ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ: ಬೆಂವಿವಿ ಕುಲಪತಿಯನ್ನು ಹಿಂತೆಗೆದುಕೊಳ್ಳಲು ಚಂದ್ರು ಪೆರಿಯಾರ್ ಆಗ್ರಹ

Date:

ವಿಶ್ವವಿದ್ಯಾನಿಲಯಗಳ ಕಾಯ್ದೆಯ ನಿಯಮಾನುಸಾರವಾಗಿ ಭಡ್ತಿಯಲ್ಲಿ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ವಂಚನೆಯಾಗುತ್ತಿದ್ದರೂ, ಬೆಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಜಯಕರ ಎಸ್.ಎಂ ಜಾತಿ ತಾರತಮ್ಯವನ್ನು ನಿರಾಕರಿಸುತ್ತಿರುವುದು ಖಂಡನೀಯ. ಸರಕಾರ ಈ ಕೂಡಲೇ ಅವರನ್ನು ಕುಲಪತಿ ಜವಾಬ್ದಾರಿಯಿಂದ ಹಿಂತೆಗೆದುಕೊಳ್ಳಬೇಕು ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಸ್ಟರ್ ನಿಯಮಗಳ ವಿರುದ್ಧವಾಗಿ ದಲಿತ ಸಮುದಾಯದ ಪ್ರತಿಭಾವಂತರನ್ನು ಕೈಬಿಟ್ಟು ಹೊರಗಡೆಯಿಂದ 5 ಜನ ಬಲಾಢ್ಯ ಜಾತಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಬೆಂವಿವಿ ಆರಂಭದಿಂದಲೂ ಒಬ್ಬೇಒಬ್ಬ ದಲಿತನೂ ಕುಲಪತಿಯಾಗಿಲ್ಲ. ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ ಎಂದು ಬೇಸರ ವ್ಯಕ್ತಪಡಿಸಿದರು.

ಕುಲಪತಿ ರಜೆಯಲ್ಲಿರುವಾಗ ಜವಬ್ದಾರಿಯನ್ನು ಹಿರಿಯ ಡೀನ್‌ಗೆ ಕೊಡಬೇಕೆನ್ನುವ ನಿಯಮ. ಆದರೆ, ಇಲ್ಲಿ ಇರುವ ಎಲ್ಲ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿದ್ದಾರೆನ್ನುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೇ, ಕುಲಸಚಿವರಿಗೆ ನೀಡಿದ್ದಾರೆ. ಇದು ಕಾನೂನು ಬಾಹಿರವಷ್ಟೇ ಅಲ್ಲದೇ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀರಕಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ ಅನುಸರಿಸಿ ಕುಲಸಚಿವರಿಗೆ ನೀಡಿದ್ದಾರೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದು, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಜೀವನ ಭದ್ರತೆ ಇಲ್ಲದೆ ಕೆಲವರು ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ. ಇಷ್ಟೆಲ್ಲ ಆದಮೇಲೆ ಕುಲಪತಿ ಅವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕೆಂದು ಚಂದ್ರು ಪೆರಿಯಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಲಕ್ನೋ ನ್ಯಾಯಾಲಯ

ರಾಜ್ಯ ಸರಕಾರಿ ಎಸ್‌ಸಿ-ಎಸ್‌ಟಿ ನೌಕರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಎಚ್.ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತ ಮಹನೀಯರು ಕೆಲಸ ಮಾಡಿದ ವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ಜಾತಿಯತೆ, ಕೋಮುವಾದ ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ೬೭ ಪ್ರಾಧ್ಯಪಕರು ಜಾತಿ ತಾರತಮ್ಯ ಆಗುತ್ತಿದೆ ಎಂದು ಸಹಿ ಮಾಡಿದರು, ಕುಲಪತಿ ಅಸಡ್ಡೆ ತೋರುತ್ತಿರುವುದು ದರುಂತ. ವಿಶ್ವವಿದ್ಯಾನಿಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಜ್ಞಾನೇಶ್ವರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...