ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ | ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

Date:

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇನ್ನೂ ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಉಣಕಲ್​ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಕಿಮ್ಸ್​ ಆಸ್ಪತ್ರೆಯಲ್ಲಿ ಕಳೆದ 13 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಶಂಕರ್​ ಚವ್ಹಾಣ್ ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಆರೈಕೆಯಲ್ಲಿ ಬೆಳೆದಿದ್ದರು.

ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಐವರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮೃತ ದುರ್ದೈವಿಗಳು. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರಾದ ನಿಜಲಿಂಗಪ್ಪ ಬೇಪುರಿಯ ದೇಹ ಶೇ.86 ರಷ್ಟು, ಸಂಜಯ್ ಸವದತ್ತಿಯ ದೇಹ ಶೇ.80 ರಷ್ಟು, ರಾಜು ಮೂಗೇರಿಯ ದೇಹ ಶೇ.74 ರಷ್ಟು, ಲಿಂಗಾರಾಜು ಬೀರನೂರ ದೇಹ ಶೇ.86 ರಷ್ಟು, ಶಂಕರ್ ಚವ್ಹಾಣ್ ದೇಹ ಶೇ.99 ರಷ್ಟು ಸುಟ್ಟಿತ್ತು.

ಇನ್ನು, ಚಿಂತಾಜನಕ ಸ್ಥಿತಿಯಲ್ಲಿರುವ ಮಂಜುನಾಥ್ ವಾಗ್ಮೋಡೆಯ ದೇಹ ಶೇ.70 ರಷ್ಟು, ಪ್ರಕಾಶ್ ಬಾರಕೇರ್​ ದೇಹ ಶೇ91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ.74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ.25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸಚಿವ ಸಂತೋಷ ಲಾಡ್ ಈಗಾಗಲೇ ಘೋಷಣೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಯುವಕರಿಬ್ಬರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದ...

ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ; ಲಿಂಗಾಯತ ಮಹಾಸಭಾ ಖಂಡನೆ

ತಾಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯು ಇಡೀ ರಾಜ್ಯದ ಜನತೆಯ...

ಹುಬ್ಬಳ್ಳಿ | ಅಪ್ರಾಪ್ತೆ ಬಾಲಕಿ‌ ಮೇಲೆ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ...

ಧಾರವಾಡ | ಚಿಗರಿ ಬಸ್-ಕಾರು ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ...