ಧಾರವಾಡ | ಚಳಿಯ ಕೊರತೆ; ಸಂಕಷ್ಟದಲ್ಲಿ ಕಡಲೆ ಬೆಳೆದ ರೈತರು

Date:

ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ, ಇದೀಗ ಚಳಿಯ ಬರಗಾಲ ಎದುರಾಗಿದೆ.

ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿ ರೈತರು ಬೇಗ ಬಿತ್ತನೆ ಮಾಡಿದ್ದು, ಶೇ.75 ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಲಾಗಿದೆ. ಆದರೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ತಾಪಮಾನ ಕಡಿಮೆಯಾಗದ ಕಾರಣ ಕಡಲೆ ಮತ್ತು ಮಾವಿನ ಇಳುವರಿ ಕಡಿಮೆ ಯಾಗುವ ಸಾಧ್ಯತೆ ಇದೆ.

ಈ ಎರಡೂ ಬೆಳೆಗಳಿಗೆ ತಂಪಾದ ವಾತಾವರಣ ಬೇಕು. ಆದರೆ, ಸದ್ಯದ ವಾತಾವರಣದಲ್ಲಿ ಉಷ್ಣತೆ ಹಾಗೇ ಇದೆ. ಡಿಸೆಂಬರ್‌ ಅಂತ್ಯದವರೆಗೆ ವಾತಾವರಣ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂಗಾರು ಮಳೆಯ ಭರವಸೆ ಇಟ್ಟು ಬಿತ್ತಿದ್ದರೈತರು ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಕ್ಷವನ್ನು ಬೋರ್‌ವೆಲ್‌ ನೀರು, ಹೊಳೆ ನೀರು, ಟ್ಯಾಂಕರ್‌ಗಳ ಮೂಲಕ ನೀರು ಹರಿಸಿ ಬೆಳೆ ಉಳಿಸಿಕೊಂಡಿದ್ದಾರೆ. ಈಗ ಚಳಿಗಾಲಕ್ಕೆ ಇರಬೇಕಿರುವಷ್ಟು ಚಳಿ ಬೀಳದೆ ಬೆಳೆ ಆರೋಗ್ಯವಾಗಿ ಬೆಳೆಯಲು ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಸ್ಥಳೀಯ ರೈತರು.

ಮುಂಗಾರು ಬೇಸಾಯಕ್ಕೂ ಹಿಂಗಾರು ಬೇಸಾಯಕ್ಕೂ ಇರುವ ವ್ಯತ್ಯಾಸವೆಂದರೆ ಮುಂಗಾರು ಬೆಳೆಗಳಿಗೆ ಬಿತ್ತನೆಯ ಸಮಯದಿಂದ ಕೊಯ್ಲು ಮಾಡುವವರೆಗೆ ಮಳೆ ಬೇಕು. ಹಿಂಗಾರು ಬಿತ್ತನೆ ಸಮಯದಲ್ಲಿ ಮಳೆಯಾದರೆ ಸಾಕು. ಆದರೆ, ಬೆಳೆ ಕೊಯ್ಲು ಆಗುವ ತನಕ, ಹವಾಮಾನವು ತಂಪಾಗಿರಬೇಕು. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಹವಾಮಾನವು ಬೆಚ್ಚಗಿರುತ್ತದೆ. ಬೆಳಗಿನ ಸಮಯದಲ್ಲಿ ಒಂದೆರಡು ಗಂಟೆಗಳ ಕಾಲ ಮಾತ್ರ ತಂಪಾದ ಹವಾಮಾನವಿರುತ್ತದೆ.

ಕೃಷಿ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ 2.5ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ, 1.5ಲಕ್ಷ ಹೆಕ್ಟೇರ್‌ ಅಂದರೆ ಶೇ.75ರಷ್ಟು ಬಿತ್ತನೆಯಾಗಿದೆ. ಏಕೆಂದರೆ ಬಿತ್ತನೆ ಸಮಯದಲ್ಲಿ ಮಳೆ ಆಗಿರಲಿಲ್ಲ.

ಧಾರವಾಡ ಜಿಲ್ಲೆಯಲ್ಲಿ ಕಡಲೆ ಪ್ರಮುಖ ಹಿಂಗಾರಿ ಬೆಳೆಯಾಗಿದ್ದು, ರೈತರು ಒಂದು ಲಕ್ಷ ಹೆಕ್ಟೇರ್ ಗುರಿಯನ್ನು ಮೀರಿ, 1.5ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆ ಮಾಡಿದ್ದಾರೆ. 16,088 ಹೆಕ್ಟೇರ್ ಗುರಿಗೆ, 9,254 ಹೆಕ್ಟೇರ್‌ನಲ್ಲಿ ಗೋಧಿ ಬಿತ್ತನೆಯಾಗಿದೆ. ಉಳಿದ ಜಮೀನಿನಲ್ಲಿ ಜೋಳ ಮತ್ತಿತರ ಬೆಳೆಗಳನ್ನು ಬಿತ್ತಲಾಗಿದೆ.

ಆರ್ದ್ರತೆಯ ಕೊರತೆಯಿಂದ ಕಡಲೆ ಬೆಳೆ ಒಣಗುತ್ತಿದೆ ಮತ್ತು ಬೆಳೆಗೆ ಕೀಟಗಳು ಕಾಡುವ ಅಪಾಯವನ್ನು ರೈತರು ಎದುರಿಸುತ್ತಿದ್ದಾರೆ. ಮುಂಗಾರು ಬೆಳೆ ಕೈಗೆ ಸಿಗದಿದ್ದಕ್ಕೆ ತುಂಬಾ ಬೇಗ ಹಿಂಗಾರು ಬೆಳೆ ಬಿತ್ತಿದ್ದೇವೆ ಈಗ ಬೆಳೆ ಕೈಕೊಡುವ ಹಾಗಿದೆ, ಮುಂದೆ ಏನು ಮಾಡುವುದು ತೋಚದಂತಾಗಿದೆ ಎನ್ನುತ್ತಿದ್ದಾರೆ ರೈತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...