ವಿಜಯನಗರ | ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ತುಂಡುಡುಗೆ ನಿಷೇಧ; ಭಕ್ತಿ ಭಾವ ಮೂಡಿಸಲು ಈ ಕ್ರಮ ಎಂದ ಜಿಲ್ಲಾಧಿಕಾರಿ!

Date:

ವಿಜಯನಗರ ಜಿಲ್ಲೆಯ ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ ದರ್ಶನ‌ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆದೇಶ ಹೊರಡಿಸಿದ್ದಾರೆ.

ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಪಂಚೆ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ದೇವಸ್ಥಾನದ ಆವರಣದ ಒಳಗೆ ತುಂಡುಡಿಗೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

hampi 3

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೂಪಾಕ್ಷ ದೇವಸ್ಥಾನದ ಆವರಣದ ಒಳಗೆ ತುಂಡುಡುಗೆಗೆಯ ಬದಲು, ಪಂಚೆ, ದೋತಿ, ಸೀರೆ ಇಂತಹ ಸಾಂಪ್ರದಾಯಿಕ ಉಡುಗೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಈ ಆದೇಶದ ಬೆನ್ನಲ್ಲೇ ಖುದ್ದು ಜಿಲ್ಲಾಡಳಿತ ಮತ್ತು ಜಿಲ್ಲಾಧಿಕಾರಿಗಳೇ ದೇವಸ್ಥಾನದ ಒಳಗೆ ತುಂಡುಡುಗೆ ಧರಿಸಿ ಪ್ರವೇಶಿಸುತ್ತಿದ್ದವರಿಗೆ ಲುಂಗಿ, ಪಂಚೆಯನ್ನು ತೊಡಿಸಿದ್ದಾರೆ. ವಸ್ತ್ರಸಂಹಿತೆ ಜಾರಿಗೆ ಭಕ್ತರು ಸಹಕರಿಸುವಂತೆ ಇದೇ ವೇಳೆ ಜಿಲ್ಲಾಡಳಿತ ಆಗಮಿಸುವವರಲ್ಲಿ ಮನವಿ ಮಾಡಿದೆ.

hampi vastra

“ಪ್ರವಾಸಿ ತಾಣವೂ ಆದ ಹಂಪಿಗೆ ಸಾವಿರಾರು ಮಂದಿ ವಿದೇಶಿಯರು ಸಹ ಬರುತ್ತಾರೆ. ಅವರು ಹೆಚ್ಚಾಗಿ ತುಂಡು ಉಡುಗೆಯಲ್ಲಿ ಬರುತ್ತಿದ್ದು, ಇದರಿಂದ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಹೀಗಾಗಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ಮಹಿಳೆಯರು ಸಹ ತುಂಡುಡುಗೆಯಲ್ಲಿ ಬಂದರೆ ಮೈಮೇಲೆ ಶಲ್ಯ ತೊಡಬೇಕಾಗಿದೆ. ಕೊಡುವ ವಸ್ತ್ರಕ್ಕೆ ಸದ್ಯ ಶುಲ್ಕ ಪಡೆಯುತ್ತಿಲ್ಲ. ದೇವರ ದರ್ಶನ ಮಾಡಿದ ಬಳಿಕ ವಸ್ತ್ರವನ್ನು ವಾಪಸ್‌ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ ಶಾಸಕ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

“ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ, ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಜಿಲ್ಲಾಡಳಿತವು ಈ ವಿಶೇಷ ಕ್ರಮ ವಹಿಸಿದೆ” ಎಂದು ಜಿಲ್ಲಾಧಿಕಾರಿ ವಸ್ತ್ರ ಸಂಹಿತೆ ಜಾರಿಗೊಳಿಸಿರುವುದಕ್ಕೆ ಸಮರ್ಥನೆ ನೀಡಿದ್ದಾರೆ. ಹಂಪಿ‌ ವಿರೂಪಾಕ್ಷ ದೇವಸ್ಥಾನವು ಮುಜರಾಯಿ ಇಲಾಖೆಯ ವ್ಯಾಪ್ತಿಗೂ ಒಳಪಟ್ಟಿದೆ.

ಪ್ರವಾಸಿಗರಿಗೆ ಲುಂಗಿ, ಪಂಚೆ ಉಚಿತ ವಿತರಣೆ ಮಾಡುತ್ತಿದ್ದ ವೇಳೆ ಶಾಸಕ ಗವಿಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...