ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

Date:

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಯುನಿಟಿಯ ಪ್ರಧಾನ ಕಾರ್ಯದರ್ಶಿಯಾದ ಖಾಸಿಂ ಸಾಬ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ ಯುವಕ ನೇಹಾ ಎಂಬ ಯುವತಿಯನ್ನು ತಾನು ಓದುತ್ತಿರುವ ಕಾಲೇಜಿನ ಆವರಣದಲ್ಲಿಯೆ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರಿದ್ದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ. ಅ ಹುಡುಗನ ಬಂಧನವಾಗಿ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಈ ಕರುಳು ಕಲಕುವ ಘಟನೆ ಖಂಡನೀಯ. ಈ ಹೆಣ್ಣುಮಗಳ ಬದುಕಿನ ಈ ರೀತಿಯ ಅಂತ್ಯಕ್ಕೆ ಕಾರಣವಾದ ವ್ಯಕ್ತಿ ಮೇಲೆ ಸೂಕ್ತ ಹಾಗು ಶೀಘ್ರ ಕಾನೂನು ರೀತಿಯ ಕ್ರಮಜರುಗಿಸಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಖಾಸಿಂ ಸಾಬ್‌ ಆಗ್ರಹಿಸಿದ್ದಾರೆ.

ಕೊಲೆ ಆರೊಪಿಯನ್ನು ಒಂದು ಗಂಟೆಯೊಳಗೆ ಬಂಧಿಸಿದ ಹುಬ್ಬಳ್ಳಿ ಪೊಲೀಸರ ಕಾರ್ಯಕ್ಕೆ ಖಾಸಿಂ ಸಾಬ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಪುತ್ತೂರಿನ ಜಯಶ್ರೀ ಎಂಬ ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಉಮೇಶ್ ಎಂಬ ಯುವಕ ಈ ಹುಡುಗಿಯನ್ನು ಹತ್ಯೆ ಮಾಡಿದ್ದ. ಇಂತಹ ನೂರಾರು ಪ್ರೀತಿ ಪ್ರೇಮಗಳ ನೆಪಗಳ ಸುತ್ತ ಹತ್ಯೆಗಳು, ಆಸಿಡ್ ದಾಳಿಗಳು ನಮ್ಮ ನಡುವೆ ನಡೆಯುತ್ತಲೇ ಇವೆ. ಈ ಕೃತ್ಯಗಳು ಅಮಾನವೀಯ ಹಾಗು ಶಿಕ್ಷಾರ್ಹ. ಇಂತಹ ಘಟನೆಗಳಿಗೆ ಕೋಮು ಧರ್ಮಗಳ ಬಣ್ಣ ಬಳಿಯುವ ನೀಚ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಕೆಲವು ರಾಜಕೀಯ ಮುಖಂಡರು ಈ ಘಟನೆಯನ್ನು ಧರ್ಮ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ.

ಆರೋಪಿಯ ಜಾತಿ, ಧರ್ಮ, ವರ್ಗ, ಹೆಸರನ್ನು ನೋಡಿ ಅಪರಾಧವನ್ನು ಆತನ ಇಡೀ ಸಮುದಾಯದ ತಲೆಗೆ ಕಟ್ಟಿ ಸಮಾಜದಲ್ಲಿ ಹಿಂದು ಮುಸ್ಲಿಮರ ಮಧ್ಯೆ ಭಯ ಮತ್ತು ಸಂಶಯವನ್ನುಂಟು ಮಾಡಿ ಈ ಚುನಾವಣಾ ಸಂಧರ್ಭದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿರುವ ರಾಜಕಾರಣಿಗಳ ನೀಚ ನಡೆ ಖಂಡನೀಯ.

ನೇಹಾ ಹಂತಕ ಫಯಾಜ್ ಬೆಳಗಾವಿ ಜಿಲ್ಲೆ ಮುನವಳ್ಳಿಯವನಾಗಿದ್ದು, ಅಲ್ಲಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಈ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಮ್ ಸಮುದಾಯದ ನೂರಾರು ಮಂದಿ ನೇಹಾ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಈ ಅಮಾನವಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ ಇಂತಹ ಅಮಾನವೀಯ ನೇಹಾ ಹತ್ಯೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕೆಂದು ಕಮಿಷನರ್‌ ಅವರಿಗೆ ಒತ್ತಾಯಿಸಿದ್ದಾರೆ.

ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾರೇ ಕಾನೂನು ಕೈಗೆತ್ತಿಕೊಂಡರೂ ಖಂಡಿಸುತ್ತೇವೆ. ಪೊಲೀಸರ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ನೀಡಿರುವ ಹೇಳಿಕೆ ಸ್ವಾಗತಾರ್ಹ.

ಅಪರಾದಿಗೆ ಸೂಕ್ತ ಹಾಗು ಶೀಘ್ರ ಕಾನೂನು ಶಿಕ್ಷೆ ಯಾಗಬೇಕುವೆಂಬುದು ನಮ್ಮ ಬೇಡಿಕೆ.
ನೇಹ ಸಾವಿನ ದುಃಖ ಭರಿಸು ಶಕ್ತಿ ಅ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಾರ್ಥನೆ ಎಂದು ಖಾಸಿಂ ಸಾಬ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...