ಮದ್ದೂರು | ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯ: ಪಿಡಿಓ ಪೂರ್ಣಿಮಾ

Date:

ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯವಾದದ್ದು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿ
ಪಿಡಿಒ ಪೂರ್ಣಿಮಾ ತಿಳಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ಗೊರವನಹಳ್ಳಿ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಗ್ರಂಥಾಲಯ ಪಿತಾಮಹ ಎಸ್ ಆರ್ ರಂಗನಾಥನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ಮೊಬೈಲ್ ನೊಡುವ ಗೀಳು ಬೆಳೆಸಿಕೊಳ್ಳದೆ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅಧ್ಯಯನ ಶೀಲವ್ಯಕ್ತಿಯ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ” ಎಂದು ಹಿತ ನುಡಿಗಳನ್ನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241122 WA0047 1

“ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಸರ್ಕಾರದ ಆಸಕ್ತಿಯ ಫಲವಾಗಿ ಅರಿವು ಕೇಂದ್ರಗಳಾಗಿ ಪರಿವರ್ತನೆ ಮಾಡಲಾಗಿದೆ. ಈ ಅರಿವು ಕೇಂದ್ರಗಳು ನಾಗರಿಕರು, ರೈತರು, ಸ್ವಸಹಾಯ ಸಂಘದ ಸದಸ್ಯರುಗಳಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ ಸೇರಿದಂತೆ ಜೀವನೊಪಾಯ ಚಟುವಟಿಕೆ ಕುರಿತು ವೃತ್ತಿ ತತ್ಸಂಬಂಧಿತ ಕುಶಲತೆ ಕುರಿತು ಮಾಹಿತಿ ನೀಡುತ್ತವೆ. ಜೊತೆಗೆ ಕೃಷಿ ಹಾಗೂ ಹವಾಮಾನ ವರದಿ, ಆಧುನಿಕ ಬೇಸಾಯ ಪದ್ದತಿಯ ಕುರಿತು ಅರಿವು ಮೂಡಿಸುವ ಚಟುವಟಿಕೆ ನಡೆಸಲಿದೆ”0 ಎಂದರು.

“ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಮಾಹಿತಿಯೂ ಈ ಡಿಜಿಟಲ್ ಲೈಬ್ರರಿಯಲ್ಲಿ ಲಭ್ಯವಿದೆ. ಗ್ರಾಮೀಣ ಜನರ ಬದುಕು ಹಸನಾಗಿಸುವಲ್ಲಿ ಶ್ರಮಿಸಲಿವೆ. ಗ್ರಂಥಾಲಯ ಸಪ್ತಾಹದ ಮೂಲಕ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

“ವಿದ್ಯಾರ್ಥಿಗಳು ಶ್ರದ್ದೆಯಿಂದ ಅಧ್ಯಯನ ಮಾಡುತ್ತ ಗ್ರಂಥಾಲಯದ ಉಪಯುಕ್ತತೆ ಪಡೆದುಕೊಳ್ಳಿ. ಬದುಕಿನಲ್ಲಿ ಇಂತಹ ಮಹನೀಯರ ಪ್ರೇರಣೆಯೊಂದಿಗೆ ಸಾಧನೆಯ ಹಾದಿಯಲ್ಲಿ ಯಶಸ್ಸು ಸಾಧಿಸಬಹುದಾಗಿದೆ” ಎಂದರು

ಅರಿವು ಕೇಂದ್ರದ ಮೇಲ್ವಿಚಾರಕ ಚನ್ನಸಂದ್ರ ವಿವೇಕ್, ರಾಷ್ಟ್ರಕವಿ ಕುವೆಂಪು, ದ ರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ ಕೃ ಗೊಕಾಕ್‌ರ ಪರಿಚಯ ಮಾಡಿಸುತ್ತ, ಅವರ ಕೃತಿಗಳ ಪರಿಚಯ ಮಾಡಿಕೊಟ್ಟರು.

ಗೊರವನಹಳ್ಳಿ ಅರಿವು ಕೇಂದ್ರದಲ್ಲಿ ನಡೆದ ಗ್ರಂಥಾಲಯ ಸಪ್ತಾಹದ ಈ ಕಾರ್ಯಕ್ರಮದಲ್ಲಿ ಗೊರವನಹಳ್ಳಿ ಶಾಲೆಯ ಮಕ್ಕಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...