ಮರ್ಯಾದೆಗೇಡು ಹತ್ಯೆ | ಜಾತಿ ವ್ಯವಸ್ಥೆಯ ಹೀನ ಮನಸ್ಥಿತಿಯ ಪ್ರತಿಫಲನ: ಸಿಎಂ ಸಿದ್ದರಾಮಯ್ಯ

Date:

  • ‘ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ’
  • ‘ಜಾತಿಗ್ರಸ್ತ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ’

ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಖಂಡಿಸಿ, ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಿದೆ” ಎಂದು ಭರವಸೆ ನೀಡಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ” ಎಂದಿದ್ದಾರೆ.

“ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...