪ್ರಾಮುಖ್ಯತೆ ಕಲ್ಪಿಸಬೇಕು.
• ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಅನ್ನು ಪ್ರಕಟಿಸಬೇಕು.
• ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ ಮಾಡಿ ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು.
• ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡಬೇಕು.
• ಕೃಷಿ ಉತ್ಪನ್ನಗಳಿಗೆ ಎಲ್ಲ ಋತುಗಳಲ್ಲಿ ಖಾತ್ರಿ ಬೆಲೆಯನ್ನು ಒದಗಿಸಬೇಕು.
• ರೈತರಿಗೆ ಗುಣಮಟ್ಟದ ಬೆಳೆ ಆಧಾರಿತ ಬೀಜ ಕಿಟ್ ಗಳನ್ನು ಬಿತ್ತನೆಯ ಸಕಾಲದಲ್ಲಿ ಒದಗಿಸಬೇಕು.
• ಗ್ರಾಮೀಣ ಪ್ರದೇಶದಲ್ಲಿ ಕೃಷಿ ಉತ್ಪನ್ನಗಳಿಂದ ಆಹಾರ ತಯಾರಿಕಾ ತರಬೇತಿ ನೀಡಿ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆ ಒದಗಿಸಬೇಕು.
• ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು.
• ಗ್ರಾಮೀಣರಿಗೆ ಶಿಕ್ಷಣ, ತಂತ್ರಜ್ಞಾನ ಹಾಗೂ ಮಾರುಕಟ್ಟೆಗಳಿಗೆ ಹತ್ತಿರವಾಗಿರುವಂತೆ ಗುಣಮಟ್ಟದ ಬಸ್ಸುಗಳನ್ನು ಒದಗಿಸಬೇಕು.
• ಸರಕಾರಿ ಕಾಮಗಾರಿಗಳ ಗುತ್ತಿಗೆ ಪ್ರಕ್ರಿಯೆಯಲ್ಲಿ ಎಸ್ಸಿ/ಎಸ್ಟಿ ಮತ್ತು 2a ಗುತ್ತಿಗೆ ಮೀಸಲಾತಿಯನ್ನು ಜಾರಿಗೆ ತರಬೇಕು.
• ಮಹಿಳೆಯರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಲೋಕಸಭೆ ಹಂತದವರೆಗೂ ರಾಜಕೀಯ ಮೀಸಲಾತಿಯನ್ನು ಒದಗಿಸಬೇಕು.

ಪರಿವರ್ತನೆ ಯಾತ್ರೆಯಲ್ಲಿ ಯುವಕರು ಸ್ಥಳೀಯ ಸಂಘಟಕರು, ಯುವಕರು, ಹೋರಾಟಗಾರರು ಭಾಗವಹಿಸಿದ್ದರು. ಸಂಜು ಧುಮಕನಾಳ ನೇತೃತ್ವದ ಕರ್ನಾಟಕ ಸಂಗ್ರಾಮ್ ಸೇನೆ ಬೆಂಬಲ ಸೂಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...