ಧಾರವಾಡ | ವಿದ್ಯಾರ್ಥಿ ವೇತನ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

Date:

ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ಖಾತ್ರಿಪಡಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಡಧಿಕಾರಿ ಕಚೇರಿ ಎದರು ಎಐಡಿಎಸ್ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ, “ಸರಿಯಾಗಿ ಮಳೆ ಬಾರದೆ, ಕೂಲಿ ಕೆಲಸವೂ ದೊರೆಯದೆ ಜಿಲ್ಲೆಯ ರೈತ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆ ಜನರ ಜೀವನವನ್ನು ಇನ್ನಷ್ಟು ದುಸ್ತರಗೊಳಿಸಿದೆ. ಶಿಕ್ಷಣದ ಶುಲ್ಕಗಳು ಗಗನಕ್ಕೇರಿದೆ. ವೆಚ್ಚಗಳನ್ನು ಬರಿಸಲಾಗದೆ ಶಾಲಾ ಕಾಲೇಜುಗಳನ್ನು ದೊರೆಯುತ್ತಿರುವ ಎಷ್ಟೋ ಬಡ ಮಕ್ಕಳು, ಕುಟುಂಬಕ್ಕೆ ನೆರವಾಗಲು ದಿನಗೂಲಿ ಕೆಲಸಗಳಿಗೆ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನಗಳ ಕೈಹಿಡಿಯುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಲು ಸೌಲಭ್ಯಗಳನ್ನು ಹೆಚ್ಚಿಸಬೇಕಿದ್ದ ರಾಜ್ಯ ಸರ್ಕಾರವು ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸುತ್ತಿದೆ! ಪಿಯು, ಡಿಗ್ರಿ, ಡಿಪ್ಲೋಮ ಸೇರಿದಂತೆ ಹಲವಾರು ಕೋರ್ಸ್ ಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಮತ್ತು ಇತರೆ ಹಿಂದುಳಿದ ವರ್ಗ ಸೇರಿದಂತೆ ವಿವಿಧ ಸಮುದಾಯಗಳ ವಿದ್ಯಾರ್ಥಿಗಳಿಗೆ ದೊರೆಯಬೇಕಿದ್ದ ಕಳೆದ ವರ್ಷದ ವಿದ್ಯಾರ್ಥಿ ವೇತನ ಇನ್ನೂ ದೊರೆತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸಾಕಷ್ಟು ತಾಂತ್ರಿಕ ದೋಷಗಳಿಂದ ಕೂಡಿದ್ದು ಎಷ್ಟೋ ವಿದ್ಯಾರ್ಥಿಗಳ ಅರ್ಜಿಯು ಸ್ವಿಕೃತವಾಗದೆ ದಿಕ್ಕು ತೋಚದ ಪರಿಸ್ಥಿತಿಗೆ ವಿದ್ಯಾರ್ಥಿಗಳು ತಳಲ್ಪಟ್ಟಿದ್ದಾರೆ. ಇದಷ್ಟೇ ಅಲ್ಲದೆ, ಗಾಯದ ಮೇಲೆ ಬರೆ ಎಳೆದಂತೆ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಲ್ಲಬೇಕೆಂದ ಶಿಷ್ಯವೇತನದ ಮೊತ್ತವನ್ನು ರಾಜ್ಯ ಸರ್ಕಾರವು ಕಡಿತಗೊಳಿಸಿದೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 5,000ದಿಂದ 60,000ದವರೆಗೆ ವಿತರಿಸಲ್ಪಡುತ್ತಿದ್ದ ವಿದ್ಯಾರ್ಥಿ ವೇತನದ ಮೊತ್ತವನ್ನು 1100 ರಿಂದ 11,000ಕ್ಕೆ ಇಳಿಸಲಾಗಿದೆ” ಎಂದು ಕಿಡಿಕಾರಿದರು.

“ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ದುಡ್ಡನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕ ನಿಧಿಯಲ್ಲಿ ಹೇರಳವಾಗಿ ಶೇಖರಣೆಯಾಗುತ್ತಿದೆ. ಇದು ಕಾರ್ಮಿಕರ ಬೆವರಿನ ಫಲ. ಮತ್ತು ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು. ಘನ ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು ಮತ್ತು ಕಡಿತಗೊಳಿಸಿರುವ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಮೊತ್ತವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...