ಧಾರವಾಡ | ಮನರೇಗಾ ಯೋಜನೆ ಅಡಿ ‘ಘೋಷಿತ ಮಾನವ ದಿನಗಳ’ ಕೆಲಸ ನೀಡುವಂತೆ ಆಗ್ರಹ

Date:

ಗೊಂಗಡಿಕೊಪ್ಪ ಮತ್ತು ಕ್ಯಾರಕೊಪ್ಪ ಗ್ರಾಮಗಳ ದುಡಿಯುವ ಜನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ‘ಘೋಷಿತ ಮಾನವ ದಿನಗಳ’ ಕೆಲಸವನ್ನು ಸಮರ್ಪಕವಾಗಿ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್‌) ಕಾರ್ಯಕರ್ತರು ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಎಐಎಂಎಸ್‌ಎಸ್‌ ಕಾರ್ಯಕರ್ತರು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.

“ಗ್ರಾಮೀಣ ಭಾಗದ ಜನರಿಗೆ ಅನೂಕೂಲವಾಗಲೆಂದು ಸರ್ಕಾರವು ತಂದಿರುವ ಮನರೇಗಾ ಯೋಜನೆ ಅಡಿಯಲ್ಲಿ ಗೊಂಗಡಿಕೊಪ್ಪ ಮತ್ತು ಕ್ಯಾರಕೊಪ್ಪ ಗ್ರಾಮದ ಕೂಲಿಕಾರರಿಗೆ ಈ ವರ್ಷ ಸಮರ್ಪಕ ಕೆಲಸ ದೊರೆತಿಲ್ಲ. ಬರಗಾಲದ ಕಾರಣ ದುಡಿಯುವ ಜನರು, ರೈತರು, ಕೃಷಿ-ಕೂಲಿ ಕಾರ್ಮಿಕರು ತೀವ್ರ ಸಮಸ್ಯೆಯಲ್ಲಿದ್ದಾರೆ. ಯಾವುದೇ ಉದ್ಯೋಗವಿಲ್ಲದೆ ಗ್ರಾಮಸ್ಥರು ಸಂಕಷ್ಟದಲ್ಲಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಯೋಜನೆ ಅಡಿ ಸಮರ್ಪಕವಾಗಿ ಕೆಲಸ ನೀಡದ ಕಾರಣ ಗ್ರಾಮದ ಜನರು ತಮ್ಮ ಜೀವನೋಪಾಯಕ್ಕಾಗಿ ಪಟ್ಟಣದ ದಾರಿ ಹಿಡಿಯುವಂತಾಗಿದ್ದು, ಕಡಿಮೆ ಕೂಲಿಗೆ ನೆರೆ ಊರುಗಳಿಗೆ ಹೋಗಿ ದುಡಿಯುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾರಡಗಿ ಮತ್ತು ಕ್ಯಾರಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ(ಪಿಡಿಒ) ಅಧಿಕಾರಿಗಳಿಗೆ ಈಗಾಗಲೆ ಮನರೇಗಾ ಕೆಲಸ ನೀಡುವಂತೆ ಕೋರಿ 6 ನಂಬರ್‌ ಫಾರ್ಮ್ ಸಲ್ಲಿಸಿ ಒಂದು ತಿಂಗಳು ಕಳೆದಿವೆ. ಆದರೆ ಅವರ ಕಡೆಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಕೆಲಸವನ್ನೂ ನೀಡಿಲ್ಲ. ಈ ಕಾರಣ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಿ, ಶೀಘ್ರದಲ್ಲಿಯೇ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ಪ್ರಾರಂಭಿಸಬೇಕು. ಸಂಪೂರ್ಣ ಮಾನವ ದಿನಗಳ ಕೆಲಸ ನೀಡಬೇಕು. ಈಗಾಗಲೇ 6 ನಂಬರ್ ಫಾರ್ಮ್ ಕೊಟ್ಟು ಒಂದು ತಿಂಗಳು ಕಳೆದಿರುವುದರಿಂದ ಕೂಡಲೇ ನಿರುದ್ಯೋಗ ಭತ್ಯೆ ನೀಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ಮನರೇಗಾ ಯೋಜನೆ ಅಡಿಯಲ್ಲಿ ನಿರಂತರ ಕೆಲಸ ನೀಡಬೇಕು. ಸಂಪೂರ್ಣ ಘೋಷಿತ ಮಾನವ ದಿನಗಳನ್ನು ನೀಡಬೇಕು. ಬರಗಾಲ ಘೋಷಿತ ತಾಲೂಕು ಆಗಿರುವುದರಿಂದ 50 ಮಾನವ ದಿನಗಳನ್ನು ಹೆಚ್ಚಿಗೆ ನೀಡಬೇಕು. ಈವರೆಗೆ ಕೆಲಸ ನೀಡದ ಕಾರಣ ನಿರುದ್ಯೋಗ ಭತ್ಯೆ ಬಿಡುಗಡೆಮಾಡಬೇಕು” ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಬಳಿಕ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳು ಹಾಗೂ ಮನರೇಗಾ ಅಧಿಕಾರಿಗಳು (ಎಡಿ) ಎರಡು ಗ್ರಾಮದ ಮನರೇಗಾ ಸಮಸ್ಯೆ ಪರಿಹರಿಸುವುದಾಗಿ ಭರವಸೆಕೊಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಬೇಕು: ಎಐಟಿಯುಸಿ ಜಿಲ್ಲಾಧ್ಯಕ್ಷ

ಈ ಸಂದರ್ಭದಲ್ಲಿ ಮನರೇಗಾ ಅಧಿಕಾರಿಗಳು (AD) ಉಪಸ್ಥಿತರಿದ್ದರು. ಎಐಎಮ್‌ಎಸ್‌ ಧಾರವಾಡ ಜಿಲ್ಲಾಧ್ಯಕ್ಷ ಮಧುಲತಾ ಗೌಡರ್‌, ಜಿಲ್ಲಾ ಕಾರ್ಯದರ್ಶಿ ಗಂಗೂಬಾಯಿ ಕೊಕರೆ, ಗ್ರಾಮ ಘಟಕಗಳ ಸದಸ್ಯರುಗಳಾದ ಮಾಸಬ್ಬಿ ಅಗಸಿಮನಿ, ಕಾಶವ್ವ ತಲ್ವಾರ್, ಮುರಗಮ್ಮ ಗರಗದ, ಶೋಭಾ ಹಿರೆಮಠ, ಶಂಕ್ರಮ್ಮ ಮಲ್ಲಿಗವಾಡ, ಹುಸೇನ ಸಾಬ್ ಎಲಿಗಾರ್, ಹನಮಂತ ಕರಿಕಟ್ಟಿ ಸೇರಿದಂತೆ ಇತರರು ಇದ್ದರು.

ವರದಿ: ದೇವಮ್ಮ ದೇವತ್ಕಲ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...