ಹೊರಗುತ್ತಿಗೆ ನೌಕರರಿಗೂ ನೇರಪಾವತಿ ಖಚಿತ; ಪೌರಾಡಳಿತ ಸಚಿವ ರಹೀಂಖಾನ್ ಭರವಸೆ

Date:

  • ಬಜೆಟ್ ಅಧಿವೇಶನದ ಬಳಿಕ ಕುಂದುಕೊರತೆ ಸಭೆ ಆಯೋಜನೆ: ಸಚಿವ
  • ಪೌರಕಾರ್ಮಿಕರ ಖಾಯಂ ಭರವಸೆ ಪ್ರಣಾಳಿಕೆಯಲ್ಲಿ ಸೇರಿಸಿದ್ದ ಕಾಂಗ್ರೆಸ್‌

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸುವುದು ಖಚಿತ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಭರವಸೆ ನೀಡಿದರು.

ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಸಚಿವರೊಂದಿಗಿನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಸ ಸಾಗಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು ನಿಜವಾದ ದುಡಿಮೆಗಾರರಾಗಿದ್ದಾರೆ. ಕಸ ಗುಡಿಸುವ ಪೌರಕಾರ್ಮಿಕರನ್ನು ನೇರಪಾವತಿ ಅಡಿಗೆ ತಂದು ಇನ್ನುಳಿದ ಕಸ ಸಾಗಿಸುವ ಚಾಲಕರು, ನೀರು ಸರಬರಾಜು ಸಹಾಯಕರನ್ನು ಗುತ್ತಿಗೆ ಪದ್ದತಿಯಲ್ಲೇ ಉಳಿಸಿರುವುದು ತಾರತಮ್ಯದ ಕ್ರಮವಾಗಿದೆ. ಈ ನೌಕರರನ್ನು ನೇರಪಾವತಿ ವ್ಯವಸ್ಥೆಗೆ ತರುವ ಸಂಬಂದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜೆಟ್ ಅಧಿವೇಶನದ ನಂತರ ಅಧಿಕಾರಿಗಳು ಮತ್ತು ಸಂಘದ ಪ್ರತಿನಿಧಿಗಳೊಂದಿಗೆ ಕುಂದುಕೊರತೆ ಸಭೆ ಆಯೋಜಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ನೌಕರರೊಂದಿಗೆ ಸಂವಾದ ನಡೆಸಿದ ಸಚಿವ

ನೌಕರರೊಂದಿಗೆ ಸಚಿವರು ಸಂವಾದ ನಡೆಸಿದರು. ಈ ವೇಳೆ ಹಾವೇರಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಸ್ವಕ್ಷೇತ್ರ ಶಿಗ್ಗಾಂವಿಯ ಸವಣೂರು ಪುರಸಭೆಯ ಹೊರಗುತ್ತಿಗೆ ನೌಕರರಿಗೆ 22ತಿಂಗಳಿನಿಂದ ವೇತನ ಪಾವತಿಸದಿರುವುದು, ರಾಮನಗರ ಜಿಲ್ಲೆಯಲ್ಲಿ ಪೌರಕಾರ್ಮಿಕರ ನೇಮಕಾತಿ ಪಟ್ಟಿ ಪ್ರಕಟವಾಗಿದ್ದರೂ ನೇಮಕಾತಿ ಆದೇಶ ನೀಡದ ಕುರಿತು ಹಾಗೂ ಹಲವು ಜಿಲ್ಲೆಗಳಲ್ಲಿ ಸಕಾಲಕ್ಕೆ ವೇತನ ನೀಡದೆ ಏಜೆನ್ಸಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು.

ಈ ಕುರಿತು ಶೀಘ್ರದಲ್ಲೇ ಜಿಲ್ಲಾ ಪ್ರವಾಸ ಮಾಡಿ ನೌಕರರ ಸಮಸ್ಯೆ ಇತ್ಯರ್ಥಗೊಳಿಸುವುದಾಗಿ ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿ, ಹೊರಗುತ್ತಿಗೆ ನೌಕರರ ನೇರಪಾವತಿ ಸಂಬಂಧ ಪೌರಾಡಳಿತ ಸಚಿವರಿಗೆ ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಮಾಜಿ ಸಿಎಂ ಬೊಮ್ಮಾಯಿ‌

ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್‌

ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ ಬಿ ನಾಗಣ್ಣಗೌಡ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ನೇರಪಾವತಿ ಜಾರಿಗಾಗಿ ತೀವ್ರ ಹೋರಾಟ ನಡೆಸಿದರೂ ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೂ ಮುನ್ನ ಪೌರಕಾರ್ಮಿಕರ ಖಾಯಂಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸಿತ್ತು. ಇದೇ ಕಾರಣಕ್ಕೆ ಹೊರಗುತ್ತಿಗೆ ನೌಕರರು ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಈಗ ಪ್ರಣಾಳಿಕೆಯ ಅಂಶವನ್ನು ಜಾರಿಗೊಳಿಸುವ ಬದ್ಧತೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತೋರಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ವಿರೇಶ್, ಕಲಬುರಗಿ ವಿಭಾಗ ಸಂಚಾಲಕ ಸಿದ್ದರಾಮ ಪಾಟೀಲ, ಬೆಳಗಾವಿ ವಿಭಾಗದ ರಾಜೂ ಹೊಸಮನಿ, ಬೆಂಗಳೂರು ವಿಭಾಗದ ಪುಟ್ಟಸ್ವಾಮಿ, ಕರಾವಳಿ ವಿಭಾಗದ ಅಣ್ಣಪ್ಪ ಎಂ ಎನ್ ಚಂದ್ರು, ಮಹಂತೇಶ ಸೇರಿದಂತೆ ಹಲವು ಜಿಲ್ಲೆಗಳ ನೂರಾರು ಹೊರಗುತ್ತಿಗೆ ನೌಕರರ ಮುಖಂಡರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...