ಧಾರವಾಡ | ಎತ್ತಿನಗುಡ್ಡದಲ್ಲಿ ಸಿದ್ದರಾಮೇಶ್ವರರ 852ನೇ ಜಯಂತಿ ಆಚರಣೆ

Date:

12ನೇ ಶತಮಾನದಲ್ಲಿ ಜೀವಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರವಾದದ್ದು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಮಹಾಪೌರ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಹೇಳಿದರು.

ಧಾರವಾಡ ಜಿಲ್ಲೆಯ ಎತ್ತಿನಗುಡ್ಡದ ಗ್ರಾಮದಲ್ಲಿ ನಡೆದ ಸಿದ್ದರಾಮೇಶ್ವರರ 852ನೇ ಜಯಂತಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಬಸವಣ್ಣ, ಅಲ್ಲಮಪ್ರಭು, ಮಾದರ ಚನ್ನಯ್ಯ, ಚನ್ನಬಸವಣ್ಣ, ಅಕ್ಕಮಹಾದೇವಿ, ಸಿದ್ದರಾಮೇಶ್ವರರು ಹಾಗೂ ಇನ್ನೂ ಅನೇಕ ಶಿವಶರಣೆಯರ ಆದರ್ಶಗಳು ನಮಗೆಲ್ಲ ದಾರಿದೀಪವಾಗಲಿ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಯೋಗಿ ಸಿದ್ದರಾಮೇಶ್ವರರು ವೇಷ ಧರಿಸಿ ಫಲವೇನಯ್ಯ, ವೇಷದಂತೆ ಆಚರಣೆ ಇಲ್ಲದಿದ್ದಾಗ ಎನ್ನುವ ವಚನ ಸಾರಿ ಹೇಳಿದ 12ನೇ ಶತಮಾನದ ಖ್ಯಾತ ಶಿವಶರಣರು ಮತ್ತು ವಚನಕಾರರಾಗಿದ್ದರು” ಎಂದರು.

“ಬಸವತತ್ವ ವೈಚಾರಿಕ ಚಿಂತನೆಯಲ್ಲಿ ಅರಳಿದ ಅವರು, ಉಪದೇಶಿಸಿರುವ ಜ್ಞಾನ ಸಂದೇಶಗಳನ್ನು ಅವಲೋಕನ ಮಾಡಿಕೊಳ್ಳುವುದರ ಮೂಲಕ ಅವುಗಳನ್ನು ತನುಮನಗಳಲ್ಲಿ ಕ್ರಿಯಾತ್ಮಕವಾಗಿ ರೂಪಿಸಿಕೊಳ್ಳುವ ಪ್ರಯತ್ನದೊಂದಿಗೆ ಅವರಿಗೆ ಸಲ್ಲಿಸುವ ನಮನ ನಿಜಕ್ಕೂ ಅರ್ಥಪೂರ್ಣ ಎನಿಸುತ್ತದೆ. ಭೋವಿ ಸಮಾಜಕ್ಕೆ ಸಿದ್ದರಾಮೇಶ್ವರರ ಕೊಡುಗೆ ಅಪಾರವಾಗಿದೆ” ಎಂದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವಕ್ರಾಂತಿ ರಾಜ್ಯ ಉಪಾಧ್ಯಕ್ಷ ಮಂಜುನಾಥ ಹಿರೇಮನಿ ಹಾಗೂ ಖ್ಯಾತ ಕುಸ್ತಿಪಟು ಬಸವರಾಜ ವಡ್ಡರ ಅವರನ್ನು ಸನ್ಮಾನಿಸಿದರು. ಅನ್ನ ಸಂತರ್ಪಣೆ ಜರುಗಿತು. ನಂತರ ಮಕ್ಕಳಿಂದ ಹಾಗೂ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ಸುದ್ದಿ ಓದಿದ್ದೀರಾ? ಮೈಸೂರು | ಫ್ಲೆಕ್ಸ್ ಅಳವಡಿಕೆಗೆ ನಿಷೇಧ; ಆದೇಶ ಉಲ್ಲಂಘನೆ ಆರೋಪ

ಶ್ರೀ ಸಿದ್ದರಾಮೇಶ್ವರ ಭೋವಿ ವಡ್ಡರ ಸಂಘದ ಅಧ್ಯಕ್ಷ ಬಸವರಾಜ ರುದ್ರಾಪುರ, ಮಾಜಿ ಪಾಲಿಕೆ ಸದಸ್ಯ ವೀರನಗೌಡ ಪಾಟೀಲ, ಮಂಜುನಾಥ ಭೋವಿ, ಶ್ರೀನಿವಾಸ ಉಣಕಲ್, ಸುನೀಲ ಮೋರೆ, ಮಂಜುನಾಥ ಕಮ್ಮಾರ, ಮಂಜುನಾಥ ಹಳಿಯಾಳ, ರಾಜು ರುದ್ರಪುರ, ಬಸಪ್ಪ ರುದ್ರಪುರ, ಬಸವರಾಜ ಆನೆಗುಂದಿ, ಸಂತೋಷ ರುದ್ರಾಪುರ, ರಾಮಣ್ಣ ರುದ್ರಾಪುತ, ತಿಮ್ಮಣ್ಣ ಬಂಡಿವಡ್ಡರ, ಹನುಮಂತ ಬಂಡಿವಡ್ಡರ, ರಾಜೇಶ್ವರಿ ರುದ್ರಾಪುರ, ಲಕ್ಷ್ಮೀ ಬಂಡಿವಡ್ಡರ, ತಿಮ್ಮವ್ವ ಬಂಡಿವಡ್ಡರ, ರಾಜೇಶ್ವರಿ ಮುತ್ತೂರು, ಹುಲುಗವ್ವ ಬಂಡಿವಡ್ಡರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...