RO ಘಟಕಗಳಿಗೆ ಡಿಜಿಟಲ್‌ ರೂಪ; ಬೆಂಗಳೂರಿನ ಕಿಯೋಸ್ಕ್‌ಗಳಲ್ಲಿ QR ಕೋಡ್ ಪಾವತಿ ಸೌಲಭ್ಯ

Date:

ಹಲವು ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಿಸುತ್ತಿರುವ ಬೆಂಗಳೂರು ನಗರವಾಸಿಗಳು ನೀರಿಗಾಗಿ ಅವಲಂಬಿಸಿರುವ RO ಕಿಯೋಸ್ಕ್ಗಳ ವ್ವಯಸ್ಥೆಯಲ್ಲಿ ಮಹತ್ತರ ಬದಲಾವಣೆಯೊಂದು ಆಗಿದೆ. ಮೊದಲು 20 ಲೀಟರ್ ನೀರಿಗಾಗಿ 5 ರೂ. ನಾಣ್ಯಗಳನ್ನು ಹಾಕಬೇಕಾಗಿತ್ತು. ಈಗ Bengaluru Water Supply and Sewerage Board (BWSSB) ಸಹಾಯದಿಂದ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಹಣ ಪಾವತಿಸಿ ನೀರು ಪಡೆಯಬಹುದಾಗಿದೆ.

ಪ್ರದೇಶಗಳಲ್ಲಿ RO ಕಿಯೋಸ್ಕ್‌ಗಳನ್ನು ಅಳವಡಿಸಿ ನೀರು ಪೂರೈಕೆ ಮಾಡುತ್ತಿದ್ದರೂ ಅವುಗಳ ನಿರ್ವಹಣೆಯಲ್ಲಿ ಹಲವು ಲೋಪದೋಷಗಳಿದ್ದವು. ಹಲವು ಕಿಯೋಸ್ಕ್ಗಳು ಕಾರ್ಯ ರ್ನಿಹಿಸುತ್ತಲೇ ಇರಲಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಬಳಿಕ 1184 RO ಘಟಕ​ಗಳನ್ನು BWSSB ಸುಪರ್ದಿಗೆ ಒಪ್ಪಿಸಲಾಗಿತ್ತು. ಈಗ ಈ ಮಂಡಳಿ ಎಲ್ಲಾ ಕಿಯೋಸ್ಕ್‌ಗಳನ್ನು ಸ್ವಾವಲಂಬಿ ಘಟಕಗಳನ್ನಾಗಿ ನವೀಕರಿಸಿದ್ದು, ಡಿಜಿಟಲ್ ಕಿಯೋಸ್ಕ್‌ಗಳೆಂದು ಮರುನಾಮಕರಣ ಮಾಡಿದೆ.

ಈ ಹೊಸ ವ್ಯವಸ್ಥೆಯಲ್ಲಿ, 5 ರೂ. ನಾಣ್ಯ ಹಾಕುವ ಅವಶ್ಯಕತೆ ಇಲ್ಲ. ಬಳಕೆದಾರರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ, ನೇರವಾಗಿ BWSSBಗೆ ಹಣ ಪಾವತಿಸಿ, ನೀರು ತುಂಬಿಸಿಕೊಳ್ಳಬಹುದು. ಸ್ಮಾರ್ಟ್‌ಫೋನ್ ಇಲ್ಲದವರು BWSSB ಸರ್ವಿಸ್ ಸೆಂಟರ್‌ಗಳಿಗೆ ಹೋಗಿ, ಮೊದಲಿಗೆ ಹಣ ಪಾವತಿಸಿ ಕಾರ್ಡ್ ಪಡೆಯಬಹುದು. ಬಳಿಕ ಅದನ್ನು ಸ್ವೈಪ್ ಮಾಡಿ ನೀರು ತುಂಬಿಸಿಕೊಳ್ಳಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಡಿಜಿಟಲ್ ಘಟಕ​ಗಳನ್ನು ಸರ್ಕಾದಿಂದ ದೂರವಿಟ್ಟಿರುವ ಸರಬರಾಜು ಮಂಡಳಿ, ನಿರ್ವಹಣೆಯನ್ನು ಗುತ್ತಿಗೆದಾರರಿಗೆ ವಹಿಸಿದೆ. ಅಲ್ಲದೆ, ಬರುವ ಆದಾಯದ 60ರಷ್ಟು ಭಾಗವನ್ನು ಗುತ್ತಿಗೆದಾರರಿಗೆ ನೀಡುವುದಾಗಿ ಹೇಳಿದೆ. ಮೊದಲಿಗೆ BBMP ಘಟಕ​ಗಳು ನಿರ್ವಹಣೆ ಮಾಡುತ್ತಿದ್ದಾಗ ಹಣಕಾಸು ವ್ಯವಹಾರದ ಯಾವ ದಾಖಲೆಗಳೂ ಇರಲಿಲ್ಲ. ಸರಬರಾಜು ಮಾಡುತ್ತಿದ್ದ ನೀರು ಸಹ ಕಳಪೆ ಗುಣಮಟ್ಟದ್ದಾಗಿತ್ತು. ಘಟಕಗಳ ಒಳಗಿದ್ದ ಫಿಲ್ಟರ್​ಗಳನ್ನು ಬದಲಾಯಿಸದೇ ತಿಂಗಳುಗಟ್ಟಲೆ ಇಡಲಾಗುತ್ತಿತ್ತು. ಇದನ್ನೆಲ್ಲ ಗಮನಿಸಿದ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...