ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ, ಸಾಂತ್ವನ ಹೇಳಿದರು.
ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ಪರಿಸ್ಥಿತಿ ಹಾಗೂ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದು ಉತ್ತಮ ಆರೈಕೆ ಒದಗಿಸಲು ಸೂಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸ್ವಾತಂತ್ರ್ಯ ದೊರೆತು 80 ವರ್ಷಗಳಾದರೂ ಜಾತಿ ವ್ಯವಸ್ಥೆ ಇಂದಿಗೂ ಆಚರಣೆಯಲ್ಲಿರುವುದು ಖೇದಕರ ಮತ್ತು ಸಮಾಜದಲ್ಲಿ ಸಮಾನತೆ ಹಾಗೂ ಮನುಷ್ಯತ್ವದ ಮೇಲುಗೈ ಸಾಧಿಸಬೇಕಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ: ಗ್ರಾ.ಪಂ ಪಿಡಿಒ ನಾಗರಾಜ ಗಿರಿಯಪ್ಪ ಅಮಾನತು
“ಘಟನೆಯ ಬಳಿಕ ಪೊಲೀಸರು ಸರಿಯಾದ ಸಮಯಕ್ಕೆ ಸ್ಥಳಕ್ಕೆ ತೆರಳಿದ ಕಾರಣ ದೊಡ್ಡ ಅನಾಹುತ ತಪ್ಪಿದೆ” ಎಂದರು.
ಈ ವೇಳೆ ಶಾಸಕ ಎನ್ ಎಚ್ ಕೋನರಡ್ಡಿ, ಇನ್ನಿತರರು ಇದ್ದರು.





