ಧಾರವಾಡ | ಬ್ಯಾಂಕ್‌ ರಾಷ್ಟ್ರೀಕರಣದಲ್ಲಿ ಜಗಜೀವನರಾಮ್‌ ಪಾತ್ರ ಪ್ರಮುಖ: ಪ್ರೊ. ಪ್ರಕಾಶ ಎಸ್ ಕಾಂಬ್ಳೆ

Date:

ಡಾ. ಬಾಬು ಜಗಜೀವನರಾಮ್ ಅವರು ರಾಷ್ಟ್ರದ ಪ್ರಗತಿಗೆ ಒತ್ತುಕೊಡುವ ಕೊಡುವ ಮೂಲಕ ಹಲವಾರು ಸಾಮಾಜಿಕ ಚಳುವಳಿಯನ್ನು ಕಟ್ಟಿ ಹೋರಾಡಿದವರು. ಅಷ್ಟೇ ಅಲ್ಲದೇ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವುದರಲ್ಲಿಯೂ ಕೂಡ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಕೊಲ್ಹಾಪುರದ ಶಿವಾಜಿ ವಿಶ್ವವಿದ್ಯಾಲಯ ಪ್ರೊ. ಪ್ರಕಾಶ ಎಸ್. ಕಾಂಬ್ಳೆ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ಡಾ. ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗ, ಕವಿವಿ ಧಾರವಾಡ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಮಾಲೆ, ಜ್ಞಾನ ಭಿತ್ತಿ -2 ಕಾರ್ಯಕ್ರಮಕ್ಕೆ ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ಅವರು ಆಧುನಿಕ ಭಾರತದ ಆರ್ಥಿಕ ಹಾಗೂ ಸಮಗ್ರ ಅಭಿರುದ್ಧಿಯಲ್ಲಿ ಡಾ. ಬಾಬುಜಗಜೀವನರಾಮ್ ಅವರ ಚಿಂತನೆ ಎಂಬ ವಿಷಯದ ಮೇಲೆ ಉನ್ಯಾಸ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ಅರವಿಂದ ಕವಿವಿಯ ಪಾದ್ಯಾಪಕ ಎ. ಮೂಲಿಮನಿ ಅವರು, ಡಾ. ಬಾಬು ಜಗಜೀವನರಾಮ್ ಅವರು ದೇಶದ ಆರ್ಥಿಕ ಚಿಂತನೆಯ ಮೂಲಕ ಶೋಷಿತ ಸಮುದಾಯಗಳ ಬದುಕನ್ನು ಅವಲೋಕಿಸಿ ಎಲ್ಲಾ ಕ್ಷೇತ್ರದಲ್ಲಿಯೂ ಮೀಸಲಾತಿ ದೊರೆಯಬೇಕು ಅಂದಾಗ ಮಾತ್ರ ದೇಶವನ್ನು ಒಗ್ಗೂಡಿಸಲು ಸಾಧ್ಯ ಎಂದು ಚಿಂತನೆ ಮಾಡಿದವರೆಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ. ಎಚ್. ಎಚ್. ಭರಡಿ ಅವರು ಎಲ್ಲಾ ಸಾಮಾಜಿಕ ಹೋರಾಟಗಾರರ ಚಳುವಳಿ ಮತ್ತು ಜೀವನ ಚರಿತೆಯೊಂದಿಗೆ ಡಾ. ಬಾಬು ಜಗಜೀವನರಾಮ್ ಅವರ ಬದುಕನ್ನೂ ಕೂಡ ತಿಳಿಯುವುದು ತುಂಬಾ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾಗಿದ್ದ ಡಾ. ಬಾಬು ಜಗಜೀವನರಾಮ್ ಅಧ್ಯಯನ ವಿಭಾಗದ ಡಾ. ಶಿವಶರಣ ಸಿ. ಟಿ, ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಪಕ ಡಾ. ಎನ್. ಎಸ್. ಮುಗದುರ, ಡಾ. ಬಾಬು ಜಗಜೀವನರಾಮ್ ಅಧ್ಯಯನ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಡಾ. ಜಯಶ್ರೀ ದೇಶಮಾನೆ ಹಾಗೂ ಸಮಾಜಸೇವಕರಾದ ಉಮಾ ಎಸ್. ಚೌಹಾಣ್ ಮತ್ತು ಕವಿವಿ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...