ಈ ದಿನ ವರದಿ ಫಲಶೃತಿ | ಧಾರವಾಡ: ಅಂಗನವಾಡಿ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿದ ಅಧಿಕಾರಿಗಳು

Date:

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ವಿವಿಧ ಅಂಗನವಾಡಿಗಳಿಗೆ ಭೇಟಿಕೊಟ್ಟು ಅಲ್ಲಿರುವ ಮೂಲಭೂತ ಸಮಸ್ಯೆಗಳ ಕುರಿತು ಈದಿನ.ಕಾಮ್ ವರದಿ ಮಾಡಿ ಸುದ್ಧಿ ಪ್ರಸಾರ ಮಾಡಿತ್ತು. ಸುದ್ಧಿಯನ್ನು ಅಂಗನವಾಡಿಗಳು ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಹರಿಸಿತ್ತು.

ಈದಿನ.ಕಾಮ್ ಅಧಿಕಾರಿಗಳ ಬೆಂಬಿಡದೆ ಸಮಸ್ಯೆಗಳ ಬಗೆಹರಿಸಲು ತಿಳಿಸಿ, ವರದಿಯನ್ನೂ ಮಾಡಲಾಗಿತ್ತು. ಅದರಂತೆ ತಾಲೂಕಿನ ಶಿರೂರ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದ ಚಿಣ್ಣರನ್ನು ಶಿಥಿಲಗೊಂಡ ಕಟ್ಟಡದಿಂದ ನೂತನ ಹೊಸ ಕಟ್ಟಡವಾದ ಬೇರೆ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆ ಮಾಡಿದ್ದಾರೆ.

1001222681

ಶಿಥಿಲಾವಸ್ಥೆಗೆ ತಲುಪಿದ್ದ ಪಂಚಾಯತ್ ಕಟ್ಟಡದಲ್ಲಿದ್ದ ಅಂಗನವಾಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಸ್ಯೆ ಏನಿತ್ತು?

ಶಿರೂರ ಗ್ರಾಮದ ಅಂಗನವಾಡಿ ಕೇಂದ್ರವೊಂದನ್ನು ಹಲವಾರು ವರ್ಷಗಳಿಂದ ಸ್ವಂತ ಕಟ್ಟಡವಿಲ್ಲದೆ ಗ್ರಾಮ ಪಂಚಾಯತಿ ಕಟ್ಟಡದಲ್ಲೇ, ಅದೂ ಆಗಲೊ‌ಈಗಲೊ ಬೀಳುವ ಹಂತದಲ್ಲಿದ್ದ ಕಟ್ಟಡದಲ್ಲೇ ನಡೆಸುತ್ತಿದ್ದರು.

ಅದೇ ಕಟ್ಟಡದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳೂ ಕಾರ್ಯನಿರ್ವಹಿಸುತ್ತಿದ್ದರು. ಜನಜಂಗುಳಿ‌ ಹೆಚ್ಚಾದಾಗ ಚಿಣ್ಣರನ್ನು ಪಕ್ಕದಲ್ಲಿರುವ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ, ಅಲ್ಲಿಯೇ ಪಾಠ ಹೇಳಿಕೊಡುವ ಪರಿಪಾಠ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಾ ಬಂದಿತ್ತು.‌ ಅಲ್ಲದೇ, ಈ ಬಗ್ಗೆ ಸ್ಥಳೀಯರು ಕೂಡ ನಮಗೆ ಮಾಹಿತಿ ನೀಡಿದ್ದರು.

1001222682

ಈ ಕುರಿತು ಗ್ರಾಮಸ್ಥರು ಹಲವುಬಾರಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನ ಆಗಿರಲಿಲ್ಲ. ಇದೀಗ ಈದಿನ.ಕಾಮ್ ವರದಿಗೆ ಸ್ಪಂದಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು ಶಿಥಿಲಗೊಂಡ ಕಟ್ಟಡದಲ್ಲಿದ್ದ ಮಕ್ಕಳನ್ನು ಪಂಚಾಯತಿ ಪಕ್ಕದಲ್ಲಿರುವ ಮತ್ತೊಂದು ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆ ಮಾಡಿದ್ದಾರೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...