ಧಾರವಾಡ | ಹಿಜಾಬ್‌ಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ʼಧರ್ಮ ದಂಗಲ್‌ʼ ಪದ ಬಳಕೆ; ಸಚಿವ ಸಂತೋಷ್ ಲಾಡ್‌ ಗರಂ‌ 

Date:

ಹಿಜಾಬ್‌ ಹಾಗೂ ಇತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ʼಧರ್ಮ ದಂಗಲ್‌ʼ ಎಂಬ ಪದ ಬಳಸುತ್ತಿವೆ. ಅದು ದಂಗಲ್‌ ಹೇಗೆ ಆಗುತ್ತದೆ. ಸಿಎಂ ಹೇಳಿರುವುದು ಕಾನೂನಾತ್ಮಕವಾಗಿದೆ. ಅದಕ್ಕೆ ದಂಗಲ್‌ ಎಂಬ ಪದ ಬಳಸಿ ಏಕೆ ಹೇಳುತ್ತಿರಿ? ಎಂದು ಮಾಧ್ಯಮಗಳ ವಿರುದ್ಧ ಸಚಿವ ಸಂತೋಷ್ ಲಾಡ್‌ ಗರಂ‌ ಆದರು.

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್‌ ಪ್ರತಿಕ್ರಿಯೆ ನೀಡಿ ಮಾತನಾಡಿದರು.

“ಧರ್ಮ ದಂಗಲ್‌ ಎಂದರೇನು? ಅದರಲ್ಲಿ ಧರ್ಮ ದಂಗಲ್‌ ಏನಾಗಿದೆ? ಪದೇ ಪದೆ ಮಾಧ್ಯಮಗಳು ಧರ್ಮ ದಂಗಲ್‌ ಎಂಬ ಪದ ಬಳಸುತ್ತಿವೆ. ಇದು ಎಷ್ಟು ಸರಿ? ಕಾನೂನಾತ್ಮಕ, ಸಂವಿಧಾನಾತ್ಮಕವಾಗಿ ಆದೇಶ ವಾಪಸ್‌ ಪಡೆಯಲು ಅವಕಾಶವಿದೆ. ಅದರಲ್ಲಿ ಸಿಎಂ ತಪ್ಪೇನಿದೆ? ವಿರೋಧ ಪಕ್ಷಗಳು ವಿರೋಧ ಮಾಡುತ್ತವೆ ಮಾಡಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನೂ ಒಬ್ಬ ಹಿಂದೂ ಅಲ್ಲವಾ? ನಾನೇನು ಅದಕ್ಕೆ ವಿರೋಧ ಮಾಡುತ್ತಿಲ್ಲ. ಮಾಧ್ಯಮದಲ್ಲೂ ಹಿಂದೂಗಳಿದ್ದಾರೆ ಅವರೂ ವಿರೋಧ ಮಾಡುತ್ತಾರಾ? ನಿಮ್ಮ ನಿಲುವು ಏನು” ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

“ಮುಸ್ಲಿಂ ತುಷ್ಟೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದವರು ಮುಸ್ಲಿಂ ತುಷ್ಟೀಕರಣ ಎಂಬುದು ವಿರೋದ ಪಕ್ಷಗಳ ದೃಷ್ಟಿಕೋನವಾಗಿದೆ. ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ʼ ಎಂದರೇನು? ಹಿಂದೂ, ಮುಸ್ಲಿಂ, ಸಿಖ್‌, ಬುದ್ಧ ಎಲ್ಲರನ್ನೂ ಒಂದೇ ರೀತಿ ನೋಡಿಕೊಳ್ಳುತೇವೆ ಎಂಬುದಲ್ಲವೇ?” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೋಟಿಸ್ ಜಾರಿ

“ಹಿಜಾಬ್‌ ನಿಷೇಧ ಹಿಂಪಡೆಯುವುದು ಸೇರಿದಂತೆ ಇತರೆ ನಿಯಮಗಳನ್ನು ಕಾನೂನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ. ಸಂವಿಧಾನ ಬದ್ಧವಾಗಿ ಯಾವ ರೀತಿ ಇರಬೇಕು ಅಂತಿದೆಯೋ ಅದೇ ರೀತಿ ಮಾಡುತ್ತಾರೆ. ಅದೇ ರೀತಿಯಲ್ಲಿ ಮಾಡಲು ಸಿಎಂ ಪರಿಶೀಲಿಸುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...