ಮಸೀದಿಯಲ್ಲಿ ಗಣಪತಿ ಕೂರಿಸುತ್ತೇವೆ, ಈದ್ಗಾ ಪಾಕಿಸ್ತಾನದ ಆಸ್ತಿ ಅಲ್ಲ: ಯತ್ನಾಳ್, ಮುತಾಲಿಕ್ ದ್ವೇಷ ಭಾಷಣ

Date:

ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಈ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆದರೆ, ಅವರು ಸಾಬರಿಗೆ ಹುಟ್ಟಿದಂತೆ, ಈ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದ್ವೇಷ ಬಿತ್ತುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದಂದು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್‌ ಅವಕಾಶ ನೀಡಿತ್ತು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನೂ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆದಿದೆ. ಮೆರವಣಿಗೆಗೂ ಮುನ್ನ ಈದ್ಗಾ ಮೈದಾನದಲ್ಲಿ ಮಾತನಾಡಿರುವ ಯತ್ನಾಳ್ ಕೋಮು ದ್ವೇಷ ಬಿತ್ತುವ ಹೇಳಿಕೆಗಳನ್ನು ನೀಡಿದ್ದಾರೆ.

“ಹುಬ್ಬಳ್ಳಿಯ ಈದ್ಗಾ ಮೈದಾನ ಯಾರಪ್ಪನ ಆಸ್ತಿ ಅಲ್ಲ. ಅಂಜುಮನ್ ಆಸ್ತಿ ಅಲ್ಲಾ, ಪಾಕಿಸ್ತಾನದ ಆಸ್ತಿ ಅಲ್ಲ. ರಾಜ್ಯದ ವಕ್ಫ್ ಆಸ್ತಿ. ಇದನ್ನು ಸರ್ಕಾರದ ವಶಕ್ಕೆ ಪಡೆಯಲು ಹೋರಾಡುತ್ತಿದ್ದೇವೆ. ಮುಂದೆ ಇದೇ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ” ಎಂದು ಪ್ರಚೋದನಾಕಾರಿ ಮಾತುಗಳನ್ನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗುತ್ತಾರೆ. ಆಗ ಪಾಕಿಸ್ತಾನದ ಲಾಹೋರ್​ನಲ್ಲೂ ಗಣಪತಿ ಮೂರ್ತಿ ಕೂರಿಸುತ್ತೇವೆ. ಇಲ್ಲಿ ರಾಷ್ಟ್ರಧ್ವಜ ಹಾರಿಸಲು ಈ ಮಕ್ಕಳ ಅನುಮತಿ ಬೇಕಂತೆ. ನಾವು ಚಂದ್ರನ ಮೇಲೆ ರಾಷ್ಟ್ರಧ್ವಜ ಹಾರಿಸಿ ಬಂದಿದ್ದೇವೆ” ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಗಣೇಶ ಕೂರಿಸುತ್ತೇವೆ – ಕೋಮು ಸಾಮರಸ್ಯ ಕದಡುವ ಹೇಳಿಕೆ ನೀಡಿದ ಮುತಾಲಿಕ್

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ನಡೆದಿದೆ. ಈಗ ಈದ್ಗಾ ಮೈದಾನ ಶುದ್ದಿಯಾಗಿದೆ. ಅಂಜುಮನ್ ಕಮಿಟಿಯವರು ನೀಚರು. ಹಿಂದೂ ಸಮಾಜವನ್ನು ಕೆಣಕಿದರೆ ನಾವು ಮಸೀದಿಯಲ್ಲಿ ಗಣಪತಿ ಕೂರಿಸುತ್ತೇವೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕೋಮ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ.

“ಅಂಜುಮನ್ ಕೋರ್ಟ್​ಗೆ ಹೋಗುತ್ತೇವೆ ಅನ್ನೋದು ಸರಿ ಅಲ್ಲ. ನಿಮ್ಮ ಸೊಕ್ಕು ಸರಿ ಅಲ್ಲ. ಇದೇನು ಪಾಕಿಸ್ತಾನ ಅಲ್ಲ, ಅಫಘಾನಿಸ್ತಾನ ಅಲ್ಲ. ಇದು ನಮ್ಮ ನೆಲ, ಮೈದಾನ ಪಾಲಿಕೆ ಆಸ್ತಿ” ಎಂದು ಮುತಾಲಿಕ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...