ಚಾಮರಾಜನಗರ | ಜನನ, ಮರಣ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ : ಶಿಲ್ಪಾ ನಾಗ್ ಸೂಚನೆ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾಗರಿಕ ನೊಂದಣಿ ಪದ್ದತಿಯಡಿ ಜಿಲ್ಲಾ ಮಟ್ಟದ ಜನನ, ಮರಣಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ ಜಿಲ್ಲೆಯಲ್ಲಿ ಜನನ, ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಡಿಜಿಟಲೀಕರಣಗೊಳಿಸಲು ಕ್ರಮ ವಹಿಸುವಂತೆ ‘ ಅಧಿಕಾರಿಗಳಿಗೆ ಸೂಚನೆ ನೀಡಿದರು.

” ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶಕ್ಕಾಗಿ ಹಾಗೂ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರಿಗೆ ಜನನ ಪ್ರಮಾಣ ಪತ್ರಗಳು ಅತ್ಯಾವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಾಕಷ್ಟು ವರ್ಷಗಳಿಂದ ಲಭ್ಯವಿರುವ ಜನನ, ಮರಣ ಪತ್ರಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಅಲ್ಲದೆ, ದಾಖಲೆಗಳನ್ನು ಮುಂದಿನ ಆರು ತಿಂಗಳೊಳಗೆ ಡಿಜಿಟಲೀಕರಣಗೊಳಿಸುವಂತೆ ” ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾನ್ಯವಾಗಿ ಜನನ ಪ್ರಮಾಣ ಪತ್ರಗಳನ್ನು 21 ದಿನದೊಳಗೆ ನೀಡಬೇಕಾಗಿದೆ. ಜನನ, ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ನಮ್ಮ ಜಿಲ್ಲೆಗೆ ಸಂಬಂಧಿಸಿದ ಜನನ ಮರಣ ಪತ್ರಗಳು ಬೇರೆ ಜಿಲ್ಲೆಗಳಲ್ಲಿದ್ದರೂ ಅದನ್ನು ತರಿಸಿಕೊಳ್ಳುವ ಕೆಲಸವಾಗಬೇಕು. ಸಂಬಂಧಿಸಿದ ತಾಲ್ಲೂಕು ಕಚೇರಿಗಳಲ್ಲಿ, ತಾಲ್ಲೂಕುವಾರು ಹಾಗೂ ವರ್ಷಾವಾರು ದಾಖಲೆಗಳನ್ನು ಸಂಗ್ರಹಿಸಿಡುವ ಕಾರ್ಯ ಆದ್ಯತೆ ಮೇರೆಗೆ ಆಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶಿಷ್ಟ ಪಂಗಡಗಳ ಆದಿವಾಸಿ ಜನರು ವಾಸಿಸುವ ಜಿಲ್ಲೆಯ ಹಾಡಿ, ಪೋಡುಗಳಲ್ಲಿನ ಮಕ್ಕಳಿಗೆ ಜನನ ಪ್ರಮಾಣ ಪತ್ರಗಳನ್ನು ನಿಗದಿತ ಕಾಲ ಮಿತಿಯಲ್ಲಿ ನೀಡಬೇಕು. ಜನನ ಪ್ರಮಾಣ ಪತ್ರಗಳು ದೊರಕದೇ ಶಾಲೆಗೆ ಸೇರಲು ಸಾಧ್ಯವಾಗುತ್ತಿಲ್ಲವೆಂಬ ದೂರುಗಳು ಬರಬಾರದು. ಜನನ, ಮರಣ ಪ್ರಮಾಣ ಪತ್ರಗಳ ನೀಡುವಿಕೆ ಕುರಿತ ಮಾಹಿತಿಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಬೇಕು. ಮರಣ ಪ್ರಮಾಣ ಪತ್ರಗಳಲ್ಲಿ ಎಲ್ಲಾ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲಿಸುವಲ್ಲಿ ಗ್ರಾಮ ಆಡಳಿತ, ಅಧಿಕಾರಿಗಳು ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.

ಜನನ, ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ವಿಳಂಬಕ್ಕೆ ಅವಕಾಶವಾಗದಂತೆ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳು ಎಚ್ಚರ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಜನನ, ಮರಣ ಪ್ರಮಾಣ ಪತ್ರ ನೀಡಿಕೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಸಾಂಖ್ಯಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ದಾಖಲೆಗಳ ನಿರ್ವಹಣೆ ಸಂಬಂಧ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಪವನ್‍ ಕುಮಾರ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ. ಮಹೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...