ಧಾರವಾಡ | ಅತ್ಯಲ್ಪ ಪರಿಹಾರದಿಂದ ಅಸಮಾಧಾನ; ರಸ್ತೆಗೆ ಬೃಹತ್ ‘ಹಂಪ್‌’ ಹಾಕಿದ ಮಾಲೀಕ

Date:

ರಸ್ತೆ ನಿರ್ಮಾಣಕ್ಕೆ ಜಮೀನು ಸ್ವಾಧೀನಕ್ಕಾಗಿ ಅತ್ಯಲ್ಪ ಪರಿಹಾರ ನೀಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದ ನಿವೃತ್ತ ಅಂಚೆ ನೌಕರರೊಬ್ಬರು ತಮ್ಮ ಜಮೀನಿನ ಬಳಿ ರಸ್ತೆಗೆ ಕಡಿದಾದ ‘ಹುಬ್ಬ’ (ಹಂಪ್‌) ನಿರ್ಮಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾಡವಾಡದ ಸತ್ತೂರು ಬಡಾವಣೆಯ ನಿವಾಸಿ ನಾಗಪ್ಪ ಮಹಾದೇವಪ್ಪ ಅರವಾಳದ್‌ ಅವರು ರಸ್ತೆಗೆ ಕಡಿದಾದ ಹಂಪ್‌ ನಿರ್ಮಿಸಿದ್ದಾರೆ. ತಮ್ಮ ಜಮೀನಿನ ಮೂಲಕ ವಾಹನಗಳು ತೆರಳದಂತೆ ಅಡ್ಡಿಪಡಿಸಲು ಹಂಪ್‌ ನಿರ್ಮಿಸಿದ್ದಾರೆ ಎಂದು ತಿಳಿದುಬಂದಿದೆ.

ದಶಕಗಳ ಹಿಂದಿನ ಜಮೀನು ಬೆಲೆ ಆಧರಿಸಿ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆಂದು ಆರೋಪಿಸಿದ್ದ ನಾಗಪ್ಪ ರಸ್ತೆಗಾಗಿ ತಮ್ಮ ಜಮೀನು ಬಿಟ್ಟುಕೊಡಲು ನಿರಾಕರಿಸಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದಿನ ಮಾರುಕಟ್ಟೆ ಬೆಲೆಯನ್ನು ನೀಡದೆ, ಜಮೀನಿನ ಮೂಲ ಬೆಲೆಗೆ ಅನುಗುಣವಾಗಿ ಪರಿಹಾರ ನೀಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಅವರು 20 ವರ್ಷಗಳ ಹಿಂದೆ ನೀಡುತ್ತಿದ್ದ ಸಂಬಳವನ್ನು ಈಗ ಪಡೆಯುತ್ತಾರೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಸುಮಾರು 1,090 ಚದರ ಅಡಿ ವಿಸ್ತೀರ್ಣದ ಭೂಮಿಯನ್ನು ರಸ್ತೆ ನಿರ್ಮಾಣಕ್ಕೆ ನೀಡಲು ನಿರಾಕರಿಸಿದ್ದ ಮಹಾದೇವಪ್ಪ, “ನನ್ನ ಭೂಮಿಯಲ್ಲಿ ರಸ್ತೆ ನಿರ್ಮಿಸುವ ಹಕ್ಕು ಅಧಿಕಾರಿಗಳಿಗೆ ಇಲ್ಲ” ಎಂದು ಹೇಳಿದ್ದಾರೆ.

”ನಮ್ಮ ಗಡಿ ಕಲ್ಲನ್ನು ಕಿತ್ತು, ರಸ್ತೆ ಹಾಕುವ ಮುನ್ನ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ಪರಿಹಾರದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಸ್ತೆ ನಿರ್ಮಾಣಕ್ಕಾಗಿ ನಾನು ಒಟ್ಟು ಒಂದು ಗುಂಟಾ ಭೂಮಿಯನ್ನು ಕಳೆದುಕೊಳ್ಳುತ್ತಿದ್ದೇನೆ. ಪ್ರಸ್ತುತ ಮಾರುಕಟ್ಟೆ ಮೌಲ್ಯದ ಪ್ರಕಾರ ನಾವು ಪರಿಹಾರಕ್ಕೆ ಬೇಡಿಕೆಯಿಟ್ಟಿದ್ದೇವೆ,’’ ಎಂದು ನಾಗಪ್ಪ ಹೇಳಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಪಾಲಿಕೆ ಆಯುಕ್ತರು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಗಪ್ಪ ಅವರೊಂದಿಗೆ ಸಂಧಾನಕ್ಕೆ ಯತ್ನಿಸಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಸೂಕ್ತ ಪರಿಹಾರ ದೊರೆಯದ ಕಾರಣ, ನಾಗಪ್ಪ ಅವರು ಹಂಪ್‌ ನಿರ್ಮಿಸಿದ್ದಾರೆ ಎಂದು ಹೇಳಲಾಗಿದೆ.

“ಕಡಿದಾದ ಹಂಪ್‌ ನಿರ್ಮಿಸಿರುವುದರಿಂದ ಯಾವುದೇ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಸ್ಥಳೀಯರಿಗೆ ನೆರವಾಗಬೇಕು” ಎಂದು ಸತ್ತೂರು ಬಡಾವಣೆ ನಿವಾಸಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...