ಧಾರವಾಡ | ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಆಗ್ರಹ

Date:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 4 ತಿಂಗಳಿಂದ ವೇತನ ಸಿಗದೆ ಪರಿತಪಿಸುವಂತಾಗಿದೆ. ಹಾಗಾಗಿ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಿ, ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ ಉಮಾದೇವಿ ಒತ್ತಾಯಿಸಿದರು.

ಧಾರವಾಡ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಜಿಲ್ಲೆಯಾದ್ಯಂತ ಮಕ್ಕಳ ಆರೋಗ್ಯದ ವಿಷಯವಾಗಲಿ ಅಥವಾ ಅವರಿಗೆ ಪೌಷ್ಠಿಕ ಆಹಾರ ತಲುಪಿಸುವ ವಿಷಯವಾಗಿರಲಿ ಕಳೆದ 50 ವರ್ಷಗಳಿಂದ ಈ ದಿಶೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ಐಸಿಡಿಎಸ್ ಯೋಜನೆಯನ್ನು ಜಿಲ್ಲೆಯ ಪ್ರತಿಯೊಂದು ಮನೆಗೆ ಮುಟ್ಟಿಸಿ ಸದೃಢ ಮಕ್ಕಳನ್ನು ಬೆಳೆಸಲು ಪ್ರತಿ ಮಗುವನ್ನು ತಮ್ಮ ಮಗುವೆಂದೇ ಸಲಹುತ್ತಿರುವವರು ಇದೇ ತಾಯಂದಿರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವರ ಗೋಳು-ಸಮಸ್ಯೆಗಳು ಮಾತ್ರ ಯಾರಿಗೂ ಬೇಡವಾಗಿವೆ. ಇಂದಿನ ಬೆಲೆ ಏರಿಕೆ ದಿನಗಳಲ್ಲಿ ನಾಲ್ಕು ತಿಂಗಳಿನಿಂದ ಇವರಿಗೆ ಗೌರವಧನ ಬಾರದೇ ಇವರ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಇಂದು ನಿಯಮಿತವಾಗಿ ಸಂಬಳ ದೊರಕುವ ಸರ್ಕಾರಿ ನೌಕರರೇ ಒಂದು ತಿಂಗಳು ವೇತನ ಬರದಿದ್ದಾಗ ಪರದಾಡುವಂತಹ ಸಂಭವವಿರುವ ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ನಾಲ್ಕು ತಿಂಗಳಿನಿಂದ ಇವರುಗಳು ಬದುಕನ್ನು ಹೇಗೆ ಎದುರಿಸುತ್ತಿರಬಹುದು” ಎಂದು ಪ್ರಶ್ನಿಸಿರಬಹುದು.

“ಇವರುಗಳು ಎದುರಿಸುತ್ತಿರುವ ಸಮಸ್ಯೆಗಳು ಹಲವಾರು. ಮಕ್ಕಳಿಗೆಂದು ಕೊಡುವ ಮೊಟ್ಟೆಗಳು ತಿಂಗಳ ಮೊದಲನೇ ದಿನ ಕೇಂದ್ರಕ್ಕೆ ಬರುವುದು ಬಿಟ್ಟು 15ನೇ ತಾರೀಖಿಗೆ ಬರುತ್ತವೆ. ಅದರಲ್ಲಿ ಕೊಳತಿರುವ ಮೊಟ್ಟೆಗಳು ಬರುತ್ತಿದ್ದು ಯಾವುದೇ ಗುಣಮಟ್ಟ ಇರುವುದಿಲ್ಲ. ಇನ್ನೂ ಹಲವಾರು ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಗಳಿಗೆ ಹಲವಾರು ತಿಂಗಳ ಬಾಡಿಗೆ ಬಂದಿಲ್ಲ” ಎಂದು ಆರೋಪಿಸಿದರು.

“ಹಲವಾರು ಜ್ವಲಂತ ಸಮಸ್ಯೆಗಳಿಂದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಬಳಲುತ್ತಿದ್ದು, ಅವರ ನ್ಯಾಯಯುತ ಹಕ್ಕುಗಳನ್ನು ಪೂರೈಸನೇಕು ಎಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಧಾರವಾಡ ಜಿಲ್ಲಾ ಘಟಕದ ಕಾರ್ಯಕರ್ತೆಯರು ಆಗ್ರಹಿಸಿದರು.

“ಕಳೆದ 4 ತಿಂಗಳುಗಳಿಂದ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಐದು ತಿಂಗಳಿನಿಂದ ಬಾಕಿ ಇರುವ ತರಕಾರಿ ಬಿಲ್ಲನ್ನು ಪಾವತಿಸಬೇಕು. ಧಾರವಾಡ ಶಹರ ವೃತ್ತದಲ್ಲಿ ಕೂಡಲೇ ಬಾಕಿ ಇರುವ ಮೊಟ್ಟೆ ಬಿಲ್ ಮತ್ತು ಬಾಡಿಗೆ ಬಿಲ್ಲುಗಳನ್ನು ಕೂಡಲೇ ಪಾವತಿಸಬೇಕು. ಎಚ್‌ಎನ್‌ಎಸ್ ಸರ್ವೆಯ ₹500 ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ

“ಜಿಲ್ಲೆಯಲ್ಲಿ ನಿವೃತ್ತಿ ಹೊಂದಿದ ಕಾರ್ಯಕರ್ತರಿಗೆ ಆದೇಶದಂತೆ ಇಡಿಗಂಟನ್ನು ಯಾವುದೇ ವಿಳಂಬವಿಲ್ಲದೆ ನೀಡಬೇಕು. ರಾಜ್ಯ ವ್ಯಾಪಿ ಒಂದೇ ಸಮವಸ್ತ್ರ ನೀಡಲು ಕ್ರಮ ಕೈಗೊಳ್ಳಬೇಕು. ಸೇವಾ ಹಿರಿತನದ ಆಧಾರದ ಮೇಲೆ ಅರ್ಹ ಕಾರ್ಯಕರ್ತರಿಗೆ ಮೇಲ್ವಿಚಾರಕರಾಗಲು ಮುಂಬಡ್ತಿ ನೀಡಬೇಕು. ಐಸಿಡಿಎಸ್ ಯೋಜನೆಯ ಕೆಲಸಗಳನ್ನು ಬಿಟ್ಟು ಉಳಿದ ಯಾವುದೇ ಕೆಲಸಗಳನ್ನು ಕಾರ್ಯಕರ್ತೆಯರಿಗೆ ವಹಿಸಬಾರದು. ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು” ಎಂದು ಆಗ್ರಹಿಸಿದರು.

ಭುವನಾ ಬಳ್ಳಾರಿ ಜಿಲ್ಲಾ ಸಂಚಾಲಕಿ ಸೇರಿದಂತೆ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...