ಧಾರವಾಡ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Date:

ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ  ಜನವರಿ 1 ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊಡಿಸಿರುವ ಅವರು, “ಪರಿಷ್ಕೃತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು 2024ರ ಜನವರಿ 12ಕ್ಕೆ ವಿಸ್ತರಿಸಲಾಗಿದ್ದು, ದತ್ತಾಂಶಗಳನ್ನು ಕ್ರೋಢೀರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನವರಿ 17ಕ್ಕೆ ನಿಗದಿಪಡಿಸಲಾಗಿದೆ. ಮತದಾರರ ಪಟ್ಟಿ ಪ್ರಕಟಣೆ ಅಂತಿಮ ದಿನಾಂಕವನ್ನು ಜನವರಿ 22ಕ್ಕೆ ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುಂಬರುವ ಲೋಕಸಭಾ ಚುನಾವಣೆ-2024ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು 2024 ಜನವರಿ 01ಕ್ಕೆ 18ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರೂ ನಮೂನೆ-6 ಅರ್ಜಿಯನ್ನು ಸಲ್ಲಿಸಬಹುದು. ಹೆಸರು, ವಿಳಾಸ ಮತ್ತು ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ 2023 ಡಿಸೆಂಬರ್ 27ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ (VHA App) ಬಳಸಿ, www.nvsp.in ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ https://ceo.karnataka.gov.in ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಶಿಕ್ಷಣ ನೀತಿ ಕುರಿತು ರಾಜ್ಯಾದ್ಯಂತ ಸಮೀಕ್ಷೆ; ಎಐಡಿಎಸ್‌ಒ ವರದಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಾರ್ಯಾಲಯದ ಹೆಲ್ಪ್‌ಲೈನ್ ನಂ. 1950ಗೆ ಕರೆ ಮಾಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ-6ನ್ನು ಭರ್ತಿಮಾಡಿ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ” ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...