ಧಾರವಾಡ | ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾಪವನ್ನು ಸರ್ಕಾರ ಕೈಬಿಡಬೇಕು; ಎಐಡಿಎಸ್‌ಒ ಆಗ್ರಹ

Date:

ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ವೃದ್ಧಿಸಿ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಿ, ಶಾಲೆಗಳನ್ನು ಬಲಪಡಿಸಬೇಕು. ಒಂದೇ ಒಂದು ಸರ್ಕಾರಿ ಶಾಲೆಯನ್ನು ರಾಜ್ಯದಲ್ಲಿ ಮುಚ್ಚಬಾರದು ಎಂದು ಎಐಡಿಎಸ್‌ಒ ಆಗ್ರಹಿಸಿದೆ.

ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾಪವನ್ನು ಖಂಡಿಸಿ ಸಂಘಟನೆ ಧಾರವಾಡ ಜಿಲ್ಲಾ ಉಪಾಧ್ಯಕ್ಷ ಶಶಿಕಲಾ ಮೇಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಕರ್ನಾಟಕ ರಾಜ್ಯದಲ್ಲಿ, ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಹಲವು ಶಾಸಕರು ತಮ್ಮ ಬಳಿ ಮನವಿ ಸಲ್ಲಿಸಿದ್ದಾರೆ ಎಂದು ಮಾನ್ಯ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿಕೆ ನೀಡಿದ್ದಾರೆ ಹಾಗೂ ಈ ಕುರಿತು ಮಾನ್ಯ ಮುಖ್ಯಮಂತ್ರಿಯವರ ಜೊತೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ಇರುವ ಮತ್ತೊಂದು ಹೆಸರು ವಿಲೀನ ಎಂಬುದು ಎಲ್ಲ ಶಿಕ್ಷಣ ಪ್ರೇಮಿ ಜನರಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ತಿಳಿದ ವಿಚಾರ” ಎಂದು ಹೇಳಿದ್ದಾರೆ.

“ಸರ್ಕಾರಿ ಶಾಲೆಗಳ ವಿಲೀನವು ಎನ್‌ಇಪಿ 2020ರ ಹಲವು ಶಿಫಾರಸ್ಸುಗಳಲ್ಲಿ ಒಂದಾಗಿದೆ. ಕಳೆದ ವರ್ಷ ಹಿಂದಿನ ಸರ್ಕಾರ ಇದೇ ವಿಲೀನದ ಹೆಸರಿನಲ್ಲಿ ರಾಜ್ಯದ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಾಗ ಆ ನಿರ್ಧಾರದ ವಿರುದ್ಧ ಸಾರ್ವಜನಿಕ ಶಿಕ್ಷಣ ಉಳಿಸಿ ಎಂಬ ಘೋಷಣೆಯ ಅಡಿಯಲ್ಲಿ ಬೃಹತ್ ಜನಾಂದೋಲನ ಜರುಗಿ, ಸರ್ಕಾರ ತನ್ನ ನಿಲುವನ್ನು ಮುಂದುವರಿಸಲಿಲ್ಲ. ಪ್ರಸ್ತುತ ಸರ್ಕಾರ ಎನ್.ಈ. ಪಿ 2020ಅನ್ನು ರಾಜ್ಯದಲ್ಲಿ ಅನುಷ್ಠಾನ ಗೊಳಿಸುವುದಿಲ್ಲ ಎಂದು ಹೇಳುತ್ತಲೇ, ಸರ್ಕಾರಿ ಶಾಲೆಗಳ ವಿಲೀನದ ಪ್ರಸ್ತಾವನೆಯನ್ನು ಚರ್ಚಿಸುತ್ತೇವೆ ಎಂದು ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

“ಸರ್ಕಾರಿ ಶಾಲೆಗಳ ದಾಖಲಾತಿ ಕುಸಿದರೆ, ಅದಕ್ಕೆ ಸಂಪೂರ್ಣ ಹೊಣೆಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಶಾಲೆಗಳ ಮೂಲಭೂತ ಪರಿಸ್ಥಿತಿ ಸುಧಾರಿಸಿದರೆ ತಾನಾಗೇ ಶಾಲೆಗಳು ಬಲಿಷ್ಟಗೊಳ್ಳುತ್ತವೆ ಹಾಗೂ ದಾಖಲಾತಿ ಪ್ರಮಾಣ ಏರಿಕೆಯಾಗುತ್ತದೆ. ಮಾನ್ಯ ಶಿಕ್ಷಣ ಮಂತ್ರಿಗಳೇ ಹೇಳಿರುವಂತೆ, ಸಾವಿರಾರು ಶಿಕ್ಷಕರ ಹುದ್ದೆಗಳು ಭರ್ತಿಯಾಗದೇ ಉಳಿದಿದ್ದು, ರಾಜ್ಯವ್ಯಾಪಿ ಸಾವಿರಾರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಇಲ್ಲ ಅಥವಾ ಒಬ್ಬರೇ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಲವು ಜಿಲ್ಲೆಗಳಲ್ಲಿ ಈ ಭೀಕರ ಶಿಕ್ಷಕರ ಕೊರತೆಯ ಕುರಿತು ಪ್ರತಿ ದಿನ ಹಲವು ವರದಿಗಳು ಬರುತ್ತಿವೆ. ಈ ಪರಿಸ್ಥಿತಿಗೆ ಹಲವು ಸರ್ಕಾರಗಳ ನೀತಿಗಳೇ ಕಾರಣವಾಗಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...