ಧಾರವಾಡ | ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಸೂಚಿಸುವ ಮಾರ್ಗದರ್ಶಿ: ಸಂಗಮೇಶ ಸ್ವಾಮೀಜಿ

Date:

ಸಮಾಜಕ್ಕೆ ಪ್ರಯೋಜನವಾಗುವ ಕೆಲಸ ಯಾವುದೇ ರೂಪದಲ್ಲಿ ಇದ್ದರೂ ಅದು ಜನರನ್ನು ತಲುಪುತ್ತದೆ ಎಂದು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ‌ಮಠದ ಸಂಗಮೇಶ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ‌ಮಠದಲ್ಲಿ ಜನಜಾಗೃತಿ ಸಂಘದ 2024 ಸ್ಟೆಪ್ಸ್‌ ದಿನದರ್ಶಿಕೆಗಳನ್ನು‌ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.

“ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಮತ್ತು‌ ಸಮಯಪಾಲನೆ ಸೂಚಿಸುವ ಮಾರ್ಗದರ್ಶಿಗಳು. ನಿತ್ಯದ ಕಾಯಕಗಳಿಗೆ ಸೂಕ್ತ ದಿನ ಮತ್ತು ಸಮಯ ನಿರ್ಧರಿಸಿಕೊಳ್ಳಲು ಬಹು ಉಪಕೃತ ಸಾಧನಗಳು. ಜನಜಾಗೃತಿ ಸಂಘವು ಕಳೆದ ಕೆಲವು ವರ್ಷಗಳಿಂದ ಕ್ಯಾಲೆಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತಿರುವುದು ಸ್ತುತ್ಯ ಕಾರ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಘದ ಅಧ್ಯಕ್ಷ ಬಸವರಾಜ ಕೊರವರ ಅವರು ಸದಾ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಜನೋಪಕಾರಿ ಎನಿಸಿದ್ದಾರೆ. ಅವರ ಸಮಾಜ ಸೇವೆ ನಿರಂತರವಾಗಲಿ” ಎಂದು ಸ್ವಾಮೀಜಿ ಹಾರೈಸಿದರು.

ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ‌ ಕೊರವರ ಮಾತನಾಡಿ, “ಕ್ಯಾಲೆಂಡರ್‌ಗಳು
ಜನರು ಮಾರುಕಟ್ಟೆಯಲ್ಲಿ ಕೊಳ್ಳಲೇಬೇಕಾದ ಅವಶ್ಯಕ‌ ವಸ್ತುವಾಗಿದೆ. ಕೆಲವರಿಗೆ ಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ನನ್ನ ದುಡಿಮೆಯಲ್ಲಿನ ಹಣವನ್ನು ವ್ಯಯಿಸಿ ಕ್ಯಾಲೆಂಡರ್ ವಿತರಿಸಲಾಗುತ್ತಿದೆ. ಜನರ ಪ್ರೀತಿ, ವಿಶ್ವಾಸವನ್ನು ಕಾಪಾಡಿಕೊಳ್ಳುವುದೇ ಕ್ಯಾಲೆಂಡರ್ ವಿತರಣೆಯ ಉದ್ದೇಶ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

ಗ್ರಾಮ ಪಂಚಾಯಿತಿ ಅಧ್ಯಕ್ಷ ‌ನಾಗೇಶ ಹಟ್ಟಿಹೊಳಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಬಸವಪ್ರಭು ಹುಂಬೇರಿ, ಜನಜಾಗೃತಿ ಸಂಘದ ಉಪಾಧ್ಯಕ್ಷ ನಾಗರಾಜ‌ ಕಿರಣಗಿ, ಎಪಿಎಂಸಿ ಮಾಜಿ ಅಧ್ಯಕ್ಷ ಚೆನ್ನವೀರಗೌಡ ಪಾಟೀಲ, ಮಳೆಪ್ಪಜ್ಜನ ಮಠದ ಟ್ರಸ್ಟ್ ಕಮಿಟಿ ಉಪಾಧ್ಯಕ್ಷ ಈಶ್ವರ ಗಾಣಿಗೇರ, ಭಾರತ ಸೇವಾದಳ ತಾಲೂಕ ಅಧ್ಯಕ್ಷ ಮಂಜುನಾಥ ತಿರ್ಲಾಪೂರ, ಕರೆಪ್ಪ ಬಳಿಗೇರ, ಸಿದ್ದಪ್ಪ ಜೈನರ್, ಗೌರಪ್ಪ ಹುಂಬೇರಿ, ವಿರೂಪಾಕ್ಷ ಹೊಸಕೇರಿ, ಶಂಕ್ರಪ್ಪ‌ ದುಬ್ಬನಮರಡಿ, ಈರಪ್ಪ ತೇಗೂರ‌‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...