ಚಿತ್ರದುರ್ಗ | ಭೋವಿ ನಿಗಮ ಬಡವರ ಬದುಕಿಗೆ ಬೆಳಕಾಗಲಿ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Date:

ಭೋವಿ ನಿಗಮ ಬಡವರ ಬದುಕಲ್ಲಿ ಬೆಳಕಾಗಲಿ, ಬಡವರ ಜೀವನಕ್ಕೆ ಆಸರೆಯಾಗಲಿ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಬೋರನಹಳ್ಳಿ ಗ್ರಾಮದ ಅಂಗವಿಕಲ ಮಕ್ಕಳನ್ನು ಹೊಂದಿರುವ ಹುಲುಗಮ್ಮ ಕೋಂ ಚಂದ್ರಪ್ಪ ಕುಟುಂಬಕ್ಕೆ ಭೋವಿ ನಿಗಮದಿಂದ ಮಂಜೂರಾದ ಮೂರು ಲಕ್ಷ ಸಹಾಯಧನದ ಕಾರ್ಯಾದೇಶ ವಿತರಿಸಿ ಮಾತನಾಡಿದರು.

ಕಣ್ಣು, ಬಾಯಿ, ಮೂಗುಗಳ ಕಾರ್ಯನಿರ್ವಹಣೆ ಇಲ್ಲದೇ ಅಂಗವೈಕಲ್ಯಕ್ಕೆ ತುತ್ತಾಗಿರುವ ಮಕ್ಕಳ ಪೋಷಣೆಗಾಗಿ ಪೋಷಕರಿಗೆ ಅಭಿವೃದ್ಧಿ ನಿಗಮದಿಂದ ಸಹಾಯಧನ ನೀಡಿ ಅಂಗಡಿ ನಡೆಸುವ ಮೂಲಕ ಕುಟುಂಬ ಸಾಗಿಸಲು ತುಂಬಾ ಸಹಕಾರಿಯಾಗಲಿದೆ. ಇಂತಹ ಕುಟುಂಬಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಗುರುತಿಸಿ ನಿಗಮದಿಂದ ಸೌಲಭ್ಯ ಕಲ್ಪಿಸಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 15 at 5.05.49 PM

ಅಲೆಮಾರಿ ಕುಟುಂಬ ವ್ಯವಸ್ಥೆ ಭೋವಿ- ಒಡ್ಡರದಾಗಿದೆ, ಜೀವನಕ್ಕಾಗಿ ಅಲೆಯುವ ಕುಟುಂಬಗಳಿಗೆ ನಿಗಮದ ಯೋಜನೆಗಳು ಆಸರೆಯಾಗಬೇಕು. ಬಡ ಕುಟುಂಬಗಳು ವಲಸೆ ಜೀವನ ಬಿಟ್ಟು ಒಂದೆಡೆ ಸೇರಿ ಜೀವನ ನಡೆಸುವಂತಾಗಬೇಕೆಂದು ತಿಳಿಸಿದರು.

ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ಮಾತನಾಡಿ, “ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಶ್ರೀಗಳು ಇಂತಹ ಕುಟುಂಬಗಳನ್ನು ಗುರುತಿಸಿ ತಿಳಿಸಿದಾಗ ಸೇವೆ ಮಾಡಲು ಸಾಧ್ಯವಾಗುತ್ತದೆ, ಬಡವರ ಪರವಾಗಿ ನಿಗಮ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಶ್ಲಾಘಿಸಿದರು.

ಕತ್ತಲೆಯಲ್ಲಿರುವವರಿಗೆ ಬೆಳಕು ತೋರಿಸುವಂತಹ ಕಾರ್ಯ ಮಾಡುತ್ತಿದ್ದೇವೆ, ಬಡಕುಟುಂಬದಲ್ಲಿ ಈ ರೀತಿಯಾದ ಅಂಗವೈಕಲ್ಯ ಮಕ್ಕಳು ಇದ್ದಾಗ ಅವರ ಬದುಕಿನ ಬಗ್ಗೆ ಪೋಷಕರು ಹೆಚ್ಚು ತಲೆ ಕೆಡಿಸಿಕೊಳ್ಳುತ್ತಾರೆ. ಆದರೆ ಆರ್ಥಿಕ ಸಂಕಷ್ಟದಿಂದ ಏನನ್ನು ಮಾಡಲು ಆಗುವುದಿಲ್ಲ, ಅಂತಹವರ ಕೈಹಿಡಿಯುವ ಕೆಲಸ ನಿಗಮ ಮಾಡುತ್ತದೆ. ನಿಗಮದಿಂದ ನೇರವಾಗಿ ಅವರಿಗೆ ಮೂರು ಲಕ್ಷ ರೂ.ಗಳ ಸಹಾಯಧನವನ್ನು ನೀಡಲಾಗಿದೆ. ಆ ಹಣದಿಂದ ಅಂಗಡಿ ನಿರ್ವಹಿಸುವುದರ ಮೂಲಕ ಕುಟುಂಬ ಸಾಗಿಸಬೇಕು. ಇದೇ ರೀತಿ ಇತರೆ ನಿಗಮಗಳು ಸಹ ಕಾರ್ಯನಿರ್ವಹಿಸಬೇಕು. ಸಮಾಜದಲ್ಲಿ ಆರ್ಥಿಕವಾಗಿ ಸಬಲರಿರುವವರು ಸಹ ಈ ರೀತಿಯ ಕುಟುಂಬಗಳಿಗೆ ಸಹಾಯಹಸ್ಥ ನೀಡಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ: ಜಾಮೀನು ಸಿಕ್ಕ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ತಹಶೀಲ್ದಾರ್

ಭೋವಿ ಗುರುಪೀಠದಿಂದ ಕುಟುಂಬಕ್ಕೆ ಧವಸ ದಾನ್ಯಗಳನ್ನ ವಿತರಿಸಲಾಯಿತು. ಪೋಷಕರು ಮತ್ತು ಗ್ರಾಮಸ್ಥರು ಜಿಲ್ಲಾ ಭೋವಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...