ಧಾರವಾಡ | ವಿದ್ಯುತ್ ಬಳಕೆದಾರರು ಗ್ರಾಹಕ ಸುರಕ್ಷಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು: ಎಂ.ಎಂ ನದಾಫ್

Date:

ವಿದ್ಯುತ್ ಬಳಕೆದಾರರು ಸುರಕ್ಷತೆಗೆ ಹೆಚ್ಚು ಒತ್ತು ನೀಡಬೇಕು. ಹೆಸ್ಕಾಂ ನೀಡುವ ಗ್ರಾಹಕ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಗ್ರಾಹಕರ ಜಾಗೃತಿಗಾಗಿ ಹೆಸ್ಕಾಂ ಹಲವು ರೀತಿಯ ಕಾರ್ಯಕ್ರಮಗಳನ್ನು, ಕುಂದುಕೊರೆತೆಗಳ ಸೇವೆಗಳನ್ನು ಕಾಲಕಾಲಕ್ಕೆ ಆಯೋಜಿಸುತ್ತಿದೆ ಎಂದು ಧಾರವಾಡ ನಗರ ಹೆಸ್ಕಾಂ ವಿಭಾಗದ ಕಾರ್ಯಪಾಲಕ ಅಭಿಯಂತರ ಎಂ.ಎಂ ನದಾಫ್ ಹೇಳಿದರು.

ಧಾರವಾಡ ಮಾಳಮಡ್ಡಿಯ ಕೆಇ ಬೋರ್ಡ್‌ ಸೆಂಟ್ರಲ್ ಸ್ಕೂಲ್‍ನಲ್ಲಿ ಹೆಸ್ಕಾಂ ನಗರ ವಿಭಾಗದಿಂದ ಆಯೋಜಿಸಿದ್ದ, ವಿದ್ಯುತ್ ಸುರಕ್ಷತಾ ಕ್ರಮಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಲು ನಗರದ ಎಲ್ಲ ಹೆಸ್ಕಾಂ ಉಪವಿಭಾಗಗಳಲ್ಲಿ ಗ್ರಾಹಕರ ಸಭೆಗಳನ್ನು ಸಂಘಟಿಸಲಾಗುತ್ತಿದೆ. ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ತಕ್ಷಣ ಸ್ಪಂದಿಸಿ, ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ವಿದ್ಯುತ್ ಅವಘಡಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ ಮಾಹಿತಿ ನೀಡಿದರೆ ಹೆಸ್ಕಾಂ ಸೂಕ್ತ ಕ್ರಮ ವಹಿಸುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್ ಬಳಕೆಯಲ್ಲಿ ಪಾಲಕರು, ಮಕ್ಕಳು ಜಾಗೃತಿ ವಹಿಸಬೇಕು. ಹಳೆಯ ಮತ್ತು ದುರಸ್ತಿ ಇರುವ ವಿದ್ಯುತ್ ಪರಿಕರಗಳನ್ನು ಬದಲಾಯಿಸಬೇಕು. ಕಾಲಕಾಲಕ್ಕೆ ವಿದ್ಯುತ್ ಬಿಲ್ ತುಂಬಬೇಕು. ಡಿಜಿಟಲ್ ಮೂಲಕ ಹೆಸ್ಕಾಂ ಬಿಲ್ ಪಾವತಿಸಲು ಆಸಕ್ತಿ ವಹಿಸಬೇಕು” ಎಂದು ಸಲಹೆ ನೀಡಿದರು.

“ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಜ್ಯೋತಿ ಯೋಜನೆಯನ್ನು ಗ್ರಾಹಕರು ಸಮಪರ್ಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದುಪಯೋಗ ಮಾಡಿಕೊಳ್ಳಬೇಕು. ಅನಗತ್ಯವಾಗಿ ವಿದ್ಯುತ್ ಬಳಕೆಯನ್ನು ನಿಲ್ಲಿಸಬೇಕು. ವಿದ್ಯುತ್ ಸರಬರಾಜು ದುರುಪಯೋಗವಾಗದಂತೆ ವಿದ್ಯುತ್ ಜಾಗೃತ ದಳವು ನಿರಂತರ ನಿಗಾವಹಿಸಿದೆ ಎಂದು ಕಾರ್ಯಪಾಲಕ ಅಭಿಯಂತರ ಎಂ.ಎಂ.ನದಾಫ್ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ಭಾರತೀಯ ರಾಮ: ವಿಶ್ವನಾಥ್

ಕೆಇ ಬೋರ್ಡ್‌ ಸೆಂಟ್ರಲ್ ಸ್ಕೂಲ್‍ನ ಉಪ ಪ್ರಾಚಾರ್ಯ ಅಶ್ವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ನಗರ ಹೆಸ್ಕಾಂ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ ಟಿಂಗರಿಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಮಮತಾ ದಾವಣಗೆರೆ ಸ್ವಾಗತಿಸಿದರು. ಹೆಸ್ಕಾಂ ಶಾಖಾಧಿಕಾರಿ ಮಹೇಶ ನಾಗನೂರ ವಂದಿಸಿದರು. ಪ್ರಾಣೇಶ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

ವಿದ್ಯುತ್ ಸುರಕ್ಷತಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಶ್ನೆಗಳ ಮುಖಾಂತರ ಮನಮುಟ್ಟುವಂತೆ ಕಾರ್ಯಕ್ರಮ ನಡೆಸಿದರು. ಜತೆಗೆ ವಿದ್ಯುತ್ ಸುರಕ್ಷತಾ ಕ್ರಮದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿ, ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಕೆ ಇ ಬೋರ್ಡ ಸೆಂಟ್ರಲ್ ಸ್ಕೂಲ್‍ನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...