ಮಾದಿಗ ಸಮುದಾಯಕ್ಕೆ ಒಳಮೀಸಲಾತಿಗೆ ಒತ್ತಾಯ; ನ.18ರಂದು ಹೈದರಾಬಾದ್ ಚಲೋ

Date:

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೆ ಒತ್ಥಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್‌ ಸಂಘಟನೆಯು ನವೆಂಬರ್ 18ರಂದು ಹೈದರಾಬಾದ್‌ ಚಲೋಗೆ ಕರೆ ಕೊಟ್ಟಿದೆ. ಚಲೋಗೆ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟವು ಬೆಂಬಲ ನೀಡುತ್ತದೆ ಎಂದು ಒಕ್ಕೂಟದ ಸಂಚಾಲಯ ಮಂಜುನಾಥ ಕೊಂಡಪಲ್ಲಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಡೆಯ ಅಧಿವೇನವು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಯಲಿದೆ. ಆ ವೇಳೆ, ಒಳ ಮೀಸಲಾತಿ ಜಾರಿ ಬಗ್ಗೆ ಚರ್ಚಿಸಿ ಅಂಗೀಕರಿಬೇಕೆಂದು ಒತ್ತಾಯಿಸಿ ಮಾದಿಗ ದಂಡೋರ MRPS ನವೆಂಬರ್ 18ರಂದು ಹೈದರಾಬಾದ್ ಚಲೋಗೆ ಕರೆಕೊಟ್ಟಿದೆ. ಈಗಾಗಲೇ ಅಕ್ಟೋಬರ್ 7ರಿಂದ ತೆಲಂಗಾಣದ ಆಲಂಪುರದಿಂದ ಹೈದರಾಬಾದ್‌ಗೆ 250 ಕಿ.ಮೀ ‘ವಿಶ್ವರೂಪ ಮಹಾ ಪಾದಯಾತ್ರೆ’ ಆರಂಭಿಸಿದೆ. ನವೆಂಬರ್ 18ರಂದು ಹೈದರಾಬಾದ್‌ನಲ್ಲಿ ಮಾದಿಗರ ‘ವಿಶ್ವರೂಪ ಬೃಹತ್ ಸಮಾವೇಶ’ ನಡೆಯಲಿದೆ” ಎಂದು ಅವರು ತಿಳಿಸಿದ್ದಾರೆ.

“ಕರ್ನಾಟಕದಲ್ಲಿ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕೆಂದು ‘ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟ’ ಮತ್ತು ಹಲವಾರು ಹೋರಾಟಗಾರರು ಹೋರಾಟ ನಡೆಸಿದ್ದರು. ಕಳೆದ ಜನವರಿಯಲ್ಲಿ ಒಕ್ಕೂಟವು ಹುಬ್ಬಳ್ಳಿಯಲ್ಲಿ 68 ದಿನಗಳ ಅನಿರ್ಧಿಷ್ಠಾವಧಿಯ ಧರಣಿ ಸತ್ಯಾಗ್ರಹ ನಡೆಸಿತ್ತು. ಎಲ್ಲರ ಹೋರಾಟದ ಫಲವಾಗಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ ತಿಂಗಳಿನಲ್ಲಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ. ಒಳಮೀಸಲಾತಿ ಪ್ರಸ್ತಾವನೆ ಬಗ್ಗೆ ಕೇಂದ್ರವು ಚರ್ಚಿಸಿ, ಜಾರಿಗೊಳಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂದಕೃಷ್ಣ ಮಾದಿಗ ಅವರು ಸುಪ್ರೀಂ ಕೋರ್ಟಿನಲ್ಲಿ ಒಳಮೀಸಲಾತಿಗಾಗಿ ಸಲ್ಲಿಸಿದ್ದ ಪಿಟಿಷನ್ ಅರ್ಜಿಯನ್ನು ಕಳೆದ ವಾರ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗೆ ಪರಿಗಣಿಸಿದೆ” ಎಂದು ತಿಳಿಸಿದ್ದಾರೆ.

“ಒಳಮೀಸಲಾತಿ ಹೋರಾಟಕ್ಕೆ ಮತ್ತಷ್ಟು ಬಲ ತುಂಬಲು ಹೈದರಾಬಾದ್ ಚಲೋಗೆ ಕರೆಕೊಡಲಾಗಿದ್ದು,  ದೇಶದ ಮೂಲೆ ಮೂಲೆಗಳಿಂದ ಅಂದಾಜು 25-30 ಲಕ್ಷ ಜನ ಹೈದರಾಬಾದ್‌ನಲ್ಲಿ ಒಂದೆಡೆ ಸೇರಲಿದ್ದಾರೆ. ಉತ್ತರ ಕರ್ನಾಟಕದ ವಿವಿಧ ಮೂಲೆಗಳಿಂದಲೂ ಮಾದಿಗ ಸಮುದಾಯ ಮತ್ತು ಮಾದಿಗ ಉಪಜಾತಿಗಳ ಸಮುದಾಯಗಳ ಜನರು ಸಮಾವೇಶಕ್ಕೆ ತೆರಳಲಿದ್ದಾರೆ” ಎಂದು ಅವರು ತಳಿಸಿದ್ದಾರೆ.

ಈ ವೇಳೆ, ಹಿರಿಯ ಮುಖಂಡ ಜಯರಾಮ ಜನ್ನಿ, ಪ್ರಕಾಶ ಹುಬ್ಬಳ್ಳಿ, ಗಂಗಾಧರ ಪೇರೂರು, ದುರ್ಗಪ್ಪ ಪೂಜಾರ, ಗೋವಿಂದ ಬಂಡಮೀದಪಲ್ಲಿ, ಸೋಮಶೇಖರ ಸಾಕೆ, ಪ್ರಕಾಶ ಕನಮಕ್ಕಲ, ಸಿ ವಿ ಸ್ವಾಮಿ, ಕುಲ್ಲಾಯಪ್ಪ ಮಂತ್ರಿ, ರಾಜೇಶ ಮಂತ್ರಗಾರ, ಗೋಪಾಲ ದೊಡ್ಡಮನಿ, ಮಲ್ಲಪ್ಪ ದೇವಸುರ, ಸತ್ಯನಾರಾಯಣ ಎಂ, ಶ್ರೀಕಾಂತ ಮದರಕಲ್ಲ ಇನ್ನೂ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...