ದಿಗಂತ್ ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಭರತ್ ಶೆಟ್ಟಿ, ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

Date:

ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ ಬಳಿದು, ರಾಜ್ಯದಲ್ಲಿ ಕೋಮುದ್ವೇಷ ಹರಡಲು ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್‌ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬ್ಡೇಲು ಯತ್ನಿಸಿದ್ದಾರೆ. ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಅವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಬೇಕು ಎಂದು ಜನಪರ ಸಂಘಟನೆಗಳು ಒತ್ತಾಯಿಸಿವೆ.

ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿರುವ ಡಿವೈಎಫ್‌ಐ, ಎಸ್‌ಎಫ್‌ಐ ಹಾಗೂ ಜನವಾದಿ ಮಹಿಳಾ ಸಂಘಟನೆಗಳ ಮುಖಂಡರು, ಕರಾವಳಿಯಲ್ಲಿ ಸಂಭವಿಸುವ ಎಲ್ಲ ಪ್ರಕರಣಗಳಿಗೂ ಕೋಮುಬಣ್ಣ ಬಳಿದು, ಕೋಮುದ್ವೇಷ ಪ್ರಚೋದಿಸುವ ಬಿಜೆಪಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ಕರಾವಳಿ ಭಾಗವು ಕೋಮು ಸೂಕ್ಷ್ಮ ಪ್ರದೇಶವಾಗಿದೆ. ಆದರೆ, ವಿದ್ಯಾರ್ಥಿ ದಿಗಂತ್‌ನ ನಾಪತ್ತೆ ಪ್ರಕರಣಕ್ಕೆ ಕೋಮು ಆಯಾಮ ಕೊಟ್ಟು ಶಾಸಕರಾದ ಭರತ್ ಶೆಟ್ಟಿ ಮತ್ತು ಹರೀಶ್‌ ಪೂಂಜಾ ಸೇರಿದಂತೆ ಹಲವರು ದ್ವೇಷ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ. ಪ್ರಚೋದನಾಕಾರಿ ಭಾಷಣ ಮಾಡಿದವರ ವಿರುದ್ಧ ಯಾಕೆ ಪ್ರಕರಣ ದಾಖಲಾಗಿಲ್ಲ ಎಂಬುದಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮು ದ್ವೇಷ ಬಿತ್ತುವವರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಆದರೆ, ಸರ್ಕಾರ ರಚಿಸಿದ ಬಳಿಕ, ತನ್ನ ಭರವಸೆಗಳನ್ನು ಕಾಂಗ್ರೆಸ್‌ ಮರೆತಿದೆಯೇ ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ವರದಿ ಓದಿದ್ದೀರಾ?: ‘ಸಾಬರ ಬಜೆಟ್’ ಎಂದವರಿಗೆ ನಮ್ಮ ಹಳ್ಳಿಗಳ ಆರ್ಥಿಕ ಚಲನಶೀಲತೆಯ ಅರ್ಥ ಗೊತ್ತಿದೆಯೇ?

ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಬಿ.ಕೆ.ಇಮ್ತಿಯಾಜ್‌, ”ವಿದ್ಯಾರ್ಥಿ ದಿಗಂತ್ ನಾಪತ್ತೆಯಾದ ಸಮಯದಲ್ಲಿ ಜನಪ್ರತಿನಿಧಿಗಳಾದ ಶಾಸಕರು ವಿದ್ಯಾರ್ಥಿಯ ಕುಟುಂಬಸ್ಥರಿಗೆ ಧೈರ್ಯ ತುಂಬಬೇಕಾಗಿತ್ತು. ಆದರೆ, ಭರತ್ ಶೆಟ್ಟಿ ಮತ್ತು ಹರೀಶ್‌ ಪೂಂಜಾ ಫರಂಗಿಪೇಟೆ ಮತ್ತು ಅಮ್ಮೆಮಾರ್ ಪ್ರದೇಶದಲ್ಲಿರುವ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದರು. ಕೋಮುದ್ವೇಷದ ಪ್ರಚೋದನೆಗೆ ಯತ್ನಿಸಿದರು. ಇಂತಹವರು ಶಾಸಕರಾಗಲು ನಾಲಾಯಕ್” ಎಂದು ಆಕ್ರೋಶ ವ್ಯಕ್ತಪಡಿಸಿರು.

“ಬಿಜೆಪಿ ಶಾಸಕರ ಆಧಾರರಹಿತ ಆರೋಪಗಳು ಮುಸ್ಲಿಂ ಸಮುದಾಯವನ್ನು ಘಾಸಿಗೊಳಿಸಿವೆ. ಬಿಜೆಪಿ ಶಾಸಕರು ಮುಸ್ಲಿಮರಲ್ಲಿ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್‌ ಮಾತನಾಡಿ, “ವಿದ್ಯಾರ್ಥಿ ಪತ್ತೆಯಾದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಮೌನಕ್ಕೆ ಜಾರಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಅವರು ಜನರ ಎದುರು ಬೆತ್ತಲಾಗಿದ್ದಾರೆ. ಅವರ ಬಂಡವಾಳ ಬಯಲಾಗಿದೆ. ತಮ್ಮದು ಜಾತ್ಯತೀತ ಸರ್ಕಾರ ಎಂದು ಕೇಳಿಕೊಳ್ಳುವ ಕಾಂಗ್ರೆಸ್‌ ಸರ್ಕಾರ ಸಮುದಾಯಗಳ ನಡುವೆ ದ್ವೇಷ ಬಿತ್ತುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಖಜಾಂಚಿ ಮನೋಜ್ ವಾಮಂಜೂರು, ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ವಿನುಷ ರಮಣ, ಡಿವೈಎಫ್ಐ ಮುಖಂಡ ರಿಜ್ವಾನ್ ಹರೇಕಳ, ರಜಾಕ್ ಮುಡಿಪು, ನವೀನ್ ಕೊಂಚಾಡಿ, ತಯ್ಯೂಬ್ ಬೆಂಗರೆ, ಜಗದೀಶ್ ಬಜಾಲ್, ಜೆಎಂಎಸ್‌ನ ಭಾರತೀ ಬೋಳಾರ, ಪ್ರಮೀಳಾ, ಅಸುಂತ ಡಿಸೋಜ, ಯೋಗಿತಾ, ಅಮ್ಮೆಮಾರ್ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹನೀಫ್, ಬಶೀರ್ ತಂಡೇಲ್, ವಿ.ಎಚ್ ಕರೀಂ, ಹೈದರ್ ಅಮ್ಮೆಮಾರ್,‌ ಅಶ್ರಫ್ ಅಸ್ರ, ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಮುಜಾಫರ್, ನೌಷದ್ ಕಣ್ಣೂರು, ಪಾಲಿಕೆ ಮಾಜಿ ಸದಸ್ಯ ದಯಾನಂದ ಶೆಟ್ಟಿ, ಶೇಖರ್ ಕುಂದರ್, ಆಸೀಫ್ ಬಂದರು, ನೌಶದ್ ಬೆಂಗರೆ, ಯೋಗೀಶ್ ಜಪ್ಪಿನಮೊಗರು, ಅನ್ಸಾರ್ ಫೈಸಲ್ ನಗರ, ರಫೀಕ್ ಪಿ.ಜಿ, ಮುಹಾಝ್ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...