ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ಗ್ರಾ.ಪಂಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆ ಮೇಲ್ದರ್ಜೆಗೇರಿಸುವ ವಿಚಾರವಾಗಿ ಗೆಜ್ಜಲಗೆರೆ ಗ್ರಾಮಸ್ಥರೊಂದಿಗೆ ಮದ್ದೂರು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುರಸಭೆಯನ್ನು ನಗರಸಭೆ ಮಾಡಲು ಮದ್ದೂರು ತಾಲ್ಲೂಕಿನ ನಾಲ್ಕು ಗ್ರಾ.ಪಂಗಳಾದ ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾ.ಪಂ ವ್ಯಾಪ್ತಿಯನ್ನು ನಗರಸಭೆಗೆ ಸೇರಿಕೊಳ್ಳುವ ಪ್ರಕ್ರಿಯೆ ಬಗ್ಗೆ ಕಾನೂನಿನ ಅನ್ವಯ ಕ್ರಮ ಕೈಕೊಳ್ಳುತ್ತೇವೆ. ಗ್ರಾಮಸ್ಥರ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಸಭೆ ನೆಡಸಿ ಶೀಘ್ರದಲ್ಲೇ ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

4 ಗ್ರಾಮ ಪಂಚಾಯತಿಗಳ ಗ್ರಾಮಸ್ಥರ ಜೊತೆ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ್ದೇವೆ. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಈ ವಿಶೇಷ ಸುದ್ದಿ ಓದಿದ್ದೀರಾ? ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?
ಸಭೆಯಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಕೆ. ಎಂ. ಉದಯ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾ ರಾಣಿ, ಮದ್ದೂರು ತಹಶೀಲ್ದಾರ್ ಪರುಶರಾಮ್ ಸತ್ತಿಗೇರಿ ಹಾಗೂ ಗ್ರಾಮಸ್ಥರು ಇದ್ದರು.





