ಧಾರವಾಡ | ಯುವನಿಧಿ ಯೋಜನೆಗೆ ನೊಂದಣಿ ಆರಂಭ: ಅಪರ ಜಿಲ್ಲಾಧಿಕಾರಿ

Date:

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದ್ದಾರೆ.

ಇಂದು ಬೆಳಿಗ್ಗೆ (ಡಿ.27) ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಯುವನಿಧಿ ಯೋಜನೆಯ ಬಿತ್ತಿಪತ್ರವನ್ನು ಅನಾವರಣಗೊಳಿಸಿ, ಸಭೆಯ ಅಧ್ಯಕ್ಷೆತೆ ವಹಿಸಿದ್ದ ಅವರು ಮಾತನಾಡಿದರು.

ಈ ಯೋಜನೆಯಡಿಯಲ್ಲಿ ಪದವೀಧರರು, ಡಿಪ್ಲೋಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023ರಲ್ಲಿ ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್‌ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಜಿಲ್ಲೆಯಲ್ಲಿ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1,500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಅಗತ್ಯವಾದ ಎಲ್ಲ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ತಾತ್ಕಾಲಿಕ ಪದವಿ ಹಾಗೂ ಡಿಪ್ಲೋಮಾ ಪ್ರಮಾಣ ಪತ್ರ ಪಡೆದು 180ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು, 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು ಎಂದು ಅವರು ತಿಳಿಸಿದರು.

ನೋಂದಾಯಿತ ಅಭ್ಯರ್ಥಿ ವಿವರಗಳನ್ನು ಎನ್‌ಎಡಿ ಮೂಲಕ ಪರಿಶೀಲಿಸಲಾಗುವುದು. ಪದವಿ ಹಾಗೂ ಡಿಪ್ಲೋಮಾದ ಪ್ರಮಾಣ ಪತ್ರಗಳನ್ನು ಮ್ಯಾನುವೆಲ್ ಮೂಲಕ ಅಪ್ಲೋಡ್ ಮಾಡಿದರೆ, ಅಪ್ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಿಗೆ  ರವಾನಿಸಲಾಗುವುದು, ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.

ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಕೌಶಲ್ಯ ಸಂಪರ್ಕ ಪೆರ್ಟಲ್‍ಗೆ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.

ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಒಟಿಪಿ ಮೂಲಕ ಘೋಷಣೆ ಮಾಡತಕ್ಕದ್ದು. 2023ರಲ್ಲಿ ಪದವಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‍ಲೈನ್‍ನಲ್ಲಿ ನೋಂದಣಿಯಾಗಿ  ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ವೇದಿಕೆಯ ಮೇಲೆ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಾ.ಚಂದ್ರಪ್ಪ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಭಾರಿ ಸಹಾಯಕ ನಿರ್ದೇಶಕ ಮಹೇಶ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ ಪದವಿ ಹಾಗೂ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರು ಮತ್ತು ಜಿಲ್ಲಾ, ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...