ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

Date:

  • ಪ್ರಮುಖ ಪಟ್ಟಣ, ನಗರಗಳ ಪ್ರವೇಶ ದ್ವಾರಗಳಲ್ಲಿ ಚೆಕ್‌ಪೋಸ್ಟ್‌ ಆರಂಭ
  • ತೇಗೂರು ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 53 ಲಕ್ಷ ರೂ. ವಶ

ಚುನಾವಣೆ ಸಂದರ್ಭದಲ್ಲಿ ಲೆಕ್ಕಕ್ಕೆ ಸಿಗದ ಹಣ, ಅಕ್ರಮ ಮದ್ಯ ಮತ್ತು ಉಚಿತ ಸಾಮಗ್ರಿಗಳ ಹರಿವನ್ನು ತಡೆಯಲು ಧಾರವಾಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದಿದೆ.

ಜಿಲ್ಲೆಯಲ್ಲಿ ಏಳು ಪೊಲೀಸ್ ಚೆಕ್ ಪೋಸ್ಟ್‌ಗಳು ಮತ್ತು ಐದು ಜಂಟಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.

“ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಸಿಬ್ಬಂದಿ ಇರಲಿದ್ದು, ಜಂಟಿ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್, ಕಂದಾಯ, ಆರ್‌ಟಿಒ, ವಾಣಿಜ್ಯ ತೆರಿಗೆ, ಅಬಕಾರಿ ಮತ್ತು ಇತರ ಇಲಾಖೆಗಳ ಸಿಬ್ಬಂದಿ ಇರುತ್ತಾರೆ. ಅವರು ಜಿಲ್ಲೆಯ ಪ್ರಮುಖ ಪಟ್ಟಣಗಳು ಮತ್ತು ನಗರಗಳ ಪ್ರವೇಶ ದ್ವಾರಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಅವರ ಸ್ಥಳವು ಕಾಲಕಾಲಕ್ಕೆ ಬದಲಾಗುತ್ತದೆ” ಎಂದು ಎಸ್‌ಪಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚೆಕ್‌ಪೋಸ್ಟ್‌ಗಳ ಮೂಲಕ ಹಾದುಹೋಗುವ ವಾಹನಗಳನ್ನು ಪರಿಶೀಲಿಸಲು ಈಗಾಗಲೇ ಸಿಬ್ಬಂದಿಗಳು ಕಾರ್ಯ ಪ್ರಾರಂಭಿಸಿದ್ದು, ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಶುಕ್ರವಾರ ರಾತ್ರಿ ತೇಗೂರು ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 53 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ಅಧಿಕೃತವಾಗಿ ಚುನಾವಣೆಗಳನ್ನು ಘೋಷಿಸಿದ ನಂತರ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುವುದು. ಬಳಿಕ ಈ ಅಭಿಯಾನವನ್ನು ತೀವ್ರಗೊಳಿಸಲಾಗುವುದು” ಎಂದು ಎಸ್‌ಪಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ…

“ಅಬಕಾರಿ ನಿಯಮಗಳು ವೈಯಕ್ತಿಕ ಬಳಕೆಗಾಗಿ ಹಲವು ಬ್ರಾಂಡ್‌ಗಳ ಮದ್ಯವನ್ನು ಸಾಗಿಸಲು ನಿರ್ದಿಷ್ಟ ಪ್ರಮಾಣವನ್ನು ಸೂಚಿಸುತ್ತವೆ. ನಿಗದಿತ ಪ್ರಮಾಣದ ಮಿತಿಯನ್ನು ಮೀರಿದ್ದರೆ, ಅಂತಹ ಸರಕನ್ನು ವಶಪಡಿಸಿಕೊಕೊಳ್ಳಲಾಗುತ್ತದೆ” ಎಂದು ಎಸ್‌ಪಿ ಸ್ಪಷ್ಟಪಡಿಸಿದರು.

“ಮುಕ್ತ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಚುನಾವಣೆಗೆ ಅಧಿಸೂಚನೆ ಹೊರಡಿಸಿದ ನಂತರ, ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಚೆಕ್‌ಪೋಸ್ಟ್‌ ಸಿಬ್ಬಂದಿ ಹದ್ದಿನಂತೆ ಕಣ್ಣಿಡುತ್ತಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಸಿವಿಜಿಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಸಾರ್ವಜನಿಕರಿಗೆ ಅಧಿಕಾರ ನೀಡಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿರುವುದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...