ಧಾರವಾಡ | ಡಿಸೆಂಬರ್ 23ರಿಂದ ಮೂರು ದಿನ ಕಟ್ಟಡ ಸಾಮಗ್ರಿ, ಗೃಹ ಅಲಂಕಾರಿಕ ವಸ್ತು ಪ್ರದರ್ಶನ

Date:

ಧಾರವಾಡದ ಮಧ್ಯವರ್ತಿ ಸ್ಥಳ ಕಲಾಭವನದಲ್ಲಿ ಇದೇ ಡಿಸೆಂಬರ್ 23, 24 ಹಾಗೂ 25ರಂದು ಕಟ್ಟಡ ಸಾಮಗ್ರಿಗಳ ಹಾಗೂ ಗೃಹ ಅಲಂಕಾರಿಕ ವಸ್ತುಗಳ ಪ್ರದರ್ಶನ ಬಿಲ್ಟ್ ಎಕ್ಸ್‌ಪೂ 2023 ನಡೆಸಲು ಉದ್ದೇಶಿಸಿದ್ದೇವೆ ಎಂದು ಎಸಿಸಿಇ ಧಾರವಾಡದ ಅಧ್ಯಕ್ಷ  ಸುನೀಲ ಬಾಗೇವಾಡಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ವಸ್ತು ಪ್ರದರ್ಶನವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್,  ದಿ.23ರಂದು ಬೆಳಿಗ್ಗೆ 10.30ಕ್ಕೆ ಕಲಾಭವನದ ಆವರಣದಲ್ಲಿ  ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ವಿನಯ್ ಕುಲಕರ್ಣಿ ಇವರನ್ನು ಆಹ್ವಾನಿಸಲಾಗಿದೆ.

ಬೆಳಿಗ್ಗೆ 10:00ರಿಂದ ರಾತ್ರಿ 8. 30ವರೆಗೆ ಸಾರ್ವಜನಿಕರಿಗಾಗಿ ಉಚಿತವಾಗಿ ವೀಕ್ಷಣೆಗಾಗಿ  ತೆರೆದಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರದರ್ಶನವನ್ನು ವೀಕ್ಷಿಸಿ ಇದರ ಲಾಭ ಪಡೆದುಕೊಳ್ಳಬೇಕಾಗಿ ಈ ಮೂಲಕವಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಲ್ಟ್ ಎಕ್ಸ್‌ಪೊದಲ್ಲಿ ಭಾಗವಹಿಸುವವರುಈ ಪ್ರದರ್ಶನದಲ್ಲಿ ಒಟ್ಟು 56 ಮಳಿಗೆಗಳಿದ್ದು ಬಹು ರಾಷ್ಟ್ರೀಯ ಉದ್ಯಮದಾರರಿಂದ ಹಿಡಿದು ಸಣ್ಣ ಉದ್ದಿಮೆದಾರರು ತಮ್ಮ ತಮ್ಮ ಉತ್ಪಾದನೆಗಳ ಪರಿಚಯವನ್ನು ಮಾಡಿಕೊಡುಲಿದ್ದಾರೆ.

ಅಸೋಸಿಯೇಷನ್‌ನಿಂದ ಇದು ಒಂದು ಸಾರ್ವಜನಿಕ ಸೇವೆಯಾಗಿದ್ದು ಕಟ್ಟಡ ನಿರ್ಮಾಣಕಾರರು ಹಾಗೂ ಸಂಬಂಧಪಟ್ಟ ಎಲ್ಲ ವರ್ಗದವರು ಇದರ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು, ಇದಲ್ಲದೆ ಇಂಜಿನಿಯರಿಂಗ್ನಲ್ಲಿ ಓದುತ್ತಿರುವ ಹಾಗೂ ಇಂಜಿನಿಯರಿಂಗ್ ಮುಗಿಸಿ ಕಟ್ಟಡ ನಿರ್ಮಾಣವೃತ್ತಿಗೆ ಪುವೇಶಿಸುವ ಎಲ್ಲರೂ ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದರು.

ಈ ಪ್ರದರ್ಶನವು ಕಟ್ಟಡ ನಿರ್ಮಾಣದ ಕುಶಲಕರ್ಮಿಗಳಿಗೆ, ವಾಸ್ತುಶಿಲ್ಪಿಗಳಿಗೆ, ಜನಸಾಮಾನ್ಯರಿಗೆ ಹೊಸ ಹೊಸ ಆಧುನಿಕ ಮಾದರಿಯ ವಸ್ತುಗಳ ಪರಿಚಯ, ಗುಣಮಟ್ಟದ ಮಾಹಿತಿ, ದರ ಹಾಗೂ ಇವುಗಳು ಸಿಗುವ ಸ್ಥಳ ಮುಂತಾದ ಮಾಹಿತಿಗಳನ್ನು ನೀಡುತ್ತದೆ.

ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಹೊಸ ಇಂಜಿನಿಯರ್‌ಗಳು ಹೊಸ ಹೊಸ ಮಾಹಿತಿಯನ್ನು ಬಿಲ್ಡ್ ಎಕ್ಸ್ ನೀಡುತ್ತದೆ. ಹೊಸ ಹೊಸ ಸಣ್ಣ ಪುಮಾಣದ ಉದ್ಧಿಮಗಳಾದ ಸಿಮೆಂಟ್ ಬ್ಲ್ಯಾಕ್ ತಯಾರಿಕಾ ಘಟಕ, ರೆಡಿಮೇಡ್ ಕಾಂಪೌಂಡ್ ವಾಲ್, ತಯಾರಿಕ ಘಟಕ, ಸಿಮೆಂಟ್ ಪೈಪುಗಳ ತಯಾರಿಕ ಘಟಕ, ಅದೇ ರೀತಿ ಕಟ್ಟಿಗೆಯ ಸಣ್ಣ ಉದ್ಯಮಿಗಳಾದ ಗ್ರಹ ಅಲಂಕಾರಿಕ ವಸ್ತುಗಳ ತಯಾರಿಕಾ ಘಟಕಗಳು, ಸೋಫಾ, ಕುರ್ಚಿಗಳು, ವಾರ್ಡೋಬ್‌ಗಳು ಹೀಗೆ ಇನ್ನೂ ಅನೇಕ ಸಣ್ಣ ಉದ್ಯಮಿಗಳಿಗೆ ಬಿಲ್ಟ್ ಎಕ್ಸ್ ಪುಚಾರ ಹಾಗೂ ಉತ್ತೇಜನವನ್ನು ನೀಡುತ್ತದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ವಿಜಯೇಂದ್ರ ಗೌಡ  ಪಾಟೀಲ, ಅರುಣ ಶಿಲವಂತ, ವೀರಣ್ಣ ಹವಾಲ್ದಾರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...