ಧಾರವಾಡ | ಶೈಕ್ಷಣಿಕ ಪ್ರಗತಿಯೊಂದೇ ಸಮುದಾಯದ ಉನ್ನತಿಗೆ ಕಾರಣ: ಶಿವಲೀಲಾ ವಿನಯ ಕುಲಕರ್ಣಿ

Date:

ಮುಸ್ಲಿಂ ಸಮುದಾಯವು ಶೈಕ್ಷಣಿಕವಾಗಿ ಮತ್ತು ಹಲವು ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಪ್ರಗತಿ ಹೊಂದಲು ಶೈಕ್ಷಣಿಕ ಜಾಗೃತಿಯೊಂದೇ ಪರಿಹಾರ ಮತ್ತು ಸಮುದಾಯಕ್ಕೆ ನೌಕರರ ಕೊಡುಗೆ ಅವಶ್ಯಕ ಎಂದು ವೈಶುದೀಪ ಪೌಂಡೇಶನ್ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಹೇಳಿದರು.

ಧಾರವಾಡದ ನೌಕರರ ಭವನದಲ್ಲಿ ನಡೆದ ಮುಸ್ಲಿಂ ಮುಖಂಡರಿಗೆ ಒಂದು ದಿನದ ಕಾರ್ಯಾಗಾರ ಹಾಗೂ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧಕರಿಗೆ ಮತ್ತು ಗರಿಷ್ಠ ದಾಖಲಾತಿ ಹೊಂದಿದ ಶಾಲೆಗಳಿಗೆ ಸನ್ಮಾನ ಸಮಾರಂಭ ಕಾರ್ಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಎಐಪಿಟಿಎಫ್‌ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, “ಸಾಮಾಜಿಕ ನ್ಯಾಯದ ಹಿನ್ನಲೆಯಲ್ಲಿ ನೌಕರರ ಮತ್ತು ಶಿಕ್ಷಕರ ಸಂಘಟನೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡಬೇಕು. ಒಗ್ಗಟ್ಟಾಗಿ ಮುಂದುವರೆಯಿರಿ ಮತ್ತು ಸಂಘದ ಚಟುವಟಿಕೆಗಳಿಗೆ ಸದಾ ಬೆಂಬಲ‌ ಇರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ‌ ಎಸ್ ಎಫ್ ಸಿದ್ಧನಗೌಡ್ರು ಮಾತನಾಡಿ, “ಈ ಸಂಘವು ಕ್ರಿಯಾಶೀಲವಾಗಿ ಸೇವೆ ಸಲ್ಲಿಸುತ್ತಿದ್ದು, ತನ್ನ ಕಾರ್ಯಗಳ ಮೂಲಕ ಸದಸ್ಯರ ಮನಗೆದ್ದಿದೆ” ಎಂದರು.

ಸಂಸ್ಥಾಪಕ ರಾಜ್ಯಾಧ್ಯಕ್ಷ ಜನಾಬ ಮಹಮದ್ ಸಲೀಮ್ ಹಂಚಿನಮನಿಯವರು ಪ್ರಾಸ್ತಾವಿಕವಾಗಿ ಮಾತನಾಡಿ, “ಸಮುದಾಯಕ್ಕೆ ನಾವು ನಮ್ಮ ಕೊಡುಗೆಯನ್ನು ನೀಡುತ್ತಾ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿಗಾಗಿ ಸಂಘದ ಸ್ಥಾಪನೆಯಾಗಿದೆ” ಎಂದರು.

ಜಿಲ್ಲಾಧ್ಯಕ್ಷ ಆರ್ ಎಂ ದಫೇದಾರರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ನೌಕರರ ಹಿತ ಕಾಪಾಡುವುದರ ಜತೆಗೆ ಸಮುದಾಯಕ್ಕೆ ಶೈಕ್ಷಣಿಕ ಮಹತ್ವವನ್ನು ತಿಳಿಸುವ ಕಾರ್ಯ ಮಾಡುತ್ತಾ ಸಮುದಾಯದ ಪ್ರತಿಭೆಗಳನ್ನು ಇಂತಹ ಕಾರ್ಯಕ್ರಮದ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ” ಎಂದರು.

ಮುಸ್ಲಿಂ ಸಮುದಾಯಕ್ಕೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ‌ಹಲವು ಇಲಾಖೆಗಳ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರ ನಡೆಸಿದರು. ಇದೇ ವೇಳೆ 124 ವಿದ್ಯಾರ್ಥಿಗಳಿಗೆ ಸನ್ಮಾನ, 20 ಶಾಲೆಗಳಿಗೆ ಪ್ರಶಸ್ತಿ ಮತ್ತು 17 ಜನ ವಿಶೇಷ ಸಾಧಕರಿಗೆ ಪುರಸ್ಕರಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾವಯವ ಪದ್ದತಿಯಲ್ಲಿ ತೊಗರಿ ಬೆಳೆ

ಈ ಸಮಾರಂಭದಲ್ಲಿ ದೇವಿದಾಸ್ ಶಾಂತಿಕರ, ಎಂ ಯು ಶಿರಹಟ್ಟಿ, ಎಸ್ ಎಂ ಹುಡೇದಮನಿ, ಅಕ್ಬರ್ ಅಲಿ ಖಾಜಿ, ಫರೀದಾ ನದಾಫ್, ಪೀರವಾಲೆ, ಶಾನವಾಜ್ ಪಠಾಣ್, ಸಲೀಮಾಬಿ ಕೋಳೂರ, ನಫೀಸಾ ದಾವಲಸಾಬನವರ, ಫರ್ಹಾತ್ ಜಲಗೇರಿ, ಜುಬೇರ್ ಖಂಡುನಾಯ್ಕ್, ಎ ಎ ಚಕೋಲಿ, ಎ ಕೆ ಮುಜಾವರ, ಎನ್ ಆರ್ ಪಟೇಲ್, ಸಂಗ್ರೇಶಕೊಪ್ಪ, ಅಕ್ಬರ್, ಎ ಆರ್ ಅಕ್ಕಿ, ಜಿಮಖಾನೆ, ನಸ್ರೀನ್ ಪಾಚಾಪುರ, ಜಾವೇದ್, ಅಬಿದಾ ಮುಲ್ಲಾ, ಅಬುತಾಹೀರ್ ಮುಲ್ಲಾ, ಜಾವೇದ್ ಖತೀಬ್ ಸೇರಿದಂತೆ ಹಲವು ಗಣ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...