ಹುಬ್ಬಳ್ಳಿ ಬಾಲಕಿ ಕೊಲೆ ಆರೋಪಿಯ ಶವ ಅನಾಥ; ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು

Date:

ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಫೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.

ಹುಬ್ಬಳ್ಳಿಯ ಕೆಎಂಸಿಆರ್​​ಐ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿರುವ ರಿತೇಶಕುಮಾರ ಶವವನ್ನು ಗುರುತಿಸಲು ಆತನ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಂದಿಲ್ಲ. ಹೀಗಾಗಿ, ಪೊಲೀಸರು ಫೋಟೋ ಸಹಿತ ಪ್ರಕಟಣೆ ಹೊರಡಿಸಿದ್ದಾರೆ.

ಆರೋಪಿಯು ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ‘ಓಂ ನಮಃ ಶಿವಾಯ ಜಯ ಸಂಜಯ’ ಎಂಬ ಟ್ಯಾಟೂ ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

ಆರೋಪಿ ರಿತೇಶ ಪೊಲೀಸ್ ವಿಚಾರಣೆ ವೇಳೆ ತಾನು ಬಿಹಾರದ ಪಾಟ್ನಾ ನಿವಾಸಿ ಎಂದು ಹೇಳಿದ್ದ. ಆದರೆ ಇಲ್ಲಿಯವರೆಗೂ ಆತನ ಮನೆಯವರಿಗೆ ಸುದ್ದಿ ತಲುಪಿಸಲು ಆಗಿಲ್ಲ. ಕುಟುಂಬಸ್ಥರನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈತನ ಫೋಟೋ ಮತ್ತು ಕೃತ್ಯದ ಬಗ್ಗೆ ಬಿಹಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೂ ಮಾಹಿತಿ ರವಾನೆ ಮಾಡಲಾಗಿದೆ. ಅಲ್ಲಿಂದ ಏನಾದರೂ ಸುದ್ದಿ ಬರಬಹುದು ಎಂದು ಹುಬ್ಬಳ್ಳಿ ಪೊಲೀಸರು ಕಾಯುತ್ತಿದ್ದಾರೆ.

ಇದರ ಮಧ್ಯೆ ಪೊಲೀಸರ ಮತ್ತೊಂದು ತಂಡ ಬಿಹಾರದ ಪಾಟ್ನಾಗೆ ತೆರಳಿ ಆರೋಪಿಯ ವಿಳಾಸ ಪತ್ತೆ ನಡೆಸುತ್ತಿದೆ. ಇಲ್ಲಿಯೂ ಕೂಡ ಅಶೋಕನಗರ ಠಾಣೆ ಪೊಲೀಸರು ಆರೋಪಿ ಸ್ನೇಹಿತರು, ಪರಿಚಯಸ್ಥರನ್ನು ಗುರುತಿಸಿ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...