ಧಾರವಾಡ | ತಿಪ್ಪೆಗಳಾಗಿದ್ದ ಕೆರೆಗಳಿಗೆ ಜೀವ ಕಳೆ ತುಂಬಿದ ಸ್ಥಳೀಯರು

Date:

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿಯಲ್ಲಿ 17 ಎಕರೆ ವಿಸ್ತಾರದಲ್ಲಿ ಎರಡು ಕೆರೆಗಳಿವೆ. ಅವುಗಳ ಒಟ್ಟು 10 ಎಕರೆ ಕೆರೆ ಅಂಗಳ ಪಾಳು ಬಿದ್ದಿತ್ತು. ಸದ್ಯ ಗ್ರಾಮದ ದೊಡ್ಡಕೆರೆ ಮತ್ತು ಸಣ್ಣಕೆರೆಗಳು ಮತ್ತೆ ಜೀವ ಕಳೆ ಪಡೆದುಕೊಳ್ಳುತ್ತಿದೆ.

ಗ್ರಾಮಸ್ಥರ ನೆರವಿನಿಂದ ಗ್ರಾಮ ಪಂಚಾಯತಿಯವರು 13.85 ಲಕ್ಷ ರೂ. ವೆಚ್ಚದಲ್ಲಿ ಬ್ಯಾಹಟ್ಟಿಯ ಕೆರೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಹೂಳು ತೆಗೆದಿದ್ದಾರೆ ಎಂದು ಬ್ಯಾಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಮತ್ತು ಉಪಾಧ್ಯಕ್ಷೆ ಮಧು ಕಲ್ಲಪ್ಪ ಮಾದ್ಯಮದವರಿಗೆ ತಿಳಿಸಿದ್ದಾರೆ.

ಈ ಯೋಜನೆಯಡಿ ಕೆರೆ ಹೂಳೆತ್ತುವ ಕೆಲಸ ಆರಂಭವಾದ ಬಳಿಕ ಗ್ರಾಮದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿದ್ದು, ಗ್ರಾಮದಲ್ಲಿನ ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ಟ್ರ್ಯಾಕ್ಟರ್‌ಗಳ ಮೂಲಕ ರೈತರು ತಮ್ಮ ಜಮೀನುಗಳಿಗೆ ಹಾಕಿಕೊಳ್ಳುತ್ತಿದ್ದಾರೆ. ಒಂದೂವರೆ ತಿಂಗಳಲ್ಲಿ ಒಟ್ಟು 24 ಸಾವಿರ ಟ್ರ್ಯಾಕ್ಟರ್‌ ಮಣ್ಣು ಕೆರೆ ಅಂಗಳದಿಂದ ಎತ್ತಲಾಗಿದೆ. ಇದಕ್ಕಾಗಿ ರೈತರಿಂದ ಆಗಿರುವ ವೆಚ್ಚ 12 ಲಕ್ಷ ರೂ. ಎಂದು ಅವರು ತಿಳಿಸಿದರು.

ಸುಮಾರು 200ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ರಾತ್ರಿಯಿಂದಲೇ ಸರದಿ ನಿಂತುಕೊಂಡು ಮಣ್ಣು ತೆಗೆದುಕೊಂಡು ಹೋಗಿವೆ. 2023 ಡಿಸೆಂಬರ್‌ 5ರಿಂದ ಕೆರೆಗಳ ಹೂಳು ಎತ್ತುವ ಕೆಲಸ ಆರಂಭಿಸಲಾಗಿತ್ತು. 38 ದಿನಗಳಲ್ಲಿ ನಾಲ್ಕು ಅಡಿ ಹೂಳೆತ್ತಲಾಗಿದೆ. ದೊಡ್ಡ ಕೆರೆ ತುಂಬಿದ ಬಳಿಕ ಸಣ್ಣ ಕೆರೆಗೆ ಮಳೆನೀರು ಹಳ್ಳದ ಮೂಲಕ ಹರಿದು ಬರುವ ವ್ಯವಸ್ಥೆ ಮಾಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿ ಮಾಡುವ ಮೊದಲು ಬ್ಯಾಹಟ್ಟಯಲ್ಲಿ 18 ರೈತರು ಒಳಗೊಂಡ ಕೆರೆ ಅಭಿವೃದ್ಧಿ ಸಮಿತಿ ರಚಿಸಲಾಗಿತ್ತು. ನಂತರ ಗ್ರಾಮ ಪಂಚಾಯಿತಿಯಿಂದ ಅನುಮೋದನೆ, ಸಹಕಾರ ಪಡೆದು, ಕೆರೆ ಹೂಳೆತ್ತಲು ಮಾತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಧನ ಸಹಾಯ ಮಾಡುವ ಬಗ್ಗೆ ತಿಳಿಸಿ, ಮಣ್ಣಿನ ಸಾಗಣೆ ಸ್ವಂತ ಖರ್ಚಿನಲ್ಲಿ ನಡೆಯಬೇಕು ಎಂದು ಹೇಳಿ, ಎಲ್ಲರ ಒಪ್ಪಿಗೆಯ ನಂತರ ಕಾರ್ಯಾರಂಭಿಸಿದ್ದರು ಗ್ರಾಮಸ್ಥರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...