ಧಾರವಾಡ | ಹೂವಿನ ಬೆಲೆ ಕುಸಿತ; ಸಂಕಷ್ಟದಲ್ಲಿ ಬೆಳೆಗಾರರು

Date:

ಹೂವಿನ ಬೆಲೆ ಭಾರಿ ಕುಸಿತಕಂಡಿದ್ದು,ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ಬೆಳೆ ಹೊಲದಲ್ಲೇ ಕಮರುತ್ತಿದೆ. ಸೇವಂತಿ ಕೆ.ಜಿಗೆ 15ರಿಂದ 20 ರೂ. ಚೆಂಡು ಹೂವು ಕೆ.ಜಿಗೆ 10ರೂ.ಗೆ ಇಳಿದರೆ, ಗುಲಾಬಿ ಒಂದು ಕಟ್ಟಿಗೆ 60ರೂಗೆ ಕುಸಿದಿದೆ. ಆದರೆ, ಮಾರುಕಟ್ಟೆಗೆ ಹೂವು ಹೆಚ್ಚು ಬರುತ್ತಿದೆ.

ಬೆಳೆಗಾರರು 25 ಕೆ.ಜಿ ಸೇವಂತಿ ಚೀಲಕ್ಕೆ 200ರೂ. ಚೆಂಡು ಹೂವು ರೂ.100ಕ್ಕೆ ಹರಾಜು ಕೂಗಿದರೂ ಖರೀದಿಗೆ ಖರೀದಿಗೆ ಮುಂದೆ ಬರುತ್ತಿಲ್ಲ. ದೀಪಾವಳಿ ಸಮಯದಲ್ಲಿ ಕೆ.ಜಿ ಸೇವಂತಿ 60ರಿಂದ 80ರೂಪಾಯಿ, ಚೆಂಡು ಹೂವು 50ರಿಂದ 60ರೂ. ಇತ್ತು. ಗುಲಾಬಿ ಕಟ್ಟಿಗೆ ₹100 ಇತ್ತು.

ಧಾರವಾಡ ತಾಲೂಕಿನ ಕುರುಬಗಟ್ಟಿ, ಗೋವನಕೊಪ್ಪ, ಚಂದನಮಟ್ಟಿ, ಜಿರಿಗವಾಡ, ಹಳ್ಳಿಗೇರಿ ಭಾಗದಲ್ಲಿ ರೈತರು ಹೂವು ಬೆಳೆದಿದ್ದಾರೆ. ಈ ಬಾರಿ ಮಳೆ ಕೈಕೊಟ್ಟಿದೆ. ನೀರಾವರಿ ಪ್ರದೇಶಗಳ ಹಲವು ರೈತರು ಹೂವು ಬೆಳೆದಿದ್ದಾರೆ. ಫಸಲು ಚೆನ್ನಾಗಿದೆ. ಆದರೆ, ಬೆಲೆ ಕುಸಿದಿರುವುದರಿಂದ ರೈತರು ನಷ್ಟ ಅನುಭವಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಬ್ಬ, ಪೂಜೆ, ಗೃಹಪ್ರವೇಶ, ಮದುವೆ, ಸಭೆ-ಸಮಾರಂಭಗಳಿಗೆ ಜನರು ಹೂವು ಖರೀದಿಸುತ್ತಾರೆ. ಈ ಭಾಗದ ರೈತರು ಹುಬ್ಬಳ್ಳಿ, ಧಾರವಾಡ ಮಾರುಕಟ್ಟೆಗೆ ಒಯ್ಯುತ್ತಾರೆ.

ನಾಲ್ಕು ಎಕರೆಯಲ್ಲಿ ಹೂವು ಬೆಳೆದಿದ್ದೇನೆ. ಈವರೆಗೆ 2ಲಕ್ಷ ರೂ. ಖರ್ಚಾಗಿದೆ. ಬೆಳೆ ಚೆನ್ನಾಗಿದೆ. ಕಟಾವು ಮಾಡಲು ತಲಾ 300ರೂ. ಕೂಲಿ ಇದೆ. ಒಮ್ಮೆ ಕಟಾವು ಮಾಡಿದರೆ 7ರಿಂದ 8ಕ್ವಿಂಟಲ್ ಹೂವು ಸಿಗುತ್ತದೆ. ಈಗಿನ ಬೆಲೆಗೆ ಮಾರಾಟ ಮಾಡಿದರೆ ಸಾಗಣೆ, ಕೂಲಿ ವೆಚ್ಚವೂ ಗಿಟ್ಟಲ್ಲ ಎನ್ನುತ್ತಾರೆ ಹೂವು ಬೆಳೆದ ರೈತರು.

‘ಪಾವಳಿ ಹಬ್ಬದಲ್ಲಿ ಎರಡು ದಿನ ಹೂವಿಗೆ ಬೆಲೆ ಚೆನ್ನಾಗಿತ್ತು. ನಂತರ ಕುಸಿದಿದೆ. ಹೊರ ರಾಜ್ಯಗಳಿಗೆ ಕೊಂಡೊಯ್ದು ಮಾರಾಟ ಮಾಡುವುದು ಕಷ್ಟ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ ಹೂವಿನ ಬೆಳೆಗಾರರ ಸ್ಥಿತಿ ಎಂದು ತಮ್ಮ ಬೇಸರ ಹೊರಹಾಕುತ್ತಿದ್ದಾರೆ.

ಹೂವು ಖರೀದಿ ಮಾರಾಟಕ್ಕೆ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಬೇಕು. ಇಲ್ಲಿಂದ ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಸಾಗಿಸುವ ವ್ಯವಸ್ಥೆ ಮಾಡಬೇಕು, ಸರ್ಕಾರ ಹೂವು ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...