ಧಾರವಾಡ | ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ: ಎಂ ಬಿ ದಳಪತಿ

Date:

ಮುಂದಿನ ಪೀಳಿಗೆಗಾಗಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ. ವೇಷ, ಭಾಷೆ, ಸಂಸ್ಕೃತಿ ಬೇರೆಯಾದರು ನಾವೆಲ್ಲರೂ ಭಾರತ ಮಾತೆಯ ಮಕ್ಕಳು. ಎನ್‌ಎಸ್‌ಎಸ್ ಗೀತೆ ರಚಿಸಿದ ಡಾ. ಎಂ ಬಿ ದಿಲ್ ಶಾದ್ ಅವರ ವ್ಯಕ್ತಿತ್ವವನ್ನು ಪ್ರತಿಯೊಬ್ಬರೂ ರೂಪಿಸಿಕೊಳ್ಳಬೇಕು ಎಂದು ಕವಿವಿ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಕಾರ್ಯಕ್ರಮ ಸಂಯೋಜಕ ಡಾ ಎಂ ಬಿ ದಳಪತಿ ಅವರು ಹೇಳಿದರು.

ಧಾರವಾಡ ನಗರದ ಅಂಜುಮನ್ ಕಾಲೇಜಿನ ಸಭಾಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಅಂಜುಮನ್ ಕಾಲೇಜ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಂಸ್ಕೃತಿಕ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಬೇರೆ ಬೇರೆ ಭಾಷೆ, ಸಂಸ್ಕೃತಿ ಇದ್ದರೂ ಕೂಡ ನಮ್ಮ ದೇಶ ಏಕತೆ ಮತ್ತು ಭಾವೈಕ್ಯತಗೆ ಹೆಸರಾಗಿದೆ. ಯುವ ಜನಾಂಗದಲ್ಲಿ ಏಕತೆ ಮತ್ತು ರಾಷ್ಟ್ರೀಯ ಭಾವೈಕ್ಯತ ಮೂಡಲಿ, ಒಂದು ರಾಷ್ಟ್ರದ ಭೌಗೋಳಿಕ ಪರಿಸರದಲ್ಲಿ ಜನರು ವಾಸಿಸುವ ಪ್ರದೇಶವನ್ನು ರಾಷ್ಟ್ರ ಎನ್ನುತ್ತೇವೆ. ವಿವಿಧತೆಯಲ್ಲಿ ಏಕತೆಯಿಂದ ಇರುವುದನ್ನು ಭಾವೈಕ್ಯತೆ ಎನ್ನುವರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾಷೆ, ಪ್ರದೇಶ, ಉಡುಗೆ ತೊಡುಗೆ, ಕಲೆ, ಸಾಹಿತ್ಯ, ವಾಸ್ತುಶಿಲ್ಪ, ನೀತಿ ನಿಯಮಗಳು, ನಡೆ ನುಡಿಯಿಂದ ಭಿನ್ನವಿದ್ದರು ನಾವೆಲ್ಲರೂ ಒಂದೇ. ವಸು ದೈವ ಕುಟುಂಬಕಂ ಎಂಬುದು ನಮ್ಮ ಸಂಸ್ಕೃತಿಯ ಮೂಲ ಮಾತ್ರವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಕೊಪ್ಪಳ | ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ ಭಾವೈಕ್ಯತೆ ಸಾರಿದ ಮುಸ್ಲಿಂ ಕುಟುಂಬ

ಅಂಜುಮನ್ ಸಂಸ್ಥೆಯ ನಿರ್ದೇಶಕ ಇಕ್ಬಾಲ್ ಕೆ ಜಮಾಧಾರ ಕಾರ್ಯಕ್ರಮದ ಅಧ್ಯಕ್ಷೆತೆ ವಹಿಸಿದ್ದರು. ಪತ್ರಿಕೋದ್ಯಮದ ಮುಖ್ಯಸ್ಥ ಡಾ ಎಸ್ ಎಸ್ ಅದೋನಿ ಐಕ್ಯೂಎಸಿ ಡಾ ಎನ್ ಬಿ ನಾಲತವಾಡ ಡಾ.ನಾಗರಾಜ ಗುದಾಗನವರ, ಡಾ.ಜಯನಂದ ಹಟ್ಟಿ, ಆಸಿಫ್ ತೋರಗಲ್, ಎಸ್ ಎಂ ಕೋಟಬಾಗಿ, ಗುಜರಾತ್, ಗೋವಾ, ಮಧ್ಯಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯದ ವಿವಿಧ ವಿಶ್ವವಿದ್ಯಾಲಯದ 150 ಮಂದಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...