ಹುಬ್ಬಳ್ಳಿ | ಸಾಲ ಪಾವತಿಸದ ರೈತ ಮಹಾದೇವಪ್ಪಗೆ ಬ್ಯಾಂಕ್​ ಸಿಬ್ಬಂದಿ ಕಿರುಕುಳ, ಸಾವು

Date:

ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್​ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ ಮೃತ ರೈತ.

ಒಂದು ವಾರದ ಹಿಂದೆ ಹುಬ್ಬಳ್ಳಿ ಕಿಮ್ಸ್‌ಗೆ ಮಹಾದೇವಪ್ಪ ಜಾವೂರ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ನ. 2ರಂದು ಮೃತಪಟ್ಟಿದ್ದಾರೆ. ಸದ್ಯ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮೃತ ರೈತನ ಕುಟುಂಬಸ್ಥರು ದೂರು‌ ನೀಡಿದ್ದು, ಕೆವಿಜಿ ಬ್ಯಾಂಕ್‌ ಮ್ಯಾನೇಜರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮಹಾದೇವಪ್ಪ 2015ರಲ್ಲಿ ಕೆವಿಜಿ ಬ್ಯಾಂಕ್‌ನಿಂದ 14.5ಲಕ್ಷ ರೂ. ಬೆಳೆ ಸಾಲ ಪಡೆದಿದ್ದರು. ಆದರೆ, ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರಲಿಲ್ಲ. ಬೆಳೆ ಸಾಲದಡಿ ಅನುಮತಿ ಇಲ್ಲದೆ ಮತ್ತೊಂದು ಖಾತೆಯಲ್ಲಿದ್ದ 1.4 ಲಕ್ಷ ರೂ.ಗಳನ್ನು ಬ್ಯಾಂಕ್​ ಮುಟ್ಟುಗೋಲು ಹಾಕಿಕೊಂಡಿದ್ದ ಬ್ಯಾಂಕ್‌ ಸಿಬ್ಬಂದಿ, ಪ್ರತಿನಿತ್ಯ ಜಾವೂರ ಮನೆಗೆ ತೆರಳಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಹೀಗೆ ಅಕ್ಟೋಬರ್‌ 28ರಂದು ಬ್ಯಾಂಕ್ ಸಿಬ್ಬಂದಿ ಜತೆ ಮಾತನಾಡುತ್ತಿರುವಾಗಲೇ ಮಹಾದೇವಪ್ಪ ಮೂರ್ಛೆ ಹೋಗಿ ಬಿದ್ದಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನ. 2ರಂದು ರೈತ ಮಹಾದೇವಪ್ಪ ಮೃತಪಟ್ಟಿದ್ದು, ಧಾರವಾಡದ ಕೆವಿಜಿ ಬ್ಯಾಂಕ್‌ಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದರು. ರೈತರನ್ನು ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ನಂತರ ರೈತರು ಕೆವಿಜಿ ಬ್ಯಾಂಕ್ ಪ್ರಧಾನ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ಸಾಲ ಮರುಪಾವತಿಗೆ ಕೆವಿಜಿ ಬ್ಯಾಂಕ್ ಮೊರಬ ಶಾಖೆಯ ಮ್ಯಾನೇಜರ್‌ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ಬ್ಯಾಂಕ್ ಮ್ಯಾನೇಜರ್ ಭೇಟಿಗೆ ಮಹಾದೇವಪ್ಪ ತೆರಳಿದ್ದರು. ಈ ವೇಳೆ ಮಹಾದೇವಪ್ಪ ಜೊತೆ ಮ್ಯಾನೇಜರ್ ಅನುಚಿತ ವರ್ತನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಮಹಾದೇವಪ್ಪ ಕುಟುಂಬಸ್ಥರು ಸೂಕ್ತ ಪರಿಹಾರ ಮತ್ತು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...