ಸಿಎಂ ಆಗಿದ್ದ ಕುಮಾರಸ್ವಾಮಿ, ಬೊಮ್ಮಾಯಿಗೆ ಕಾವೇರಿ ನೀರಿನ ಹಂಚಿಕೆ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ: ಲಕ್ಷ್ಮಣ್‌ ಪ್ರಶ್ನೆ

Date:

  • ಅಣೆಕಟ್ಟಿನ ಗೇಟ್‌ ತೆರೆಯುವ ಅಧಿಕಾರ ಕೇಂದ್ರ ಸರ್ಕಾರದ ಬಳಿ ಇದೆ
  • ‘ಕುಮಾರಸ್ವಾಮಿ ಪ್ರಶ್ನಿಸಬೇಕಿರುವುದು ನಮ್ಮನ್ನಲ್ಲ, ಬಿಜೆಪಿಯನ್ನು’

ಎಚ್‌ ಡಿ ಕುಮಾರಸ್ವಾಮಿ ಎರಡು ಸಲ ಮತ್ತು ಬಸವರಾಜ ಬೊಮ್ಮಾಯಿ ಒಂದು ಸಲ ಮುಖ್ಯಮಂತ್ರಿಗಳಾಗಿದ್ದವರು. ಆದರೂ ಕಾವೇರಿ ನೀರಿನ ವಿಚಾರದ ಬಗ್ಗೆ ಇವರಿಗೆ ಕನಿಷ್ಠ ಜ್ಞಾನವಿಲ್ಲವೇ? ನಮ್ಮ ಕಾಡ (ಕಾವೇರಿ ನೀರಾವರಿ ನಿಗಮ) ಅವರ ಕೆಲಸ ಕೇವಲ ನಾಲೆಗಳಿಗೆ ನೀರನ್ನು ಹರಿಸುವ, ಹಂಚಿಕೆ ಮಾಡುವ ಕೆಲಸ. ಮುಖ್ಯ ಅಣೆಕಟ್ಟಿನ ಗೇಟ್‌ ತೆರೆಯುವ ಅಧಿಕಾರ ಕೇಂದ್ರ ಸರ್ಕಾರದ ಬಳಿ ಇದೆ. ಇದು ಗೊತ್ತಿಲ್ಲವೇ ಮಾಜಿ ಮುಖ್ಯಮಂತ್ರಿಗಳಿಗೆ? ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ಕುಟುಕಿದ್ದಾರೆ

ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಜಲ ಆಯೋಗ ಅಂತ ಇದೆ. ಅದರ ನಿರ್ದೇಶನದ ಮೇರೆಗೆ ಈ ಪ್ರಾಧಿಕಾರ ಕೆಲಸ ಮಾಡುತ್ತದೆ. ಕೆಆರ್‌ಎಸ್‌ ಅಣೆಕಟ್ಟಿನಲ್ಲಿ ಸುಮಾರು 114 ಗೇಟ್‌ಗಳಿವೆ. ಮೊದಲು ಗೇಟ್‌ ಅನ್ನು ಮ್ಯಾನುಯಲ್‌ ಆಗಿ ತೆರೆಯಬೇಕಿತ್ತು, ಒಂದು ವರ್ಷದ ಹಿಂದೆ ಇದನ್ನು ಬದಲಾಯಿಸಲಾಗಿದೆ. ದೆಹಲಿಯಲ್ಲಿ ಇದರ ನಿಯಂತ್ರ ಇದೆ” ಎಂದರು.

“ಆಗಸ್ಟ್‌ 16 ನೇ ತಾರೀಖು ಕೇಂದ್ರ ಜಲ ಸಂಪನ್ಮೂಲ ಸಚಿವರ ಸಮ್ಮುಖದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಎಂಜಿನಿಯರ್‌ಗಳ ಸಭೆ ನಡೆಸಿದರು, ನಾವು ನೀರು ಕಡಿಮೆ ಇದೆ ಎಂದು ಹೇಳಿದೆವು, ಅವರು ಸಭೆ ಬಹಿಷ್ಕಾರ ಮಾಡಿ ಹೋದರು. ನೇರವಾಗಿ ಸುಪ್ರೀಂ ಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿದರು. ಈ ಅರ್ಜಿ ಸೋಮವಾರದ ಒಳಗೆ ವಾದ- ವಿವಾದಕ್ಕೆ ಬರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ ತುರ್ತು ಆದೇಶ

“ಕರ್ನಾಟಕ-ತಮಿಳುನಾಡು- ಪಾಂಡಿಚೇರಿಗೆ ನೀರನ್ನು ಹರಿಸಬೇಕು. ಆಗಸ್ಟ್‌ 31ನೇ ತಾರೀಖಿನ ತನಕ ದಿನನಿತ್ಯ 10 ಸಾವಿರ ಕ್ಯೂಸೆಕ್ಸ್‌ ನೀರನ್ನು ಹರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಒಂದು ತುರ್ತು ಆದೇಶ ನೀಡಿದೆ. ಆನಂತರ ನಾವು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

“ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದ್ದಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಸುಮ್ಮನೇ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟಿನ ಅಂತಿಮ ತೀರ್ಮಾನ ಏನಿದೆ ಎಂದು ವಿವರಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ ಸೋತ ನಂತರವೂ ಗೂಂಡಾ ರಾಜಕಾರಣ ಬಿಡದ ಬಿಜೆಪಿ: ರಮೇಶ್‌ ಬಾಬು ವಾಗ್ದಾಳಿ

“2018 ಮಾರ್ಚ್‌ ತಿಂಗಳಲ್ಲಿ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಅಂತಿಮ ತೀರ್ಮಾನ ನೀಡಿತು. ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರಮುಖ ನಾಲ್ಕು ಅಣೆಕಟ್ಟುಗಳಿವೆ ಹಾರಂಗಿ, ಕಬಿನಿ, ಹೇಮಾವತಿ, ಕೃಷ್ಣರಾಜ ಇವುಗಳು ಸಂಪೂರ್ಣವಾಗಿ ಕಾವೇರಿ ವಾಟರ್‌ ಮಾನಿಟರಿಂಗ್‌ ಅಥಾರಿಟಿ ಕೈಯಲ್ಲಿ ಇದ್ದು ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಬಳಿ ಇಲ್ಲ” ಎಂದು ವಿವರಿಸಿದರು.

ಕೇಂದ್ರದಿಂದ ಕರ್ನಾಟಕ ವಿರೋಧಿ ನಡೆ

“ಕೇಂದ್ರ ಸರ್ಕಾರ ಇದಕ್ಕೆ ಒಂದು ತಂಡ ಕಳಿಸಬೇಕು, ಪರಿಶೀಲಿಸಬೇಕು, ತಮಿಳುನಾಡಿನ ಸರ್ಕಾರ ಕರ್ನಾಟಕದ ವಿರುದ್ದ ಕೋರ್ಟಿಗೆ ಹೋಗಿಲ್ಲ, ಕೇಂದ್ರ ನೀರಾವರಿ ಪ್ರಾಧಿಕಾರದ ವಿರುದ್ಧ ಹೋಗಿರುವುದು, ಇದನ್ನು ಸರಿಯಾಗಿ ತಿಳಿದುಕೊಳ್ಳದೆ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ಮೇಲೆ ಆರೋಪ ಮಾಡಿದರೆ ಏನು ಲಾಭ? ಇದರ ವಿರುದ್ದ ತಕ್ಷಣ ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಸಬೇಕಾಗಿತ್ತು. ಆದರೆ ಮಾಡಿಲ್ಲ, ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ಧೋರಣೆ” ಎಂದು ವಾಗ್ದಾಳಿ ನಡೆಸಿದರು.

“ಕುಮಾರಸ್ವಾಮಿ ಅವರು ಯಾವಾಗ ಯಾರ ಪರ ಮಾತನಾಡುತ್ತಾರೆ ಎನ್ನುವುದು ಆ ದೇವರಿಗೆ ಗೊತ್ತು. ಕುಮಾರಸ್ವಾಮಿ ಅವರೇ ಟ್ವೀಟ್‌ ಮಾಡುವ ಮೊದಲು ಪರಿಶೀಲಿಸಿ ಮಾತನಾಡಿ, ನೀವು ಬಿಜೆಪಿಗೆ ಪ್ರಶ್ನಿಸಬೇಕು, ನಮ್ಮನ್ನಲ್ಲ. ಬಿಜೆಪಿ ಪರವಾಗಿ ಏಕೆ ಮಾತನಾಡುತ್ತಿದ್ದೀರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...