ಧಾರವಾಡ | ಹೊಸ ಮದ್ಯದಂಗಡಿಗೆ ಅನುಮತಿ; ಅಬಕಾರಿ ಇಲಾಖೆ ಕ್ರಮಕ್ಕೆ ತೀವ್ರ ವಿರೋಧ

Date:

ಹೊಸ ಮದ್ಯದಂಗಡಿಗಳ ಪರವಾನಗಿ ನೀಡುವುದರ ಕುರಿತ ಅಬಕಾರಿ ಇಲಾಖೆ ಪ್ರಸ್ತಾವನೆ ಹೊರಡಿಸಿರುವುದಕ್ಕೆ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟ ಮತ್ತು ರಾಜ್ಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಧಾರವಾಡ ಜಿಲ್ಲಾ ಸಂಚಾಲಕ ಮಂಜುನಾಥ ಕೊಂಡಪಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಸರ್ಕಾರದ ಈ ನಡೆ ಅತ್ಯಂತ ದೌರ್ಭಾಗ್ಯಪೂರ್ಣ ಕ್ರಮವಾಗಿದ್ದು, ಮದ್ಯ ವ್ಯಸನಕ್ಕೆ ಚಿಕ್ಕ ವಯಸ್ಸಿನಲ್ಲಿಯೇ ತುತ್ತಾಗಿ ಅಕಾಲ ಮೃತ್ಯುವಿಗೆ ಯುವಜನರು ಬಲಿಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮದ್ಯದಂಗಡಿಗಳ ವೇಳೆಯನ್ನು ಕಡಿಮೆ ಮಾಡುವ ಮತ್ತು ಅಪ್ರಾಪ್ತರಿಗೆ ಮದ್ಯವಿಕ್ರಯ ಮಾಡದಂತೆ ತಡೆಯುವ ಜನಪರ ಕ್ರಮಗಳ ಕುರಿತು ಯೋಚಿಸದೇ, ಸರ್ಕಾರ ಜನರನ್ನು ಮದ್ಯ ವ್ಯಸನಕ್ಕೆ ಸುಲಭವಾಗಿ ಒಳಗಾಗುವಂತೆ ಮಾಡಿ ರಾಜ್ಯದ ಮಹಿಳೆಯರ ಬದುಕುಗಳನ್ನು ಅಂಧಕಾರಕ್ಕೆ ನೂಕಲು ಅಬಕಾರಿ ಇಲಾಖೆ ಮುಂದಾಗಿರುವುದು ಖಂಡನೀಯ” ಎಂದರು.

“ನಗರ ಮತ್ತು ಹಳ್ಳಿ ಪ್ರದೇಶಗಳಲ್ಲಿ ಈಗಾಗಲೇ ಲಕ್ಷಾಂತರ ಜನ ಮದ್ಯಪಾನಕ್ಕೆ ದಾಸರಾಗಿ ಕೌಟುಂಬಿಕ ಜೀವನವನ್ನು ಹಾಳು ಮಾಡಿಕೊಂಡು, ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಗಳಿಂದ ತತ್ತರಿಸಿ ಹೋಗಿದ್ದಾರೆ. ಪಾಲಕರ ಮದ್ಯಪಾನ ವ್ಯಸನದ ಪರಿಣಾಮದಿಂದ ಮಕ್ಕಳ ಶಿಕ್ಷಣ ಕುಂಠಿತವಾಗಿರುವ, ಯುವಕರು ಅನೇಕ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆದಿರುವ ಸಾವಿರಾರು ಉದಾಹರಣೆಗಳು ನಮ್ಮ ಮುಂದಿವೆ. ಈ ಕಾರಣಕ್ಕಾಗಿಯೇ ಪ್ರತಿದಿನ ಹೊಸ ಮಾದರಿಯ ವ್ಯಸನಮುಕ್ತಿ ಕೇಂದ್ರಗಳು ತೆರೆದುಕೊಳ್ಳುತ್ತಿದ್ದು, ಸಮಸ್ಯೆಯ ಆಳವನ್ನು ತೋರುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಅವಳಿ ನಗರಗಳಿಗೆ 5 ತಿಂಗಳಲ್ಲಿ 100 ಹೊಸ ಸಿಟಿ ಬಸ್‌ಗಳು ರಸ್ತೆಗಿಳಿಯಲಿವೆ: ಸಾರಿಗೆ ಸಚಿವ

“ಸರ್ಕಾರ ಈ ಸಮಾಜ‌ ವಿರೋಧಿ ಪ್ರಸ್ತಾವನೆಯನ್ನು ಕೈಬಿಡದೆ ಇದ್ದಲ್ಲಿ ಸಮಾಜಪರ ಕಾಳಜಿ ಇರುವ ಎಲ್ಲ ಸಂಘಟನೆಗಳನ್ನು ಒಗ್ಗೂಡಿಸಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು” ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಮಂಜುನಾಥ ಕೊಂಡಪಲ್ಲಿ ಅವರು ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...